Chitradurga news | nammajana.com | 26-8-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಚುನಾವಣೆ ಇಂದು ಬೆಳಗ್ಗೆ 10 ಗಂಟೆಗೆ ನಿಗದಿಯಾಗಿದ್ದು ಬಿಜೆಪಿ ಆಡಳಿತದಲಿದ್ದ ನಗರಸಭೆಯಲ್ಲಿ ಈಗ ಮೈತ್ರಿ ಸದ್ದು ಮಾಡುತ್ತಿದ್ದು (Municipality Election)ಬಿಜೆಪಿ ಹಿನ್ನಡೆಯಾಗುವ ಸಂಭವ ಇದೆ ಎಂಬ ಮಾತು ರಾಜಕೀಯ ವಲಯದಲ್ಲಿ ಇತ್ತು.
ಈ ಬಗ್ಗೆ ನಮ್ಮಜನ.ಕಾಂ, ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ ಅವರು ಚಿತ್ರದುರ್ಗ ನಗರಸಭೆ ಸದಸ್ಯರಿಗೆ ಬಿಜೆಪಿ ಪಕ್ಷ ವಿಪ್ ಜಾರಿ ಮಾಡಲಾಗಿದೆ ಎಂದರು. 17 ಬಿಜೆಪಿ ಸದಸ್ಯರಿಗೆ ಖುದ್ದು ಸದಸ್ಯರ ಮನೆಗಳಿಗೆ ತೆರಳಿ ವಿಪ್ ನೀಡಿದ್ದು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಅಕ್ಟೋಬರ್ 3 ರಿಂದ 13 ರವರೆಗೆ ಶರಣ ಸಂಸ್ಕೃತಿ ಉತ್ಸವ | Sarana sanskrti utsava
ರಾಜಕೀಯ ಮೇಲಾಟದಲ್ಲಿ ಏನಾದರೂ ವ್ಯತ್ಯಾಸ ಆದರು ಸಹ ಕಾನೂನು ಹೋರಟಕ್ಕೆ ಸಕಲ ಸಿದ್ದತೆ ಮಾಡಿಕೊಂಡಿದ್ದೇನೆ ಎಂದರು.
ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಪಕ್ಷದಿಂದ ತಾರಕೇಶ್ವರಿ ಮತ್ತು ಉಪಾಧ್ಯಕ್ಷ ಸ್ತಾನಕ್ಕೆ ರೋಹಿಣಿ ನವೀನ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ನಮ್ಮಜನ.ಕಾಂ ಗೆ ಮಾಹಿತಿ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252