Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಭರಮಸಾಗರ ಪಿ.ಡಿ.ಓ ಶ್ರೀದೇವಿ ಅಮಾನತು | PDO SUSPENDED
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಭರಮಸಾಗರ ಪಿ.ಡಿ.ಓ ಶ್ರೀದೇವಿ ಅಮಾನತು | PDO SUSPENDED
ಇಂದಿನ ಸುದ್ದಿ

ಭರಮಸಾಗರ ಪಿ.ಡಿ.ಓ ಶ್ರೀದೇವಿ ಅಮಾನತು | PDO SUSPENDED

Editor Nammajana
Last updated: 30 July 2024 13:10
By Editor Nammajana 2 Min Read
Share
SHARE

Chitradurga news |nammajana.com|30-7-2024

ನಮ್ಮಜನ.ಕಾಂ, ಚಿತ್ರದುರ್ಗ: ಗ್ರಾಮ ಪಂಚಾಯತಿಗೆ ಬರಬೇಕಾದ ಸಾರ್ವಜನಿಕ ಹಣದ ದುರುಪಯೋಗ, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪಕ್ಕಾಗಿ ಭರಮಸಾಗರ ಗ್ರಾಮ ಪಂಚಾಯತಿ ಪಿಡಿಒ (PDO SUSPENDED)  ಶ್ರೀದೇವಿ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ಭರಮಸಾಗರ ಗ್ರಾ.ಪಂ. ನಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀದೇವಿ ಅವರು ಕಾನೂನು ಬಾಹಿರವಾಗಿ ಸಾರ್ವಜನಿಕ ವಿರೋಧಿ, ಸರ್ವಾಧಿಕಾರಿ (PDO SUSPENDED)  ಧೋರಣೆಯಿಂದ ಕರ್ತವ್ಯ ನಿರ್ವಹಣೆ, ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಯಾವುದೇ ಬೆಲೆ ಕೊಡದೆ, ಗೌರವ ನೀಡದೆ, ಕಚೇರಿಯ ನೌಕರರನ್ನಾಗಲಿ, ಸಿಬ್ಬಂದಿಯನ್ನಾಗಲಿ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಆಡಳಿತ ನಡೆಸುತ್ತಿದ್ದಾರೆ.

ಗ್ರಾ.ಪಂ. ನ ವಿವಿಧ ಕೆಲಸಗಳಿಗೆ ಬರುವ ಸಾರ್ವಜನಿಕರಿಂದ ರಶೀದಿ ಹಣ ಪಾವತಿಸಿಕೊಂಡು, ಗ್ರಾ.ಪಂ. ಖಾತೆಗೆ ಜಮಾ ಮಾಡದೆ ಹಣ ದುರುಪಯೋಗ ಮಾಡಿರುತ್ತಾರೆಂದು, ಅಲ್ಲದೆ ಕೆಲವು ಇ-ಸ್ವತ್ತುಗಳ ವಿತರಣೆಗೆ ಪಾವತಿಸಲಾದ ಹಣಕ್ಕೆ ರಸೀದಿ ಹಾಕದೆ ಹಣವನ್ನು ಸ್ವಂತಕ್ಕೆ ಉಪಯೋಗಿಸಿರುತ್ತಾರೆ  ಎಂಬುದಾಗಿ ಗ್ರಾ.ಪಂ. ಅಧ್ಯಕ್ಷರು, ಗ್ರಾ.ಪಂ. ಸದಸ್ಯರು (PDO SUSPENDED)  ನೀಡಿರುವ ದೂರುಗಳ ಕುರಿತು ಜಿ.ಪಂ. ಮುಖ್ಯ ಲೆಕ್ಕಾಧಿಕಾರಿಯವರು ವಿಶೇಷ ಲೆಕ್ಕ ತನಿಖೆ ಕೈಗೊಂಡು ತನಿಖಾ ವರದಿಯನ್ನು ಸಲ್ಲಿಸಿದ್ದರು.

ಇದನ್ನೂ ಓದಿ: CSR ಅನದಾನ ಬಳಕೆ ಕುರಿತು ಧ್ವನಿ ಎತ್ತಿದ ಸಂಸದ ಗೋವಿಂದ ಕಾರಜೋಳ| Govinda Karajola

96 ಸಾವಿರ ರೂ. ಗಳಿಗೆ ಸಾರ್ವಜನಿಕರಿಂದ ಶುಲ್ಕ ಪಡೆದು ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಮ್ಯಾನ್ಯುಯಲ್‌ನಲ್ಲಿ ಜನರಲ್ ಲೈಸೆನ್ಸ್ ನೀಡಿರುವುದು, ಸೇರಿದಂತೆ ಗ್ರಾ.ಪಂ. ಗೆ ಬರಬೇಕಾದ ಸಾರ್ವಜನಿಕ ಹಣದ ದುರುಪಯೋಗ (PDO SUSPENDED)  ಆಗಿರಬಹುದೆಂಬ ಅಂಶ ಮೇಲ್ನೋಟಕ್ಕೆ ಕಂಡುಬಂದಿರುವುದಾಗಿ ಅವರು ವರದಿ ಸಲ್ಲಿಸಿದ್ದರು.

ಇದನ್ನೂ ಓದಿ: ಚಳ್ಳಕೆರೆ ನಗರಸಭೆ ನೂತನ ಪೌರಯುಕ್ತರಾಗಿ ಎಚ್.ಜಿ.ಜಗರೆಡ್ಡಿ ನೇಮಕ‌ | Challakere Municipality

ಆರೋಪಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ನೀಡಿದ ನೋಟಿಸ್‌ಗೆ, ಪಿಡಿಒ ಶ್ರೀದೇವಿ ಅವರು ನೀಡಿರುವ ಸಮಜಾಯಿಷಿಯು ಅಸಮಂಜಸವಾಗಿರುವುದರಿಂದ ನಿಯಮಾನುಸಾರ ಶ್ರೀದೇವಿ ಅವರನ್ನು (PDO SUSPENDED)  ಅಮಾನತುಗೊಳಿಸಲಾಗಿದೆ ಎಂದು ಸಿಇಓ ಎಸ್.ಜೆ.ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:BharamasagaraBharamasagara Gram PanchayatCEOChitradurgaChitradurga NewsDereliction of DutyGovernment GuidelinesKannada Newskannada suddiMisappropriationNammajana.comPDOPublic FundsSrideviSuspensionViolationZilla Panchayat Chief Executive Officerಅಮಾನತುಉಲ್ಲಂಘನೆಕನ್ನಡ ನ್ಯೂಸ್ಕನ್ನಡ ಸುದ್ದಿಕರ್ತವ್ಯ ಲೋಪಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಧಿಕಾರಿದುರಪಯೋಗನಮ್ಮಜನ.ಕಾಂಪಿಡಿಓಭರಮಸಾಗರಭರಮಸಾಗರ ಗ್ರಾಮ ಪಂಚಾಯತ್ಶ್ರೀದೇವಿಸರ್ಕಾರ ಮಾರ್ಗಸೂಚಿಸಾರ್ವಜನಿಕ ಹಣಸಿಇಓ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article CSR ಅನದಾನ ಬಳಕೆ ಕುರಿತು ಧ್ವನಿ ಎತ್ತಿದ ಸಂಸದ ಗೋವಿಂದ ಕಾರಜೋಳ| Govinda Karajola
Next Article Nut plantation: ಅಡಿಕೆ, ತೆಂಗಿನ ತೋಟಕ್ಕೆ ಬೆಂಕಿ | ಲಕ್ಷಾಂತರ ರೂಪಾಯಿ ನಷ್ಟ.
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?