ನಮ್ಮಜನ.ಕಾಂ.ಚಿತ್ರದುರ್ಗ: ಮಕ್ಕಳ ಮೇಲಿನ ಲೈಂಗಿಕ ಆರೋಪ ಪ್ರಕರಣದಲ್ಲಿ ಪೋಕ್ಸೋ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಕೋರ್ಟ್ ಆದೇಶದಂತೆ ಸೋಮವಾರ ಮಧ್ಯಾಹ್ನ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರಾದರು.
ಫೋಕ್ಸೋ ಪ್ರಕರಣದಲ್ಲಿ ಕಳೆದ ವರ್ಷ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಲವು ತಿಂಗಳುಗಳ ನಂತರ ಹೈಕೋರ್ಟಿನಿಂದ ಜಾಮೀನು ಪಡೆದು ಬಿಡುಗಡೆಯಾಗಿ ದಾವಣಗೆರೆ ವಿರಕ್ತ ಮಠದಲ್ಲಿ ಇದ್ದರು.
ಇದನ್ನೂ ಓದಿ: ನಾಳೆ ಚಿಕ್ಕಪ್ಪನಹಳ್ಳಿ ಕೊಟ್ರಸ್ವಾಮಿ ರಥೋತ್ಸವ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡಿದ ಹೈಕೋರ್ಟ್ ಜಾಮೀನು ಮಂಜೂರು ಪ್ರಶ್ನಿಸಿ ಸಂತ್ರಸ್ಥ ಬಾಲಕಿ ಪರ ವಕೀಲರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಶ್ರೀಗಳ ವಿರುದ್ಧ ಸಲ್ಲಿಕೆ ಆಗಿದ್ದ ಅರ್ಜಿಯನ್ನು ಏಪ್ರಿಲ್ 22 ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಒಂದು ವಾರ ಗಡುವು ನೀಡಿ ಚಿತ್ರದುರ್ಗದ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗಲು ಆದೇಶ ಹೊರಡಿಸಿತ್ತು.
ಇಂದು ಏ.29 ಸೋಮವಾರ ಮಧ್ಯಾಹ್ನ ಚಿತ್ರದುರ್ಗ ಕೋರ್ಟ್ ಗೆ ಶರಣರು ಹಾಜರಾದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252
