Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಖಾಸಗಿ ಗಣಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲಿ : ಸಂಸದ ಗೋವಿಂದ ಎಂ ಕಾರಜೋಳ | Private mining companies
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಖಾಸಗಿ ಗಣಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲಿ : ಸಂಸದ ಗೋವಿಂದ ಎಂ ಕಾರಜೋಳ | Private mining companies
ಇಂದಿನ ಸುದ್ದಿ

ಖಾಸಗಿ ಗಣಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲಿ : ಸಂಸದ ಗೋವಿಂದ ಎಂ ಕಾರಜೋಳ | Private mining companies

Editor Nammajana
Last updated: 10 July 2024 12:19
By Editor Nammajana 4 Min Read
Share
SHARE

Chitradurga news|nammajana.com|10-7-2024

ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯ ಗಣಿ ಸಂಪತ್ತು ಬಳಸಿ ವ್ಯಾಪಾರ ವಹಿವಾಟು ನಡೆಸುತ್ತಿರುವ ಖಾಸಗಿ ಗಣಿ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆಯನ್ನು ಪ್ರದರ್ಶಿಸಬೇಕು. (Private mining companies) ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡುವುದರ ಜೊತೆಗೆ ಸ್ಥಳೀಯ ಪ್ರದೇಶಾಭಿವೃದ್ಧಿಗೂ ಕೊಡುಗೆ ನೀಡಬೇಕು ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಮುಖವಾಗಿ 8 ಖಾಸಗಿ ಗಣಿ ಕಂಪನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದರಲ್ಲಿ 5 ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯ ಗಣಿ ಸಂಪತ್ತು ಬಳಿಸಿ ಲಾಭ ಗಳಿಸುತ್ತಿರುವ (Private mining companies) ಕಂಪನಿಗಳು ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡುವುದು ಅಗತ್ಯವಾಗಿದೆ.
ಗಣಿ ಮತ್ತು ಅದಿರು ನಿಯಂತ್ರಣ ಅಭಿವೃದ್ಧಿ ನಿಯಮಗಳ ಕಾಯ್ದೆ ಅನುಸಾರ ಗಣಿ ಕಂಪನಿಗಳಿಗೆ ಗುತ್ತಿಗೆ ನೀಡುವ (Private mining companies) ಸಂದರ್ಭದಲ್ಲಿಯೇ ಸ್ಥಳೀಯ ಪ್ರದೇಶ ಹಾಗೂ ಜನರ ಅಭಿವೃದ್ಧಿ ಕಾರ್ಯನಿರ್ವಹಿಸುವ ನಿಬಂಧನೆ ವಿಧಿಸಲಾಗಿರುತ್ತದೆ.
ಸ್ಥಳೀಯ ಭೂಮಿ, ವಿದ್ಯುತ್, ರಸ್ತೆ, ಸಂಪತ್ತು, ಮೂಲಭೂತ ಸೌಕರ್ಯಗಳನ್ನು ಬಳಸಿ ಗಣಿಗಾರಿಕೆ ನಡೆಸುವ ಕಂಪನಿಗಳು ಸ್ಥಳೀಯ ಜನರಿಗೆ ಉದ್ಯೋಗ ನೀಡದೇ ಹೋದರೆ ಹೇಗೆ? ಸಾವಿರಾರು ಜನರು ಅದರಲ್ಲೂ ಯುವಜನರು ಉದ್ಯೋಗ (Private mining companies) ಅರಸಿಕೊಂಡು ಜಿಲ್ಲೆಯಿಂದ ಬೆಂಗಳೂರು, ಮಂಗಳೂರು, ಗೋವಾಗೆ ಗುಳೆ ಹೋಗುತ್ತಾರೆ.
ಜಿಲ್ಲೆಯ ಸಂಪತ್ತು ಜನರಿಗೆ ಉಪಯೋಗವಾಗದಿದ್ದರೆ ಹೇಗೆ? ಗಣಿ ಕಂಪನಿಗಳು ಕೇವಲ ರಾಜ್ಯದ ಬೊಕ್ಕಸಕ್ಕೆ ತೆರಿಗೆ ನೀಡಿದರೆ ಸಾಲದು. ಸ್ಥಳೀಯ ಜನರ ಅಭಿವೃದ್ಧಿಗೂ ಕೊಡುಗೆ ನೀಡಬೇಕು ಎಂದು ಸಂಸದ ಗೋಂವಿದ ಎಂ ಕಾರಜೋಳ ಹೇಳಿದರು.
ಇದರೊಂದಿಗೆ ಗಣಿ ಬಾಧಿತ ಪ್ರದೇಶದ ಅಭಿವೃದ್ಧಿಗೂ ಕಾನೂನು ರೂಪಿಸಲಾಗಿದೆ. ಗಣಿಗಾರಿಕೆಯಿಂದ ಉಂಟಾದ ಪ್ರಕೃತಿ ಹಾನಿಯನ್ನು ಸಮತೋಲನಗೊಳಿಸಲು ಸಹ ಗಣಿ ಕಂಪನಿಗಳು ಸರಿಯಾದ ಕೆಲಸ ಮಾಡಬೇಕು. ಗಣಿ ಕಂಪನಿಗಳ ಸಿ.ಎಸ್.ಆರ್ (ಸಾಮಾಜಿಕ ಹೊಣೆಗಾರಿಕೆ) ನಿಧಿಯಲ್ಲಿ ಸಂಗ್ರಹವಾದ (Private mining companies) ಹಣವೆಷ್ಟು? ಈ ಹಣವನ್ನು ಎಲ್ಲಿ ಬಳಕೆ ಮಾಡಲಾಗಿದೆ? ಗಣಿ ಕಂಪನಿಗಳು ಕಾರ್ಪೋರೇಟ್ ಕಚೇರಿಗಳನ್ನು ಮುಂಬಯಿ, ದೆಹಲಿ ಅಥವಾ ದೂರುದ ಊರುಗಳಲ್ಲಿ ಸ್ಥಾಪಿಸಿ, ಅಲ್ಲಿ ಸಿ.ಎಸ್.ಆರ್. ನಿಧಿ ಬಳಕೆ ಮಾಡುವುದು ತರವಲ್ಲ. ಸ್ಥಳೀಯ ಜನರು ಹಾಗೂ ಪ್ರದೇಶ ಅಭಿವೃದ್ಧಿ ಬಳಸಬೇಕು. ಕುಡಿಯುವ ನೀರು, ಶಾಲೆ-ಕಾಲೇಜು, ರಸ್ತೆ, ಕೆರೆ ಕಟ್ಟೆಗಳ ನಿರ್ಮಾಣಕ್ಕೆ ಗಣಿ ಕಂಪನಿಗಳು ಕೊಡುಗೆ ನೀಡಬೇಕು ಎಂದರು.
ಇದನ್ನೂ ಓದಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕುಸಿದು ಬಿದ್ದ ಮನೆ | House collapse due to short circuit
ಗಣಿ ಅಧಿಕಾರಿಗಳು ರಾಜಸ್ವ ಬೊಕ್ಕಸಕ್ಕೆ ಹಣ ತುಂಬವ ಕೆಲಸ ಮಾಡುವದರ ಜೊತೆಗೆ ಗಣಿ ಕಂಪನಿಗಳ ಸಿ.ಎಸ್.ಆರ್. ನಿಧಿ ಬಳಕೆ ಕುರಿತು ನಿಗಾ ವಹಿಸಬೇಕು. ಮುಂದಿನ ಸಭೆಯಲ್ಲಿ (Private mining companies) ಜಿಲ್ಲೆಯ ಎಲ್ಲಾ ಗಣಿ ಕಂಪನಿಗಳ ಮುಖ್ಯಸ್ಥರು ಸಿ.ಎಸ್.ಆರ್. ನಿಧಿ ಬಳಕೆ ಕುರಿತು ಸಂಪೂರ್ಣ ಮಾಹಿತಿಯೊಂದಿಗೆ ತಪ್ಪದೇ ಭಾಗವಹಿಸುವಂತೆ ಸೂಚನೆ ನೀಡಬೇಕು ಎಂದು ಸಂಸದ ಗೋವಿಂದ ಎಂ ಕಾರಜೋಳ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ:  ತೋಟದ ಮನೆಗೆ ನುಗ್ಗಿ ಮನೆಯವರನ್ನ ಕಟ್ಟಿ ಹಾಕಿ 6.50 ಲಕ್ಷ ದರೋಡೆ | Robbery of 6.50 lakh in Hirehalli

ಕೆಎಂಇಆರ್‍ಸಿ ನಿಧಿ ಬಳಕೆಗೆ ಒತ್ತು:

ಜಿಲ್ಲೆಗೆ ಕೆಎಂಇಆರ್‍ಸಿ ಅಡಿ ರೂ.3792 ಕೋಟಿ ಅನುದಾನ ಲಭ್ಯವಿದ್ದು, ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಜಿಲ್ಲೆಯ ಗಣಿ ಭಾಧಿತ ಪ್ರದೇಶಗಳು ಹಾಗೂ ಇತರೆ ಸ್ಥಳಗಳಲ್ಲಿಯೂ ಅಭಿವೃದ್ಧಿ ಮಾಡಲು ಒತ್ತು ನೀಡಲಾಗುವುದು.
ಕೆಎಂಇಆರ್‍ಸಿ ನಲ್ಲಿ ಪರಿಸರ ಪುನರ್‍ಸ್ಥಾಪನೆಗೆ 555.64 ಕೋಟಿ ರೂ., ಕೃಷಿ ಆಧಾರಿತ ಚಟುವಟಿಕೆಗೆ -391.04 ಕೋಟಿ ರೂ., ಕುಡಿಯುವ ನೀರು, ನೈರ್ಮಲ್ಯ, ಗ್ರಾಮೀಣ ರಸ್ತೆ- 978.68 ಕೋಟಿ, ಆರೋಗ್ಯ ಕ್ಷೇತ್ರ -255.94 ಕೋಟಿ, ಶಿಕ್ಷಣ-330.58 ಕೋಟಿ, ವಸತಿ-106.88 ಕೋಟಿ, ರಸ್ತೆ ಹಾಗೂ ಸಂಪರ್ಕ ವ್ಯವಸ್ಥೆ-620.2 ಕೋಟಿ, ನೀರಾವರಿ-154.70 ಕೋಟಿ ರೂ. ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯ ಚಟುವಟಿಕೆಗಳಿಗಾಗಿ ಒಟ್ಟು  3792. 30 ಕೋಟಿ ರೂ. ನಿಧಿಯನ್ನು ಹಂಚಿಕೆ ಮಾಡಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಬಹುದು. ಈ ಕುರಿತು ರೂಪಿಸಲಾಗಿರುವ ಕ್ರಿಯಾ ಯೋಜನೆಯನ್ನು ಮುಂದಿನ ಸಭೆಯಲ್ಲಿ ಮಂಡಿಸಿ, ಅಗತ್ಯವಿದ್ದಲ್ಲಿ, ಕ್ರಿಯಾಯೋಜನೆಯಲ್ಲಿ ಬದಲಾವಣೆಗೆ ಕ್ರಮ ಕೈಗೊಳ್ಳಬೇಕು ಎಂದು ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಳಿ ಜಿಲ್ಲೆಯ ಕುರಿತು ಚರ್ಚಿಸಿದ್ದೇನೆ. ಅವರ ಸಮ್ಮುಖದಲ್ಲಿಯೇ ಎಲ್ಲಾ ಗಣಿ (Private mining companies) ಕಂಪನಿಗಳ ಮುಖ್ಯಸ್ಥರು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳ ಪರಿಶೀಲನೆ ಸಭೆ ನಡೆಸಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ತಿಳಿಸಿದರು.
ಇದನ್ನೂ ಓದಿ: ಕೋಟೆ ನಾಡಿಗೆ ಆಗಮಿಸಿದ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ | Karnataka Jyoti Rath Yatra
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಗಣಿ ಇಲಾಖೆ ಉಪನಿರ್ದೇಶಕ ಡಾ.ಎಂ.ಜೆ.ಮಹೇಶ್, ಹಿರಿಯ ಭೂವಿಜ್ಞಾನಿ ನಾಗೇಂದ್ರಪ್ಪ ಸೇರಿಂದತೆ ಮತ್ತಿರರು ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಕೋಟೆ ನಾಡಿಗೆ ಆಗಮಿಸಿದ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ | Karnataka Jyoti Rath Yatra
Next Article ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಎಂ.ಎನ್.ಅಹೋಬಳಪತಿ ನೇಮಕ | Member of Karnakata Media Academy
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?