Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಈರುಳ್ಳಿ ಬೆಳೆ: ರೋಗವನ್ನು ತಡೆಗಟ್ಟಲು ಏನ್ ಮಾಡಬೇಕು, ತೋಟಗಾರಿಕೆ ಅಧಿಕಾರಿಗಳು ಹೇಳಿದ್ದೇನು, ಇಲ್ಲಿದೆ ಸಂಪೂರ್ಣ ಮಾಹಿತಿ |Onion disease
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಈರುಳ್ಳಿ ಬೆಳೆ: ರೋಗವನ್ನು ತಡೆಗಟ್ಟಲು ಏನ್ ಮಾಡಬೇಕು, ತೋಟಗಾರಿಕೆ ಅಧಿಕಾರಿಗಳು ಹೇಳಿದ್ದೇನು, ಇಲ್ಲಿದೆ ಸಂಪೂರ್ಣ ಮಾಹಿತಿ |Onion disease
ಇಂದಿನ ಸುದ್ದಿ

ಈರುಳ್ಳಿ ಬೆಳೆ: ರೋಗವನ್ನು ತಡೆಗಟ್ಟಲು ಏನ್ ಮಾಡಬೇಕು, ತೋಟಗಾರಿಕೆ ಅಧಿಕಾರಿಗಳು ಹೇಳಿದ್ದೇನು, ಇಲ್ಲಿದೆ ಸಂಪೂರ್ಣ ಮಾಹಿತಿ |Onion disease

Editor Nammajana
Last updated: 16 August 2024 12:12
By Editor Nammajana 2 Min Read
Share
SHARE

Chitradurga news|nammajana.com|16-8-2024

ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯಲ್ಲಿ ಈರುಳ್ಳಿ ಬೆಳೆಯು ಪ್ರಮುಖ ಬೆಳೆಯಾಗಿರುತ್ತದೆ.‌ ಈರುಳ್ಳಿ ಬೆಳೆಯನ್ನು ಚಿತ್ರದುರ್ಗ ತಾಲ್ಲೂಕಿನಲ್ಲಿ 9,461 ಹೆಕ್ಟೇರ್, ಚಳ್ಳಕೆರೆ 11,299 ಹೆಕ್ಟೇರ್, ಹೊಳಲ್ಕೆರೆ 1777 ಹೆಕ್ಟೇರ್, ಹಿರಿಯೂರು 5991 ಹೆಕ್ಟೇರ್, ಹೊಸದುರ್ಗ 3300 ಹೆಕ್ಟೇರ್, (Onion disease)  ಮೊಳಕಾಲ್ಮೂರು 819 ಹೆಕ್ಟೇರ್ ಒಟ್ಟಾರೆ ಜಿಲ್ಲೆಯಲ್ಲಿ 32,646 ಹೆಕ್ಟೇರ್‌ನಲ್ಲಿ ಬೆಳೆಯಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಜಿಟಿಜಿಟಿ ಮಳೆಯಿಂದಾಗಿ ಹೊಸದುರ್ಗ ತಾಲ್ಲೂಕಿನಲ್ಲಿ ಮಣ್ಣಿನ ತೇವಾಂಶ ಹೆಚ್ಚಾಗಿ ಈರುಳ್ಳಿ ಬೆಳೆಗಳಿಗೆ ಥ್ರಿಪ್ಸ್ ನುಶಿ ಕೀಟ ಮತ್ತು ನೇರಳೆ ಎಲೆ ಮಚ್ಚೆ ರೋಗ ಬಾದೆ (Onion disease)  ಹೆಚ್ಚಾಗಿದ್ದು, ರೋಗ ಮತು ಕೀಟ ಬಾದೆಯಿಂದ ಬೆಳೆಯನ್ನು ರಕ್ಷಿಸಲು, ರೋಗ ನಿರ್ವಹಣೆ ಮಾಲು ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಸಲಹೆ ನೀಡಿದ್ದಾರೆ.

ಈರುಳ್ಳಿ ಬೆಳೆಗೆ ಥ್ರಿಪ್ಸ್ ನುಶಿಗಳು ಎಲೆಯ ಮೇಲೆ ಹೆಚ್ಚಾಗಿ ಕಂಡುಬರುತ್ತದೆ. ಎಲೆಗಳ ಸುಳಿಯಲ್ಲಿ ಮತ್ತು ಎಲೆಗಳ ಕೆಳಗೆ ಕುಳಿತು ರಸ ಹೀರುತ್ತವೆ. ಎಲೆಗಳ ಮೇಲೆ ಬಿಳಿ ಬಿಳಿಯಾದ ಮಚ್ಚೆಗಳು ಕಾಣಿಸುತ್ತವೆ, ನಂತರ ತುದಿಯಿಂದ ಒಣಗುತ್ತವೆ.

ಥ್ರಿಪ್ಸ್ ನುಶಿ ನಿರ್ವಹಣೆಗೆ ಬಿತ್ತಿದ 3 ವಾರಗಳ ನಂತರ ಬೆಳೆಗೆ 0.25 ಮಿಲಿ ಇಮಿಡಾಕ್ಲೋಪ್ರಿಡ್ ಅಥವಾ 1.7 ಮಿ.ಲೀ ಡೈಮಿಥೋಯೇಟ್ 30 ಇ.ಸಿ ಅಥವಾ 0.5 ಮಿ.ಲೀ (Onion disease)  ಫಾಸ್ಪಾಮಿಡಾನ್ 85 ಡಬ್ಲೂö್ಯ ಎಸ್.ಸಿ ಅಥವಾ 1.3 ಮಿ.ಲೀ ಆಕ್ಸಿಡೆಮೆಟಾನ್ ಮಿಥೈಲ್ 1 ಲೀ. ನೀರಿನಲ್ಲಿ ಕರಗಿಸಿ ಸಿಂಪಡಿಸಬೇಕು.

ಬಿತ್ತನೆಯಾದ 6 ವಾರಗಳ ನಂತರ ಕ್ರಮಾಂಕ 1 ರಲ್ಲಿ ಸೂಚಿಸಲಾದ ಸಿಂಪಡನೆಯನ್ನು ಮತ್ತೆ ಮಾಡಬೇಕು, ಪ್ರತಿ ಹೆಕ್ಟೇರಿಗೆ 360 ಲೀ.ಸಿಂಪಡಣಾ ದ್ರಾವಣ ಬಳಸಬೇಕು.ಬಿತ್ತನೆಯಾದ 9 ಮತ್ತು 11 ವಾರಗಳ ನಂತರ ಕ್ರಮಾಂಕ 1 ರಲ್ಲಿ ಸೂಚಿಸಿಲಾದ ದ್ರಾವಣವನ್ನೇ ಪ್ರತಿ ಹೆಕ್ಟೇರಿಗೆ 450 ಲೀ. ಸಿಂಪಡಿಸಬೇಕು.

ನೇರಳೆ ಎಲೆ ಮಚ್ಚೆ ರೋಗವು ಮೊದಲಿಗೆ ಬಿಳಿ ಭಾಗದಿಂದ, ನೇರಳೆ ಭಾಗಕ್ಕೆ ಪರಿವರ್ತನೆಗೊಂಡು, ಆಮೇಲೆ ಎಲೆಗಳು ಒಣಗುತ್ತವೆ. ನೇರಳೆ ಎಲೆ ಮಚ್ಚೆ ರೋಗ ನಿರ್ವಹಣೆಗೆ ಬೀಜವನ್ನು ಪಾದರಸ ಸಂಯುಕ್ತ ವಸ್ತು ಅಥವಾ ಕ್ಯಾಪ್ಟಾನ್ (2 ಗ್ರಾಂ ಪ್ರತಿ ಕಿ.ಗ್ರಾಂ ಬೀಜಕ್ಕೆ) ದಿಂದ ಉಪಚರಿಸಬೇಕು.

ಹೊಸದುರ್ಗ ತಾಲ್ಲೂಕಿನಲ್ಲಿ ಕಪ್ಪು ಮಣ್ಣಿನಲ್ಲಿ ಈರುಳ್ಳಿ ಬೆಳೆಯನ್ನು ಬೆಳೆಯಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಜಿಟಿಜಿಟಿ ಮಳೆಯಿಂದಾಗಿ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿ ನೇರಳೆ ಎಲೆ ಮಚ್ಚೆರೋಗ ಕಾಣಿಸಿಕೊಂಡಿದ್ದು ನೀರು ಇಂಗಲು ಸರಿಯಾದ ರೀತಿಯಲ್ಲಿ ಒಳಚರಂಡಿ ವ್ಯವಸ್ಥೆ ಮಾಡುವುದು.

2 ರಿಂದ 3 ವರ್ಷಕ್ಕೊಮ್ಮೆ ಬೆಳೆ ಬದಲಾವಣೆ ಮಾಡುವುದು. ಸಿಸ್ಟೆಮ್ಯಾಟಿಕ್ ಶಿಲೀಂದ್ರ ನಾಶಕಗಳಾದ ಪ್ರೋಪಿಕೋನೋಜೋಲ್ 25 ಇ.ಸಿ 1 ಮಿ.ಲೀ. ಅಥವಾ ಹೆಕ್ಸಕೋನೋಜೋಲ್ 1 ಮಿ.ಲೀ. ಪ್ರತಿ ಲೀಟರ್ ನೀರಿನಲ್ಲಿ ಕರಗಿಸಿ ಜೊತೆಗೆ ಅಂಟು ದ್ರಾವಣ 0.25 ಮಿ.ಲೀ ಪ್ರತಿ ಲೀಟರ್ ನೀರಿಗ ಬೆರೆಸಿ 10 ದಿನಗಳಿಗೊಮ್ಮೆಯಾದರು ಶಿಲೀಂದ್ರ ನಾಶಕಗಳನ್ನು ಸಿಂಪಡಿಸಬೇಕು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯ ಮಳೆಯ ವರದಿ | ಎಲ್ಲೆಲ್ಲಿ ಎಷ್ಟು ಮಳೆ,‌ಎಷ್ಟು ಹಾನಿ | Rain report

ಈರುಳ್ಳಿ ಬೆಳೆಯ ರೋಗ ನಿಯಂತ್ರಣಕ್ಕೆ ತೋಟಗಾರಿಕೆ ಇಲಾಖೆಯು ಸಲಹೆ ನೀಡಿರುವ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಕೋರಿದ್ದಾರೆ.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

TAGGED:Chitradurgahorticulture departmentInformationKannada Newskannada suddimeasures to prevent diseaseNammajana.comofficial visitonion diseaseಅಧಿಕಾರಿ ಭೇಟಿಈರುಳ್ಳಿ ರೋಗಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತೋಟಗಾರಿಕೆ ಇಲಾಖೆನಮ್ಮಜನ.ಕಾಂಮಾಹಿತಿರೋಗ ತಡೆಗಟ್ಟಲು ಕ್ರಮ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗ ಜಿಲ್ಲೆಯ ಮಳೆಯ ವರದಿ | ಎಲ್ಲೆಲ್ಲಿ ಎಷ್ಟು ಮಳೆ,‌ಎಷ್ಟು ಹಾನಿ | Rain report
Next Article ಅಡಿಕೆ ಧಾರಣೆ |16 ಆಗಸ್ಟ್ 2024 | 50 ಸಾವಿರದ ಒಳಗೆ ಕುಸಿತ ಅಡಿಕೆ ದರ | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್? Adike Rate
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?