Chitradurga news|nammajana.com|25-7-2024
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯ ಹಿರಿಯೂರು (Navodaya school Uduvalli) ತಾಲ್ಲೂಕಿನ ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯಕ್ಕೆ 2025-26ನೇ ಸಾಲಿನ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಯ 5ನೇ ತರಗತಿ ಮಕ್ಕಳು ಅರ್ಜಿ ಸಲ್ಲಿಸಬಹುದು.
ಐದನೇ ತರಗತಿ ಪ್ರವೇಶಕ್ಕೆ ಅರ್ಜಿ
ಅಭ್ಯರ್ಥಿಗಳು 2013ರ ಜೂನ್ 1 ರಿಂದ 2015ರ ಜುಲೈ 31ರೊಳಗೆ ಜನಿಸಿರಬೇಕು. 3 ಮತ್ತು 4ನೇ ತರಗತಿ (Navodaya school Uduvalli) ಉತ್ತೀರ್ಣರಾಗಿರಬೇಕು. 2024-25 ರಲ್ಲಿ ವ್ಯಾಸಂಗ ಮಾಡುತ್ತಿದ್ದು, ಈ ಶೈಕ್ಷಣಿಕ ವರ್ಷವನ್ನು ಸಂಪೂರ್ಣವಾಗಿ ಪೂರೈಸಿರಬೇಕು.
ಗ್ರಾಮೀಣ ಪ್ರದೇಶ ಅಭ್ಯರ್ಥಿಗಳಿಗೆ 75ರಷ್ಟು ಸೀಟು
ಶಾಲೆಯ ಕನಿಷ್ಠ ಶೇ.75ರಷ್ಟು ಸೀಟುಗಳನ್ನು ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಹಾಗೂ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ (Navodaya school Uduvalli) ಮೀಸಲಾಗಿರುತ್ತವೆ. ಕನಿಷ್ಟ 1/3 ರಷ್ಟು ಸೀಟುಗಳನ್ನು ಹೆಣ್ಣುಮಕ್ಕಳಿಗೆ ಮೀಸಲಿಡಲಾಗಿದೆ.
ಸೆಪ್ಟೆಂಬರ್ 9 ರೊಳಗೆ ಅರ್ಜಿ ಸಲ್ಲಿಸಿ
ಮೀಸಲಾತಿ ಕೋಟಾದಲ್ಲಿ ಆಯ್ಕೆಯಾದ ಎಸ್.ಸಿ, ಎಸ್.ಟಿ, ಒಬಿಸಿ, ಇಡಬ್ಲ್ಯೂಸ್ ಮತ್ತು ಸಾಮಾನ್ಯ ವಿದ್ಯಾರ್ಥಿ (Navodaya school Uduvalli) ವಿದ್ಯಾರ್ಥಿನಿಯರು, ತೃತೀಯ ಲಿಂಗಿಗಳು, ನಗರ, ಗ್ರಾಮೀಣ ಪ್ರದೇಶದ ಮೀಸಲಾತಿ ಬಯಸುವವರು ಕೇಂದ್ರ ಸರ್ಕಾರ ನಿಗದಿ ಪಡಿಸಿದ ಪ್ರಮಾಣ ಪತ್ರಗಳನ್ನು ದಾಖಲಾತಿ ಪರಿಶೀಲನೆ ಸಂದರ್ಭದಲಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು https://cbseitms.rcll.gov.in/ nvs.index.registration ತಂತ್ರಾಂಶದ ಮೂಲಕ ಸೆಪ್ಟೆಂಬರ್ 9ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಾಚಾರ್ಯ ಆರ್.ಡ್ಯಾನಿಯಲ್ ರತನ್ ಕುಮಾರ್ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252
