Chitradurga news|nammajana.com|10-02-2025
ನಮ್ಮಜನ.ಕಾಂ, ಚಳ್ಳಕೆರೆ: ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚೌಳೂರು ಜಗಜೀವನರಾಮ್ ಕಾಲೋನಿಯ (Parasurampura) ಕುರಿನಿಂಗಪ್ಪನವರ ಜಮೀನಿನ ಬಳಿ ಯಾರೋ ದುಷ್ಕರ್ಮಿಗಳು ಜೆಜೆ ಕಾಲೋನಿಯ ಜೆ.ಎಚ್.ಪ್ರಭಾಕರ(55)ಎಂಬ ವ್ಯಕ್ತಿಯನ್ನು ಹರಿತವಾದ ಆಯುಧಗಳಿಂದ ಹೊಡೆದು ರಕ್ತಗಾಯಗೊಳಿಸಿ ಕೊಲೆಮಾಡಿ ಪರಾರಿಯಾದ ಘಟನೆ ನಡೆದಿದೆ.
ಮೃತನ ಪತ್ನಿ ಹನುಮಕ್ಕ ಈ ಬಗ್ಗೆ ಪೊಲೀಸರಿಗೆ ದೂರು ನೀಡಿ ನನ್ನ ಗಂಡ ಜೆ.ಎಚ್.ಪ್ರಭಾಕರ ಪರಶುರಾಮಪುರದಲ್ಲಿ ಚಪ್ಪಲ್ಲಿ ಹೊಲೆಯುವ ಕೆಲಸ ಮಾಡುತ್ತಿದ್ದು, ಪ್ರತಿನಿತ್ಯ ಚೌಳೂರು ಗ್ರಾಮದ ಜೆಜೆ ಕಾಲೋನಿಯಿಂದ ಪರಶುರಾಮಪುರಕ್ಕೆ ಹೋಗಿ ಸಂಜೆ ವಾಪಾಸಾಗುತ್ತಿದ್ದ, ಫೆ.9 ರ ಸಂಜೆ ಸುಮಾರು 7 ರ ಸಮಯದಲ್ಲಿ ಪರಶುರಾಮಪುರದಿಂದ ಚೌಳೂರಿನ (Parasurampura) ಜೆಜೆ.ಕಾಲೋನಿಗೆ ಹೋಗುವ ರಸ್ತೆಯ ಪಕ್ಕದಲ್ಲಿ ಕೊಲೆಯಾಗಿ ಬಿದ್ದು, ಈ ಬಗ್ಗೆ ಆರೋಪಿಗಳನ್ನು ಪತ್ತೆ ಮಾಡುವಂತೆ ದೂರು ನೀಡಿದ್ಧಾಳೆ.

ಇದನ್ನೂ ಓದಿ: ಶರಣರ ಜಯಂತಿಗಳಿಂದ ಸಮಾಜದಲ್ಲಿ ಸಾಮರಸ್ಯ ಮೂಡಿದೆ: ಟಿ.ರಘುಮೂರ್ತಿ | Kayak Sharanara
ಜಿಲ್ಲಾ ರಕ್ಷಣಾಧಿಕಾರಿ ಭೇಟಿ :
ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ರಂಜಿತ್ಕುಮಾರ್ ಬಂಡಾರು, ಹೆಚ್ಚುವರಿ ರಕ್ಷಣಾಧಿಕಾರಿ ಕುಮಾರಸ್ವಾಮಿ, ತಳಕು ವೃತ್ತ ನಿರೀಕ್ಷಕ ಹನುಮಂತಪ್ಪಶಿರೆಹಳ್ಳಿ ಭೇಟಿ ನೀಡಿ (Parasurampura) ಪರಿಶೀಲಿಸಿದರು. ಪರಶುರಾಮಪುರ ಪಿಎಸ್ಐ ಮಾರುತಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ಧಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252