
Chitradurga news|nammajana.com|17-03-2025
ನಮ್ಮಜನ.ಕಾಂ, ಚಳ್ಳಕೆರೆ: ಮದ್ಯ ಕರ್ನಾಟಕದ ಚಿತ್ರದುರ್ಗ (Nayakanahatti Fair) ಜಿಲ್ಲೆಯ ನಾಯಕನಹಟ್ಟಿಯ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಭಾನುವಾರ ಮಧ್ಯಾಹ್ನ 3-30 ಕ್ಕೆ ಪ್ರಾರಂಭವಾಯಿತು.
ಜಿಲ್ಲೆಯೂ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡು ಗುರು ತಿಪ್ಪೇರುದ್ರಸ್ವಾಮಿಗೆ ನಮನ ಸಲ್ಲಿಸಿದರು.

ಕಳೆದ ಹಲವಾರು ದಶಕಗಳಿಂದ ಮಾಡಿದಷ್ಟು ನೀಡು ಬಿಕ್ಷೆ ಎಂಬ ನುಡಿಯಂತೆ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಕೇವಲ ಪಾಲ್ಗೊಂಡು ದೇವರ ದರ್ಶನ ಪಡೆಯುವುದಲ್ಲದೆ, ತಮ್ಮ ಹರಿಕೆಗಳನ್ನು ಸಹ ಪೂರೈಸಿಕೊಂಡರು. ನಿರೀಕ್ಷೆಗೂ ಮೀರಿ ಹೆಚ್ಚಿನ ಸಂಖ್ಯೆಯ ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದ್ದು, ಇಡೀ ನಾಯಕನಹಟ್ಟಿಯ ದೇವಸ್ಥಾನದ ಸುತ್ತಮುತ್ತಲ ಎಲ್ಲಾ (Nayakanahatti Fair) ರಸ್ತೆಗಳಲ್ಲೂ ಭಕ್ತರ ದಂಡು ಹರಿದು ಬಂದಿತ್ತು.
ಸಂಸದ ಗೋವಿಂದಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ, ಮಾಜಿ ಸಚಿವ ಬಿ.ಶ್ರೀರಾಮುಲು, ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ. (Nayakanahatti Fair) ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ), ಯೋಗೇಶ್ಬಾಬು, ಹಾಗೂ ವಿವಿಧ ರಾಜಕೀಯ ಪಕ್ಷಗಳ ದುರೀಣರು ದೇವಸ್ಥಾನಕ್ಕೆ ತರಳಿ ದೇವರ ದರ್ಶನ ಪಡೆದು ತೇರು ಎಳೆಯುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: Dina Bhavishya | ದಿನ ಭವಿಷ್ಯ ಯಾವ್ಯಾವ ರಾಶಿಗೆ ಹೇಗಿದೆ ದಿನ
ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಮ್ಯಾಸಬೇಡರ ಬುಡಕಟ್ಟು ಸಮುದಾಯದ ಆರಾಧ್ಯ ದೈವವಾಗಿದ್ದು ಇಂದಿಗೂ ಲಕ್ಷಾಂತರ ಭಕ್ತರು ತಮ್ಮ ಹರಿಕೆ, ಬೇಡಿಕೆ ಹಾಗೂ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಲು ಜಾತ್ರೆಗೆ ಆಗಮಿಸುತ್ತಾರೆ.
ಇಡೀ ಜಾತ್ರೆಯ ತುಂಬಾ ಭಕ್ತರು ಹರ್ಷದಿಂದ (Nayakanahatti Fair) ಪಾಲ್ಗೊಂಡಿದ್ದಲ್ಲದೆ, ತೇರು ಎಳೆಯುವ ಸಂದರ್ಭದಲ್ಲಿ ತೇರಿನ ಮೇಲೆ ಬಾಳೆ ಹಣ್ಣು, ಸೂರಬೆಲ್ಲ ಎಸೆದು ತಮ್ಮ ಹರಿಕೆ ಪೂರೈಸಿಕೊಂಡರು.
ಜಿಲ್ಲಾಧಿಕಾರಿ ವೆಂಕಟೇಶ್, ಜಿಲ್ಲಾ ರಕ್ಷಣಾಧಿಕಾರಿ ರಂಜಿತ್ಕುಮಾರ್ ಬಂಡಾರು, ಹೆಚ್ಚುವರಿ ರಕ್ಷಣಾಧಿಕಾರಿ ಕುಮಾರಸ್ವಾಮಿ, ಡಿವೈಎಸ್ಪಿ ರಾಜಣ್ಣ, ತಹಶೀಲ್ದಾರ್ ರೇಹಾನ್ಪಾಷ, ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಮುಂತಾದವರು ಉಪಸ್ಥಿತರಿದ್ದರು.