Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಶಿಕ್ಷಕರ ಹಿತ ಕಾಯಲು ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಗೆಲ್ಲಿಸಿ: ಟಿ.ರಘುಮೂರ್ತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > ಶಿಕ್ಷಕರ ಹಿತ ಕಾಯಲು ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಗೆಲ್ಲಿಸಿ: ಟಿ.ರಘುಮೂರ್ತಿ
ರಾಜಕೀಯ

ಶಿಕ್ಷಕರ ಹಿತ ಕಾಯಲು ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಗೆಲ್ಲಿಸಿ: ಟಿ.ರಘುಮೂರ್ತಿ

Editor Nammajana
Last updated: 18 May 2024 14:42
By Editor Nammajana 2 Min Read
Share
SHARE

Chitradurga news | nammajana.com | 18-5-2024 

ನಮ್ಮಜನ.ಕಾಂ, ಚಳ್ಳಕೆರೆ: ಜನಪರ ಆಡಳಿತದ ಮೂಲಕ ಕಾಂಗ್ರೆಸ್ (congress) ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು ಜಾರಿಯಾಗಲು ಮೇಲ್ಮನವಿಯಲ್ಲಿ ಪಕ್ಷದ ಬಹುಮತ ಇರಬೇಕು ಎಂದು ಶಾಸಕ ಟಿ. ರಘುಮೂರ್ತಿ (‌‌‌T. Raghumurthy) ಹೇಳಿದರು.
ಚಳ್ಳಕೆರೆ ನಗರದ ಗೊಲ್ಲರ ಹಾಸ್ಟೆಲ್ ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಕಾಂಗ್ರೆಸ್ ಬೆಂಬಲಿಸಿ: ರಘುಮೂರ್ತಿ (T. Raghumurthy)ಕರೆ

ಶಿಕ್ಷಕರ ಬೇಡಿಕೆಯಂತೆ ಒಪಿಎಸ್ ಜಾರಿ ಮಾಡಲು ಮತ್ತು 7ನೇ ವೇತನ ಆಯೋಗದ ಸಿದ್ದತೆ ಸರ್ಕಾರದ ಚಿಂತನೆಯಾಗಿದೆ. ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ವಲಯ ಅಭಿವೃದ್ದಿಯಾಗಬೇಕಿದೆ.
ಶೈಕ್ಷಣಿಕ ಕಾರ್ಯಕ್ರಮಗಳಾಗಿ ಬಿಸಿಯೂಟ, ಶೂ ಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ವಿದ್ಯಾರ್ಥಿಗಳ ಶಿಕ್ಷಣ ಪ್ರಗತಿ ಮತ್ತು ದಾಖಲಾತಿ ಹೆಚ್ಚಳಕ್ಕೆ ಅನೇಕ ಯೋಜನೆಗಳನ್ನು ಜಾರಿ ಮಾಡಿರುವ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ.
ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ನಮ್ಮ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ (DT Srinivas)ಬೆಂಬಲಿಸಿ ಮತದಾನ ಮಾಡಿದರೇ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರವಾಗಲಿದ್ದು  ಎಂದು ಮನವಿ ಮಾಡಿದರು.

ಬಿಜೆಪಿ ಸರ್ಕಾರದಿಂದ ಶಿಕ್ಷಕರಿಗೆ ನ್ಯಾಯ ಸಿಗಲಿಲ್ಲ: ಪೂರ್ಣಿಮಾ ಶ್ರೀನಿವಾಸ್ ವಾಗ್ದಾಳಿ

ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ ಎನ್‌ಪಿಎಸ್ ರದ್ದು ಮಾಡಬೇಕೆಂದು ಫ್ರೀಡಮ್ ಪಾರ್ಕ್ ನಲ್ಲಿ  ಶಿಕ್ಷಕರು ಪ್ರತಿಭಟನೆ ನಡೆಸಿ ಆತ್ಮಹತ್ಯೆಗೆ ಪ್ರಯತ್ನಿಸಿದರು ಸಹ ಕಳೆದ ಬಿಜೆಪಿ ಸರ್ಕಾರದಲ್ಲಿ ನ್ಯಾಯ ಸಿಗಲಿಲ್ಲ.
ಬಿಜೆಪಿ ಸರ್ಕಾರ ಶಿಕ್ಷಕರ ಪ್ರತಿಭಟನೆ ಸ್ಥಳಕ್ಕೂ ಸಹ ಬಂದು ತಿರುಗಿ ನೋಡುವ ಸೌಜನ್ಯ ಸಹ ತೋರಲಿಲ್ಲ. ಆದರೆ ಈಗ  ಶಿಕ್ಷಕರ ಮತ ಕೇಳಲು ಮುಂದಾಗಿದೆ,
ಎನ್‌ಪಿಎಸ್ ರದ್ದುಪಡಿಸಲು ಮತ್ತು 7ನೇ ವೇತನ ಜಾರಿ ಮಾಡಲು 2ನೇ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರು ಸಿದ್ದತೆ ಮಾಡಿಕೊಂಡಿದ್ದಾರೆ ಎಂದರು.
ಶಿಕ್ಷಣ ವ್ಯವಸ್ಥೆಯನ್ನು ಸಮಾನವಾಗಿ ಕಾಣಬೇಕಿದೆ. ಕಳೆದ ಬಿಜೆಪಿ ಸರ್ಕಾರ ಮಕ್ಕಳಿಗೆ ಮೊಟ್ಟೆ ನೀಡುವಲ್ಲಿ ಜಾತಿ, ವರ್ಗ, ಬೇಧ ಮಾಡಲಾಯಿತು. ಸಾಮಾಜಿಕ ನ್ಯಾಯಬದ್ದತೆಯಲ್ಲಿ ಆಡಳಿತ ಮಾಡುವ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು. ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್
ಸ್ಪರ್ಧಿಸಲು ಅವಕಾಶವಾಗಿದೆ. ಮತದಾನ ಗೆಲ್ಲಿಸಬೇಕು ಎಂದರು.

ಸಭೆಯಲ್ಲಿ ಪಾಲ್ಗೊಂಡ ಮುಖಂಡರು

ಈ ಸಭೆಯಲ್ಲಿ  ಕೆಪಿಸಸಿ ಪ್ರಧಾನ ಕಾರ್ಯದರ್ಶಿ ನೆರ‍್ಲಗುಂಟೆ ರಾಮಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾ ರವಿಕುಮಾರ್  ಬಾಲರಾಜ್, ಟಿ. ಶಶಿಕಲಾ ಸುರೇಶ್‌ಬಾಬು, ಸದಸ್ಯ ಜಿ.ಟಿ. ಬಾಬುರೆಡ್ಡಿ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿಟಿ.ಶಶಿಧರ, ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ವೀರಭದ್ರಯ್ಯ, ನಿವೃತ್ತಿ ಪ್ರಾಂಶುಪಾಲ ಬಿ.ವಿ.ಸಿರಿಯಣ್ಣ,
ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಟಿ. ವೀರಭದ್ರಸ್ವಾಮಿ, ಎಲ್.ರುದ್ರಮುನಿ, ದೊಡ್ಡಯ್ಯ, ಸೂರನಾಯಕ,, ಗುರುಲಿಂಗಪ್ಪ, ಸಿ.ಟಿ.ವೀರೇಶ್, ಇಂಡಸ್ ವ್ಯಾಲಿ ಚಿಕ್ಕಣ್ಣ, ಮಾರುತಿ, ಅನ್ವರ್, ಮಾಸ್ಟರ ಬಿ.ವಿ. ಸಿರಿಯಪ್ಪ, ಬ್ಯಾಂಕ್ ಸೂರಯ್ಯ, ಮೂಡಲಗಿರಿಪ್ಪ, ಪ್ರಭುಸ್ವಾಮಿ, ತಿಪ್ಪೇರುದ್ರಪ್ಪ, ಸಿದ್ದಲಿಂಗಪ್ಪ ಮತ್ತಿತರರು ಇದ್ದರು.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Chitradurga BJP ಗೆ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಕುಮಾರಸ್ವಾಮಿ ನೇಮಕ

TAGGED:CampaignCandidateChallakereChitradurga NewsCongressDT SrinivasKannada Newskannada suddiMLC ElectionNammajana.comSouth East Teachers ConstituencyT Raghumurthyಅಭ್ಯರ್ಥಿಆಗ್ನೇಯ ಶಿಕ್ಷಕರ ಕ್ಷೇತ್ರಕನ್ನಡ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಟಿ ರಘುಮೂರ್ತಿಡಿ.ಟಿ.ಶ್ರೀನಿವಾಸ್ನಮ್ಮಜನ.ಕಾಂಪ್ರಚಾರವಿಧಾನ ಪರಿಷತ್ ಚುನಾವಣೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಹೊಸದುರ್ಗದಲ್ಲಿ  ವೈಭವದ ವಾಸವಿ ಜಯಂತಿ ಆಚರಣೆ
Next Article WHETHER: ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಸಹ ಮಳೆ, ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?