Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Farmers: ವಿವಿಧ ಬೇಡಿಕೆ ಈಡೇರಿಸಲು ರೈತ ಸಂಘ ಆಗ್ರಹ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Farmers: ವಿವಿಧ ಬೇಡಿಕೆ ಈಡೇರಿಸಲು ರೈತ ಸಂಘ ಆಗ್ರಹ
ಇಂದಿನ ಸುದ್ದಿ

Farmers: ವಿವಿಧ ಬೇಡಿಕೆ ಈಡೇರಿಸಲು ರೈತ ಸಂಘ ಆಗ್ರಹ

Nammajana Sub Editor
Last updated: 19 July 2025 11:56 AM
By Nammajana Sub Editor 3 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 19-07-2025

ನಮ್ಮಜನ.ಕಾಂ,ಚಿತ್ರದುರ್ಗ: ಗೃಹ ಮತ್ತು ವಾಣಿಜ್ಯ ಬಳಕೆಯ ವಿದ್ಯುತ್‌ಗೆ ವಿಧಿಸುವ ಕನಿಷ್ಠ(Farmers) ಚಾರ್ಜನ್ನು ಸಂಪೂರ್ಣವಾಗಿ ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ರೈತ ಸಂಘಗಳ ಸಮನ್ವಯ ಮತ್ತು ಅನುಷ್ಠಾನ ಸಮಿತಿ ವತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

nammajana

ಇದನ್ನೂ ಓದಿ: PDO ಅಮಾನತಿಗೆ ಒತ್ತಾಯ

ಎಪಿಎಂಸಿ ಯಿಂದ ಮೆರವಣಿಗೆ ಮೂಲಕ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದ ನೂರಾರು ರೈತರು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಧಿಕ್ಕಾರಗಳನ್ನು ಕೂಗಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ ಮಾತನಾಡಿ, ನೆರೆಯ ರಾಜ್ಯಗಳಾದ ಕೇರಳ ಮತ್ತು ಆಂಧ್ರಗಳಲ್ಲಿ ಕೇವಲ 900 ರು.ಗಳಿಗೆ ಸ್ಮಾರ್ಟ್ ಮೀಟರ್ ಸಿಗುತ್ತದೆ. ಅದೆ ನಮ್ಮ ರಾಜ್ಯದಲ್ಲಿ 10 ಸಾವಿರ ರು. ಗಳಿಗೆ ಸ್ಮಾರ್ಟ್ ಮೀಟರ್‌ಅಳವಡಿಸಲು ಹೊರಟಿರುವುದು ಯಾವ ಪುರುಷಾರ್ಥಕ್ಕಾಗಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಜನರ ತೆರಿಗೆ ಹಣದಲ್ಲಿ ದುಬಾರಿ ಸ್ಮಾರ್ಟ್‌ ಮೀಟರ್‌ಖರೀಧಿಸುವ ಅವಶ್ಯಕತೆಯೇನಿತ್ತು

ವಿವಿಧ ಬೇಡಿಕೆಗಳ(Farmers) ಈಡೇರಿಕೆಗಾಗಿ ಜಿಲ್ಲಾ ರೈತ ಸಂಘಗಳ ಸಮನ್ವಯ ಮತ್ತು ಅನುಷ್ಠಾನ ಸಮಿತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ: Today Gold Rate | ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ

ಎಂದು ಪ್ರಶ್ನಿಸಿದರು. 2003 ರಿಂದ ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳು ರೈತರನ್ನು ಕಡೆಗಣಿಸುತ್ತಲೆ ಬರುತ್ತಿವೆ. ತುಮಕೂರು, ಚಿಕ್ಕಮಗಳೂರು, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗಳು ಅಭಿವೃದ್ಧಿಯಾಗಿವೆ. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದಿದ್ದರೂ ಚಿತ್ರದುರ್ಗ ಜಿಲ್ಲೆ ಇನ್ನು ಬರಗಾಲದಿಂದ ಹೊರಬರಲು ಆಗಿಲ್ಲ. ಸುಸ್ಥಿತಿಯಲ್ಲಿರುವ ಮೀಟರ್

ಗಳನ್ನು ಬಳಸಿ ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸಿ ರೈತರನ್ನು ಆರ್ಥಿಕವಾಗಿ ದಿವಾಳಿಯನ್ನಾಗಿಸುವ ಕುತಂತ್ರ ನಡೆಸುತ್ತಿದೆ. ನಿಮ್ಮ ನಿಮ್ಮ ಹಳ್ಳಿಗಳಲ್ಲಿ ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸಲು ಬಿಡಬೇಡಿ. ಒಂದೊಮ್ಮೆ ಹಾಕಿದ್ದರೆ ಕಿತ್ತು ತನ್ನಿ. ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಹಿಂದಿರುಗಿಸೋಣ ಎಂದು ರೈತರನ್ನು ಜಾಗೃತಿಗೊಳಿಸಿದರು.

ರೈತ ಮುಖಂಡ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ, 45 ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಪ್ರಕೃತಿ(Farmers) ವಿಕೋಪವಾದರೂ ಕೃಷಿ ಯನ್ನು ನಿಲ್ಲಿಸಿಲ್ಲ. ದೇಶಕ್ಕೆ ಅನ್ನ ನೀಡುತ್ತಿರುವ ರೈತರ ಜಮೀನುಗಳನ್ನು ಕಿತ್ತುಕೊಂಡು ಬಂಡವಾಳ ಶಾಹಿಗಳಿಗೆ ನೀಡಲು ಹೊರಟಿರುವ ರಾಜ್ಯ ಸರ್ಕಾರ ಅವೈಜ್ಞಾನಿಕ ಕಾನೂನುಗಳನ್ನು ಜಾರಿಗೆ ತರುತ್ತಿದೆ. ನೀರು, ವಿದ್ಯುತ್, ಬೆಂಬಲ ಬೆಲೆ ಕೇಳುತ್ತಿದ್ದೇವೆ.

ಸ್ವಾಮಿನಾಥನ್ ವರದಿ ಜಾರಿಯಾಗುವತನಕ ಹೊಸ ಕಾಯಿದೆಗಳನ್ನು ಜಾರಿಗೆ ತರಬಾರದು. ಇಂಧನ ಹೊಂದಾಣಿಕೆ ಶುಲ್ಕವೆಂದು ಪ್ರತಿ ಯೂನಿಟ್‌ಗೆ 36 ಪೈಸೆ ವಿಧಿಸುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: Counselling: ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ | ಜು.21ರಂದು ಸೀಟು ಹಂಚಿಕೆ ಕೌನ್ಸಿಲಿಂಗ್

ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಐದು ಉಚಿತ ಗ್ಯಾರಂಟಿಗಳನ್ನು ಘೋಷಿಸಿ ರೈತರ ತಲೆ ಮೇಲೆ ಕಲ್ಲು ಹಾಕಿದೆ. ಸ್ಮಾರ್ಟ್ ಮೀಟ‌ರ್ ಅಳವಡಿಕೆಯಿಂದ ರೈತರ ಬದುಕು ನಾಶವಾಗುತ್ತಿದೆ. ಯಾವುದೇ ಕಾರಣಕ್ಕೂ ಸ್ಟಾರ್ಟ್ ಮೀಟರ್‌ ಅಳವಡಿಸಲು ಬಿಡಲ್ಲ. ಹಠ ಬಿಡದೆ ಹಾಕಿದರೆ ಸುಟ್ಟು ಹಾಕುತ್ತೇವೆಂದು ಎಚ್ಚರಿಕೆ ನೀಡಿದರು.

ರೈತ ಮುಖಂಡ ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ, ಒಂದು ಸ್ಟಾರ್ಟ್ ಮೀಟರ್‌ಗೆ 10 ಸಾವಿರ ರು. ನೀಡಿ ರಾಜ್ಯ ಸರ್ಕಾರ ಖರೀಧಿಸಲು ಹೊರಟಿದೆ. ದೊಡ್ಡ ಮಟ್ಟದಲ್ಲಿ ಲೂಟಿ ಹೊಡೆಯುವ ಹುನ್ನಾರವಿದು. ಕೂಡಲೆ(Farmers) ತಮ್ಮ ನಿರ್ಧಾರದಿಂದ ಹಿಂದಕ್ಕೆ ಸರಿಯ ಬೇಕು. ಸ್ಮಾರ್ಟ್ ಮೀಟ‌ರ್ ಅಳವಡಿಸಲು ಅವಕಾಶ ಕೊಡುವುದಿಲ್ಲ. ಮಿನಿಮಮ್ ಚಾಜನ್ ನಿಲ್ಲಿಸದಿದ್ದಲ್ಲಿ ಅದಕ್ಕೆ ಅನುಗುಣವಾಗಿ ಮಿನಿಮಮ್ ಯೂನಿಟ್ ವಿದ್ಯುತ್‌ನ್ನು ಉಚಿತವಾಗಿ ಪೂರೈಸಬೇಕೆಂದು ಆಗ್ರಹಿಸಿದರು.

ಬಸ್ತಿಹಳ್ಳಿ ಜಿ.ಸುರೇಶ್‌ಬಾಬು ಮಾತನಾಡಿ, ಪ್ರತಿ ಹಳ್ಳಿಗಳಲ್ಲಿ ಸರ್ಕಾರಸ್ಮಾರ್ಟ್ ಮೀಟರ್‌ ಅಳವಡಿಸಲು ಹೊರಟಿರುವುದನ್ನು ನಿಲ್ಲಿಸಬೇಕಾಗಿರುವುದರಿಂದ ಮೊದಲು ರೈತರು ಒಗ್ಗಟ್ಟಾಗಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ: Lokayukta: ಲೋಕಾಯುಕ್ತ ಅಧಿಕಾರಿಗಳ ಪ್ರವಾಸ : ಸಾರ್ವಜನಿಕರ ಅಹವಾಲು ಸ್ವೀಕಾರ

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನ ಮಾಳಿಗೆ, ಎಸ್.ಕೆ.ಕುಮಾರಸ್ವಾಮಿ, ಮೇಟಿಕುರ್ಕೆತಿಪ್ಪೇಸ್ವಾಮಿ, ಬಿ.ಎಸ್.ರಂಗಸ್ವಾಮಿ, ಎಚ್.ಪ್ರಸನ್ನ, ಎಸ್.ಮಂಜು ನಾಥ, ಕೆ.ರಾಜಪ್ಪ, ಎಸ್. ಗೋಪಾಲಪ್ಪ, ಜೆ.ತಿಮ್ಮಪ್ಪ, ಸಿದ್ದರಾಜು, ಆರ್.ಬಿ.ಲೋಕೇಶ್, ಅಖಂಡ ಕರ್ನಾ ಟಕ ರೈತ ಸಂಘದ ಜಿಲ್ಲಾಧ್ಯಕ್ಷೆ ಶಾಂತಮ್ಮ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ

ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?

TAGGED:ChitradurgaChitradurga NewsDemandFarmers AssociationKannada Newskannada suddiNammajana.comProtestSmart meterಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಸುದ್ದಿನಮ್ಮಜನ.ಕಾಂಪ್ರತಿಭಟನೆಬೇಡಿಕೆರೈತ ಸಂಘಸ್ಮಾರ್ಟ್ ಮೀಟರ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ದುರ್ಗದ ಸಿರಿ ಹೋಟೆಲ್ ನಲ್ಲಿ ಅಕ್ರಮ ಇಸ್ಪೀಟ್ ದಂಧೆ, 32 ಜೂಜುಕೋರರ ಬಂಧನ Ispeet
Next Article ಒಳ ಮೀಸಲಾತಿ ವಿಳಂಬ, ರಾಜ್ಯ ಸರ್ಕಾರದ ವಿರುದ್ದ ರಾಜ್ಯ ಬಂದ್ ಕರೆ: ಮಾಜಿ ಸಂಸದ ಎ.ನಾರಾಯಣಸ್ವಾಮಿ ಎಚ್ಚರಿಕೆ | A. Narayanaswamy
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ
ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ : Power cut
ಇಂದಿನ ಸುದ್ದಿ
ಹಿಂಬಾಕಿ ನೀಡದಿದ್ದರೆ ಆ.5 ರಿಂದ KSRTC ಬಸ್ ಓಡಾಟ ಬಂದ್
ಇಂದಿನ ಸುದ್ದಿ
ಜಡೆಕುಂಟೆ ಮಂಜುನಾಥ್ ಅವರ ‘ಕಾಡು ಕಾಯುವ ಮರ’ ಕೃತಿ ಲೋಕಾರ್ಪಣೆ ನಾಳೆ
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?