Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕೆಲಸ ಮಾಡದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ: ಶಾಸಕ ಟಿ.ರಘುಮೂರ್ತಿ ಸೂಚನೆ | Progress review meeting
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಕೆಲಸ ಮಾಡದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ: ಶಾಸಕ ಟಿ.ರಘುಮೂರ್ತಿ ಸೂಚನೆ | Progress review meeting
ಇಂದಿನ ಸುದ್ದಿ

ಕೆಲಸ ಮಾಡದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ: ಶಾಸಕ ಟಿ.ರಘುಮೂರ್ತಿ ಸೂಚನೆ | Progress review meeting

Editor Nammajana
Last updated: 27 November 2024 04:01
By Editor Nammajana 2 Min Read
Share
SHARE

Chitradurga news|nammajana.com|27-11-2024

ನಮ್ಮಜನ.ಕಾಂ, ಚಳ್ಳಕೆರೆ: ಪ್ರಗತಿಪರಿಶೀಲನಾ ಸಭೆಗೆ ಬರುವ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಬನ್ನಿ. (Progress review meeting) ಕೆಲಸ ಮಾಡದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಶಾಸಕರು ಸೂಚಿಸಿದ್ದು ಸಿಇಒಗೆ ಶಾಸಕ ಟಿ.ರಘುಮೂರ್ತಿ ಸೂಚನೆ ನೀಡಿದರು.

ಅವರು, ಮಂಗಳವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕೃಷಿ ಇಲಾಖೆ ವರದಿ ನೀಡಿದ ಸಹಾಯಕ ನಿರ್ದೇಶಕ ಅಶೋಕ್, ಈ ಬಾರಿ ವಾಡಿಕೆಗಿಂತಹ ಶೇ.58ರಷ್ಟು ಹೆಚ್ಚು ಮಳೆಯಾಗಿದೆ. ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರದಲ್ಲಿ ಉತ್ತಮ (Progress review meeting) ಮಳೆಯಾಗಿದೆ. 982 ಹೆಕ್ಟೇರ್ ಪ್ರದೇಶದ ಶೇಂಗಾ ಬೆಳೆ ಮಳೆಯಿಂದ ನಾಶವಾದ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಾಗಿದೆ ಎಂದರು.

ಈ ವೇಳೆ ಶಾಸಕರು ಕಳೆದ ಸೆಪ್ಟಂಬರ್‌ನಿಂದ ಮಳೆ ಬಂದಿದೆ. ಪ್ರಾರಂಭದ ಜೂನ್, ಜುಲೈ ತಿಂಗಳಲ್ಲಿ ರೈತರು ಬಿತ್ತನೆಮಾಡಿದ್ದ ಶೇಂಗಾ ಸಂಪೂರ್ಣ ನಾಶವಾಗಿತ್ತು. ಈ ಬಗ್ಗೆ ವರದಿಯನ್ನು ಪ್ರತ್ಯೇಕವಾಗಿ ಸಿದ್ದಪಡಿಸಿ ಸರ್ಕಾರಕ್ಕೆ ಕಳಿಸುವಂತೆ ಸೂಚನೆ ನೀಡಿದರು.ಕ್ಷೇತ್ರದ ತೊಗರಿಬೆಳೆಗಾರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತೋಟಗಾರಿಕೆ ಅಧಿಕಾರಿ ವಿರೂಪಾಕ್ಷಪ್ಪ ಮಾಹಿತಿ ನೀಡಿ, ತಾಲ್ಲೂಕಿನಾದ್ಯಂತ ಒಟ್ಟು 62 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಇವೆ. ಮಳೆ ಅನಾವೃಷ್ಠಿಯಿಂದ 53 ಲಕ್ಷ ಮೌಲ್ಯದ ತೋಟಗಾರಿಕೆ ಬೆಳೆನಷ್ಟವಾಗಿದೆ ಎಂದರು.

ಪಶುವೈದ್ಯಾಧಿಕಾರಿ ರೇವಣ್ಣ ಮಾಹಿತಿ ನೀಡಿ, ಅನುಗ್ರಹ ಯೋಜನೆಯಲ್ಲಿ 996 ಅರ್ಜಿ ಸಲ್ಲಿಕೆಯಾಗಿವೆ, 606 ಅರ್ಜಿಗಳಿಗೆ ಪರಿಹಾರ ನೀಡಿದ್ದು, 390 ಅರ್ಜಿಗಳಿಗೆ ಪರಿಹಾರ ನೀಡಬೇಕಿದೆ ಎಂದರು. ರೇಷ್ಮೆ ಅಧಿಕಾರಿ ಉಮಾಪತಿ, ಪ್ರಸ್ತುತ ವರ್ಷ ಹೊಸದಾಗಿ 30 ಹೆಕ್ಟೇರ್ ಪ್ರದೇಶದಲ್ಲಿ ರೇಷ್ಮೆಬೆಳೆ ಬೆಳೆಯಲಾಗಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಸೋರುತ್ತಿರುವ ಶಾಲೆಗಳ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಮುಖ್ಯಮಂತ್ರಿಗಳಿಂದ 8 ಕೋಟಿ, ನನ್ನ ಅನುದಾನದಲ್ಲಿ 16 ಕೋಟಿ ಒಟ್ಟು 24 ಕೋಟಿ ಹಣವನ್ನು ಕೆಆರ್‌ಐಡಿಎಲ್, (Progress review meeting) ನಿರ್ಮಿತಿ ಕೇಂದ್ರ, ಲೋಕೋಪಯೋಗಿ, ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗಕ್ಕೆ ನೀಡಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೂಚನೆ ನೀಡಿದರು.

ಸಿಡಿಪಿಒ ಹರಿಪ್ರಸಾದ್, 8 ಅಂಗನವಾಡಿ ಕಟ್ಟಡ ಶಿಥಿಲಗೊಂಡಿದ್ದು ಅವುಗಳನ್ನುಬೇರೆಡೆ ಸ್ಥಳಾಂತರ ಮಾಡಲಾಗಿದೆ ಎಂದರು.

ಇದನ್ನೂ ಓದಿ: Dina Bhavishya: 27 ನವೆಂಬರ್ 2024 | ಯಾವ್ಯಾವ ರಾಶಿ ಶುಭ ಯೋಗ, ಸಂಕಷ್ಟ ನೋಡಿ

ಪ್ರಗತಿಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಾಲ್ಲೂಕುಪಂಚಾಯಿತಿ ಆಡಳಿತಾಧಿಕಾರಿ ಟಿ.ಮಂಜುನಾಥ, ತಹಶೀಲ್ಧಾರ್ ರೇಹಾನ್‌ಪಾಷ, ಇಒ ಶಶಿಧರ. ತಾಲ್ಲೂಕು ಮಟ್ಟದ ಅಧಿಕಾರಿಗಳು ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: ವಿ ವಿ ಸಾಗರ ಜಲಾಶಯ | 27 ನವೆಂಬರ್ 2024 | ಎಷ್ಟಿದೆ ಇಂದಿನ ನೀರಿನ ಮಟ್ಟ ? | Vani Vilasa Sagara

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChallakereChitradurga NewsContract WorksCrop DestructionCrop InsuranceKannada Newskannada suddiMLANammajana.comProgress Review MeetingT RaghumurthyTaluk Level Officersಕನ್ನಡ ನ್ಯೂಸ್ಕನ್ನಡ ಸುದ್ದಿಗುತ್ತಿಗೆ ಕೆಲಸಗಳುಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಟಿ ರಘುಮೂರ್ತಿತಾಲೂಕು ಮಟ್ಟದ ಅಧಿಕಾರಿಗಳುನಮ್ಮಜನ.ಕಾಂಪ್ರಗತಿ ಪರಿಶೀಲನಾ ಸಭೆಬೆಳೆ ನಾಶಬೆಳೆ ವಿಮೆಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಿ ವಿ ಸಾಗರ ಜಲಾಶಯ | 27 ನವೆಂಬರ್ 2024 | ಎಷ್ಟಿದೆ ಇಂದಿನ ನೀರಿನ ಮಟ್ಟ ? | Vani Vilasa Sagara
Next Article ಬೌದ್ದರ ಧಾರ್ಮಿಕ ಹಕ್ಕಿಗಾಗಿ ಬಿಟಿ ಕಾಯಿದೆ-1949 ನ್ನು ರದ್ದುಪಡಿಸಿ | Buddhist religion
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?