Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕ್ಕಿಂತ ಹೆಚ್ಚು ನೊಂದಣಿ | MP Govinda M Karajola
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕ್ಕಿಂತ ಹೆಚ್ಚು ನೊಂದಣಿ | MP Govinda M Karajola
ಇಂದಿನ ಸುದ್ದಿ

ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕ್ಕಿಂತ ಹೆಚ್ಚು ನೊಂದಣಿ | MP Govinda M Karajola

Editor Nammajana
Last updated: 20 September 2024 1:11 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now
Chitradurga news|nammajana.com|20-9-2024

ನಮ್ಮಜನ.ಕಾಂ, ಚಿತ್ರದುರ್ಗ: ದೇಶದಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿ 20 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ ರೂ.1400 ಕೋಟಿಗೂ ಹೆಚ್ಚು ಹಣವನ್ನು ಫಲಾನುಭವಿಗಳಿಗೆ ಸಬ್ಸಿಡಿ (MP Govinda M Karajola)ರೂಪದಲ್ಲಿ ಬಿಡುಗಡೆ ಮಾಡಿದೆ ಎಂದು ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.

ನಗರದ ಶಾರದ ಸಭಾ ಭವನದಲ್ಲಿ ಶುಕ್ರವಾರ ಪಿಎಂ ವಿಶ್ವಕರ್ಮ ಯೋಜನೆ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ರಾಷ್ಟ್ರೀಯ ಪಿಎಂ ವಿಶ್ವಕರ್ಮ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಹಾಗೂ ಫಲಾನುಭವಿಗಳಿಗೆ ತರಬೇತಿ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಪಿಎಂ ವಿಶ್ವಕರ್ಮ ಯೋಜನೆ ಜಾರಿಗೆ ಬಂದಾಗಿನಿಂದ ಇಲ್ಲಿಯವರೆಗೂ ಸುಮಾರು 20 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳು ನೋಂದಣಿ ಮಾಡಿಕೊಂಡಿದ್ದು, 8 ಲಕ್ಷ ಕುಶಲಕರ್ಮಿಗಳು ಉನ್ನತ ತರಬೇತಿಯನ್ನೂ ಪಡೆದಿದ್ದಾರೆ. ಈಗಾಗಲೇ 1.60 ಲಕ್ಷಕ್ಕೂ ಹೆಚ್ಚು ಜನರು ಇದರ ಲಾಭ (MP Govinda M Karajola) ಪಡೆದಿದ್ದಾರೆ.  ಕುಶಲಕರ್ಮಿಗಳಿಗೆ ರೂ.15 ಸಾವಿರ ಟೂಲ್ ಕಿಟ್ ಪ್ರೋತ್ಸಾಹವನ್ನು ಮನೆ ಬಾಗಿಲಿಗೆ ಕೊಡುವ ವ್ಯವಸ್ಥೆ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಸಾಮಾಜಿಕ ಕಳಕಳಿ ಮತ್ತು ಕಾಳಜಿಯಿಂದ ದೇಶದ  18 ವಿವಿಧ ಕ್ಷೇತ್ರಗಳ ಅಡಿಯಲ್ಲಿ ಕುಲದ ಕಸುಬು ನಂಬಿ ಜೀವನ ನಡೆಸುತ್ತಿರುವ ವರ್ಗದವರಿಗೆ ಆರ್ಥಿಕ ನೆರವು, ಸ್ವಯಂ ಉದ್ಯೋಗ, ವ್ಯಾಪಾರ ವಹಿವಾಟು (MP Govinda M Karajola) ಸೌಲಭ್ಯ ಕಲ್ಪಿಸುವ ಕಳೆದ ವರ್ಷ ಸೆ.17ರಂದು ರೂ.13 ಸಾವಿರ ಕೋಟಿ ವೆಚ್ಚದಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಅನುಷ್ಠಾನಗೊಳಿಸಿದರು.

ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಬಡಿಗೆ ವೃತ್ತಿ ಮಾಡುವವರು, ದೋಣಿ ತಯಾರಿಸುವವರು, ಕಮ್ಮಾರ ವೃತ್ತಿ ಮಾಡುವವರು, ಕಲ್ಲುಕುಟಿಗ ವೃತ್ತಿ ಮಾಡುವವರು, ಟೈಲರಿಂಗ್, ಚಾಫೆ-ಕಸ ಪೊರಕೆ ತಯಾರಕರು, ಗೊಂಬೆ ಮತ್ತು ಆಟಿಕೆ ತಯಾರಕರು, ಕ್ಷೌರಿಕ ವೃತ್ತಿ ಮಾಡುವವರು, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಹೂಮಾಲೆ (MP Govinda M Karajola) ತಯಾರಕರು, ದೋಬಿ, ಅಭರಣ ತಯಾರಕರು, ಕುಂಬಾರ ವೃತ್ತಿ ಮಾಡುವವರು, ಮೀನು ಬಲೆ ಹೆಣೆಯುವವರು, ಶಿಲ್ಪಿ, ಚಮ್ಮಾರ, ಪಾದರಕ್ಷೆ ತಯಾರಕರು, ಬೀಗ ತಯಾರಿಕಾ ಕುಶಲಕರ್ಮಿಗಳು ಸೇರಿದಂತೆ ಹೀಗೆ 18 ಬಗೆಯ ಕುಲಕಸುಬು ನಂಬಿ ಜೀವನ ನಡೆಸುವ ವಿಶ್ವಕರ್ಮ ಪಾಲುದಾರರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಈ ಕುಶಲಕರ್ಮಿಗಳಿಗೆ ವಿಶೇಷ ಯೋಜನೆ ಜಾರಿಗೆ ತರುವ ಮೂಲಕ ರೂ.3 ಲಕ್ಷದವರೆಗೂ ಸಾಲ ಕೊಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ಅದಲ್ಲದೇ 30 ತಿಂಗಳ ಅವಧಿಯೊಳಗೆ ಅತೀ ಕಡಿಮೆ ಬಡ್ಡಿಯಲ್ಲಿ ಶೇ.5 ಬಡ್ಡಿದರಲ್ಲಿ ಸಾಲ ಮರುಪಾವತಿಗೂ ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರ ಶೇ.8ರಷ್ಟು  ಬಡ್ಡಿ ಸಬ್ಸಿಡಿ ತುಂಬಲಿದೆ ಎಂದರು.

ಸರ್ಕಾರದ ಅಂಗಸಂಸ್ಥೆಯಾದ  ನಕಾಫ್ ಸಂಸ್ಥೆಯ ತರಬೇತಿ ವ್ಯವಸ್ಥಾಪಕ ಉಮಾಕಾಂತ್ ಮನ್ನಾಳೆ ಮಾತನಾಡಿ, ಪಿಎಂ ವಿಶ್ವಕರ್ಮ ಯೋಜನೆಯಡಿ ಚಿತ್ರದುರ್ಗ ನಗರದ ಅಮ್ಮ ಪಬ್ಲಿಕ್ ಶಾಲೆಯಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಮಾಲಾಕಾರ್, ಬಾಸ್ಕೆಟ್ ಮೇಕರ್, ದೋಬಿ ಸೇರಿದಂತೆ ವಿವಿಧ ಬಗೆಯ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ತರಬೇತಿ ಕೋರ್ಸ್ ನಡೆಯುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 700 ಜನರಿಗೆ ತರಬೇತಿ ನೀಡಲಾಗಿದ್ದು, ಎಲ್ಲರಿಗೂ ಶಿಷ್ಯವೇತನ ಹಾಗೂ ಟೂಲ್ ಕಿಟ್ ವಿತರಣೆ ಹಾಗೂ ಸಾಲ-ಸೌಲಭ್ಯಕ್ಕೂ ಕ್ರಮವಹಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಗಂಡ ಹೆಂಡತಿ ಕೊಲೆಗೈದ ಕಿಡಿಗೇಡಿಗಳು | Murder
ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇವಣ್ಣ ಸೇರಿದಂತೆ ವಿಶ್ವಕರ್ಮ ಯೋಜನೆಯ ಫಲಾನುಭವಿಗಳು ಇದ್ದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:20 ಲಕ್ಷ ಜನ ನೊಂದಣಿChitradurgaChitradurga NewsKannada Newskannada suddiMP Govinda M KarajolaNammajana.comPM VishwakarmaRegistration of 20 LakhsSchemeಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪಿಎಂ ವಿಶ್ವಕರ್ಮಯೋಜನೆಸಂಸದ ಗೋವಿಂದ ಎಂ ಕಾರಜೋಳ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Hosadurga Power Cut: ಹೊಸದುರ್ಗ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
Next Article ನನ್ನ ಆಡಿಯೋ ತಿರುಚಿ ಪೊಲೀಸ್ ಇಲಾಖೆಗೆ ಕೊಟ್ಟಿದ್ದಾರೆ, ನಾನು ಮುಸ್ಲಿಂ ಸಂಘಟನೆ ಜೊತೆ ಸೇರಿಲ್ಲ: ಬದರಿನಾಥ್ ಸ್ಪಷ್ಟನೆ | Chitradurga news
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?