Chitradurga news|nammajana.com|16-9-2024
ನಮ್ಮಜನ.ಕಾಂ, ಚಿಕ್ಕಜಾಜೂರು: ಅಡಿಕೆ ವ್ಯಾಪಾರಿಯೊಬ್ಬ ಇಲ್ಲಿನ ಇಬ್ಬರು ರೈತರಿಂದ ರೂ 22.54 ಲಕ್ಷ ಮೌಲ್ಯದ (Nut trader) ಅಡಿಕೆಯನ್ನು ಖರೀದಿಸಿ, ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಬಳಿಯ ಹೊಸಹಳ್ಳಿ ಗ್ರಾಮದ ನಿಂಗರಾಜ್ ಹಾಗೂ ಶ್ರೀಕಾಂತ್ ಎಂಬ ರೈತರ ಜೊತೆ (Nut trader) ಅಡಿಕೆ ಖರೀದಿಸಿ ವಂಚನೆ ಮಾಡಿರದ್ದಾನೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗೊಪ್ಪೆನಾಳ್ ಗ್ರಾಮದ ರುದ್ರೇಶ್ ಎಂಬವರಿಗೆ ಏಪ್ರಿಲ್ ತಿಂಗಳಿನಲ್ಲಿ ಇವರು ರೂ13,24 ಲಕ್ಷ ಹಾಗೂ ರೂ9.30 ಲಕ್ಷ ಮೌಲ್ಯದ ಅಡಿಕೆ ಬೆಳೆ ಮಾರಾಟ ಮಾಡಿದ್ದರು.
ಅಡಿಕೆ ತೆಗೆದುಕೊಂಡು ತೆರಳಿ ಒಂದು ವಾರದೊಳಗೆ ಹಣ ಕೊಡುವುದಾಗಿ ತಿಳಿಸಿದ್ದ ರುದ್ರೇಶ್, ಅಡಿಕೆ ಖರೀದಿಸಿದ್ದರು. ಆದರೆ, ತಿಂಗಳಾದರೂ ಹಣವನ್ನು ಕೊಡದಿದ್ದಾಗ ಚನ್ನಗಿರಿಯ (Nut trader) ಸಿಪಿಐ ಅವರಿಗೆ ದೂರು ನೀಡಿದ್ದರು.
ರುದ್ರೇಶ್ ಹಾಗೂ ಅವರ ತಾಯಿ ಸಿಪಿಐ ಸಮ್ಮುಖದಲ್ಲಿ ಮೂರು ತಿಂಗಳ ವಾಯಿದೆ ಪಡೆದಿದ್ದರು. ನಂತರ ರುದ್ರೇಶ್ ನಾಪತ್ತೆಯಾಗಿದ್ದಾಗಿ ತಿಳಿದುಬಂದಿದೆ.
ಮನೆಯ ಹತ್ತಿರ ಹೋದರೆ ನಮ್ಮ ವಿರುದ್ಧವೇ ಪ್ರಕರಣ ದಾಖಲಿಸುವುದಾಗಿ ಅವರ ತಾಯಿ ಬೆದರಿಕೆ ಹಾಕುತ್ತಿದ್ದಾರೆ. ನಾವು ಸಾಲ ಮಾಡಿ, ಅಡಿಕೆ ಬೆಳೆದು ಮಾರಾಟ ಮಾಡಿದರೆ, (Nut trader) ಖರೀದಿದಾರ ತಲೆಮರೆಸಿಕೊಂಡಿದ್ದಾನೆ ಎಂದು ನಿಂಗರಾಜ್ ಹಾಗೂ ಶ್ರೀಕಾಂತ್ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಬಾವಿಗೆ ಬಿದ್ದು ತಾಯಿ ಮಗು ಸಾವು | suicide
ಈ ಪ್ರಕರಣ ಚಿಕ್ಕಜಾಜೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252