Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Pratibhotsava and Women Siri | ವಿದ್ಯಾರ್ಥಿಗಳು ವೈಯಕ್ತಿಕ ಹಿತಾಸಕ್ತಿ ಅರಿತು ಉದಯೋನ್ಮುಖರಾಗಿ ಬೆಳೆಯಬೇಕು: ಕೆ.ಸಿ.ವೀರೇಂದ್ರ ಪಪ್ಪಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Pratibhotsava and Women Siri | ವಿದ್ಯಾರ್ಥಿಗಳು ವೈಯಕ್ತಿಕ ಹಿತಾಸಕ್ತಿ ಅರಿತು ಉದಯೋನ್ಮುಖರಾಗಿ ಬೆಳೆಯಬೇಕು: ಕೆ.ಸಿ.ವೀರೇಂದ್ರ ಪಪ್ಪಿ
ಇಂದಿನ ಸುದ್ದಿ

Pratibhotsava and Women Siri | ವಿದ್ಯಾರ್ಥಿಗಳು ವೈಯಕ್ತಿಕ ಹಿತಾಸಕ್ತಿ ಅರಿತು ಉದಯೋನ್ಮುಖರಾಗಿ ಬೆಳೆಯಬೇಕು: ಕೆ.ಸಿ.ವೀರೇಂದ್ರ ಪಪ್ಪಿ

Editor Nammajana
Last updated: 12 July 2024 3:18 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|12-7-2024

ನಮ್ಮಜನ.ಕಾಂ, ಚಿತ್ರದುರ್ಗ: ವಿದ್ಯಾರ್ಥಿಗಳು ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಶೈಕ್ಷಣಿಕವಾಗಿ, (Pratibhotsava and Women Siri)  ಸಾಮಾಜಿಕವಾಗಿ ತಮ್ಮ ವೈಯಕ್ತಿಕ ಹಿತಾಸಕ್ತಿ ಅರಿತು ಉನ್ನತಮಟ್ಟಕ್ಕೆ ಬೆಳೆಯಬೇಕು ಎಂದು ಶಾಸಕ  ಕೆ.ಸಿ.ವೀರೇಂದ್ರ ಪಪ್ಪಿ ಸಲಹೆ ನೀಡಿದರು.

ನಗರದ ತ.ರಾ.ಸು ರಂಗಮಂದಿರದಲ್ಲಿ ಶುಕ್ರವಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ (Pratibhotsava and Women Siri) ಆಯೋಜಿಲಾಗಿದ್ದ “ಮಹಿಳಾ ಸಿರಿ” ವಾರ್ಷಿಕ ಸಂಚಿಕೆ ಬಿಡುಗಡೆ ಹಾಗೂ ಪ್ರತಿಭೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಪೋಷಕರು ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಡುತ್ತಾರೆ. ಪೋಷಕರು ನಿಮ್ಮ ಮೇಲೆ ಅಗಾಧವಾದ ನಂಬಿಕೆಯನ್ನಿಟ್ಟು ಶಾಲಾ, ಕಾಲೇಜುಗಳಿಗೆ ಕಳುಹಿಸುತ್ತಾರೆ. ಅವರ ನಂಬಿಕೆಗೆ ದ್ರೋಹ ಮಾಡದೆ, ವಿದ್ಯಾರ್ಥಿಗಳು ತಮ್ಮ ಪೋಷಕರ, ಆರ್ಥಿಕ ಪರಿಸ್ಥಿತಿ ಅರಿತು, ಪಾಠ ಪ್ರವಚನಗಳಲ್ಲಿ ತೊಡಗಿಸಿಕೊಂಡು ಉದಯೋನ್ಮುಖರಾಗಿ ಬೆಳೆಯಬೇಕು. (Pratibhotsava and Women Siri)  ಮುಂದಿನ ಜೀವನದ ಪಯಣಕ್ಕೆ ಜಾಗೃತವಾಗಿ ಹೆಜ್ಜೆ ಇಡಬೇಕು. ನಿಮ್ಮ ಸಾಧನೆ, ಸನ್ನಡತೆ ಕಂಡು ಪೋಷಕರು ನಿಮ್ಮ ಬಗ್ಗೆ ಹೆಮ್ಮೆಪಡುವಂತಾಗಬೇಕು. ಆಗ ಮಾತ್ರ ನಿಮ್ಮ ಬದುಕು ಸಾರ್ಥಕ ಎಂದರು.

ಸರ್ಕಾರಿ ಪ್ರಥಮ  ದರ್ಜೆ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ದಿಗೆ ಈಗಾಗಲೇ 2.24 ಗುಂಟೆ ಜಮೀನು ಮಂಜೂರಾಗಿದೆ. ಕಟ್ಟಡ ನಿರ್ಮಾಣಕ್ಕಾಗಿ ರೂ.25 ಕೋಟಿ ಅನುದಾನ ಮೀಸಲಾಗಿದೆ. ಈ ಎಲ್ಲಾ (Pratibhotsava and Women Siri)  ಸೌಕರ್ಯಗಳನ್ನು ಮುಂಬರುವ ವಿದ್ಯಾರ್ಥಿಗಳು ಬಳಸಿಕೊಂಡು, ಸಮಾಜದಲ್ಲಿ ಉತ್ತಮ ನಾಗರಿಕರಾಗಿ, ಒಳ್ಳೆಯ ಗುಣಗಳನ್ನು ಮೈಗೂಡಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಏನೋ‌ ಅನುದಾನ‌ ಕೊಡ್ತಾರೆ, ಏನೋ‌ ಮಾಡೋಣ ಎಂಬ‌‌‌ ಮನಸ್ಥಿತಿ ಬಿಡಿ: ಕೆ.ಸಿ.ವೀರೇಂದ್ರ ಪಪ್ಪಿ | K. C. Veerendra PuppyPuppy

2022-23ನೇ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಬಿ.ಕಾಂ. ವಿಭಾಗದ ರುಖಾಯಾ ತಾಜೀಮ್ ಹಾಗೂ ಬಿ.ಎ ವಿಭಾಗದ ಎನ್.ರಕ್ಷಿತಾ ಅವರಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. 2022-23ನೇ ಸಾಲಿನಲ್ಲಿ ಪ್ರಥಮ ಮತ್ತು ದ್ವಿತೀಯ ಬಿ.ಎ, ಬಿ.ಕಾಂ ಪದವಿಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೂ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸಿ.ಚನ್ನಕೇಶವ, ಸಾಂಸ್ಕøತಿಕ ಸಮಿತಿ ಸಂಚಾಲಕ ಡಾ. ಡಿ. ಓ.ಸಿದ್ದಪ್ಪ, ಅಧ್ಯಾಪಕ ಸಂಘದ ಅಧ್ಯಕ್ಷ ಡಾ. ಪಿ. ಎನ್.ಮಧುಸೂದನ್, ಐ. ಕ್ಯೂ. ಎ.ಸಿ. ಸಂಚಾಲಕ ಬಿ.ಹೆಚ್.ಕುಮಾರಸ್ವಾಮಿ, ರಾ. ಸೇ. ಯೋ. ಕಾರ್ಯಕ್ರಮಾಧಿಕಾರಿ ಎಂ.ಗಿರೀಶ್, ಕ್ರೀಡಾ ಸಮಿತಿ ಸಂಚಾಲಕ ಆರ್. ಶಿವಪ್ರಸಾದ್, ಪತ್ರಾಂಕಿತ ವ್ಯವಸ್ಥಾಪಕ ವೆಂಕಟೇಶ್, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರುಗಳಾದ ನಿವೃತ್ತ ಪ್ರಾಧ್ಯಾಪಕ ಕೆ.ಸಜ್ಜತ್, ಎಸ್.ಆರ್.ಮನು, ಸಮೀವುಲ್ಲಾ ಶರೀಫ್, ನರಸಿಂಹಮೂರ್ತಿ, ತಾರಕೇಶ್ವರಿ, ಸಮಾಜಶಾಸ್ತ್ರ ವಿಭಾಗದ ಅಧ್ಯಕ್ಷ ಡಾ.ಸಿದ್ದಪ್ಪ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ವೀಣಾ, ಕ್ರೀಡಾ ಸಮಿತಿ ಸಂಚಾಲಕ ಡಾ.ಶಿವಪ್ರಾಸಾದ್ ಹಾಗೂ ವಿದ್ಯಾರ್ಥಿಗಳು, ಸಿಬ್ಬಂಧಿಗಳು ಉಪಸ್ಥಿತರಿದ್ದರು. ಮಹಿಳಾ ಸಿರಿ ವಾರ್ಷಿಕ ಸಂಚಿಕೆ ಸಂಪಾದಕ ಬಿ.ಮಂಜುನಾಥ್ ಸ್ವಾಗತಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Rain | ಸೋಮವಾರ ರಾತ್ರಿ ಸುರಿದ ಮಳೆಗೆ ಎಲ್ಲೆಲ್ಲಿ ಏನೆಲ್ಲ ಹಾನಿಯಾಗಿದೆ | ಇಲ್ಲಿನ ರಿಪೋರ್ಟ್

ಆಗಸ್ಟ್ 10ರಂದು ಟಿಬೇಟಿಯನ್ ಧರ್ಮ ಗುರು ದಲೈಲಾಮರವರ ಹುಟ್ಟುಹಬ್ಬ ಆಚರಣೆ | Madara Channaiah Swamiji

Retirement: ವಯೋನಿವೃತ್ತಿ ಹೊಂದಿದ ಮುಖ್ಯ ಲೆಕ್ಕಾಧಿಕಾರಿ ಸಿ.ಜಿ.ಶ್ರೀನಿವಾಸ್‍ಗೆ ಸನ್ಮಾನ

BL Venu: ಕುವೆಂಪು ವಿಶ್ವವಿದ್ಯಾಲಯ ಪಠ್ಯಕ್ಕೆ ಸಾಹಿತಿ ಬಿ.ಎಲ್.ವೇಣು ಕಥೆ ಸೇರ್ಪಡೆ

ವಾಣಿ ವಿಲಾಸ ಸಾಗರ ನೀರಿನ ಮಟ್ಟ ಹೆಚ್ಚಳ | ಎಷ್ಟು ಕ್ಯೂಸೆಕ್ಸ್ ನೀರು ಬಂದಿದೆ? | Vani Vilasa Sagara

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Adike Rate | 12 ಜುಲೈ 2024 | ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಇಳಿಕೆ | ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ
Next Article ಉಸಿರಾಗಲಿ ಕನ್ನಡ, ಹಸನಾಗಲಿ ಕನ್ನಡಿಗರ ಬದುಕು:ಟಿ.ರಘುಮೂರ್ತಿ | Kannada Jyoti RathYatra
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಆಗಸ್ಟ್ 05| ಇಂದಿನ ಅಡಿಕೆ ರೇಟ್ ಎಷ್ಟಿದೆ?
ಅಡಿಕೆ ಧಾರಣೆ
Gold Rate | ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ
ಇಂದಿನ ಸುದ್ದಿ
ಹಿಮ್ಮುಖ ಚಲಿಸಿದ ಬಸ್: ಚಾಲಕ ಸಾವು : Bus
ಕ್ರೈಂ ಸುದ್ದಿ
Donkey wedding | ಮಳೆಗಾಗಿ ಗ್ರಾಮಸ್ಥರಿಂದ ಕತ್ತೆಗಳ ಮದುವೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?