Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಳ್ಳಕೆರೆ | ಚಿತ್ತಮಳೆಯ ಅವಾಂತರ | ಕೊಚ್ಚಿ ಹೋದ ಈರುಳ್ಳಿ, ಮೆಕ್ಕೆಜೋಳ | Rain Damage
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಳ್ಳಕೆರೆ | ಚಿತ್ತಮಳೆಯ ಅವಾಂತರ | ಕೊಚ್ಚಿ ಹೋದ ಈರುಳ್ಳಿ, ಮೆಕ್ಕೆಜೋಳ | Rain Damage
ಇಂದಿನ ಸುದ್ದಿ

ಚಳ್ಳಕೆರೆ | ಚಿತ್ತಮಳೆಯ ಅವಾಂತರ | ಕೊಚ್ಚಿ ಹೋದ ಈರುಳ್ಳಿ, ಮೆಕ್ಕೆಜೋಳ | Rain Damage

Editor Nammajana
Last updated: 19 October 2024 18:00
By Editor Nammajana 2 Min Read
Share
SHARE

Chitradurga news|nammajana.com|19-10-2024

ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನಾದ್ಯಂತ ಚಿತ್ತಮಳೆ ಪ್ರಾರಂಭವಾಗಿ ಕೇವಲ ಹತ್ತು ದಿನಗಳಾಗಿವೆ. ಕಳೆದ (Rain Damage) ಅ.೧೦ರಿಂದ ಮಳೆಪ್ರಾರಂಭವಾಗಿ ತಾಲ್ಲೂಕಿನ ಯಾವುದೇ ಪ್ರದೇಶ ಒಣಗದಂತೆ ಎಲ್ಲೆಡೆ ಸರಾಗವಾಗಿ ಸಮೃದ್ದಿಯಾಗಿ ನೀರು ನಿಂತು ಚಿತ್ತಮಳೆಯ ವೈಭವವನ್ನು ಜನರು ಸವಿಯುತ್ತಿದ್ದಾರೆ.

ತಾಲ್ಲೂಕಿನ ನಾಯಕನಹಟ್ಟಿ, ತಳಕು, ಕಸಬಾ ಹೋಬಳಿ ಸೇರಿದಂತೆ ಎಲ್ಲೆಡೆ ನಿರೀಕ್ಷೆಗೂ ಮೀರಿದ ಮಳೆಯಾಗಿದೆ. ವಿಶೇಷವಾಗಿ ನಾಯಕನಹಟ್ಟಿ ಹೋಬಳಿಯ ಬಹುತೇಕ ಎಲ್ಲಾ ಕೆರೆ ತುಂಬಿದರೆ, ಕೆಲವು ಕೆರೆಗಳು ಕೋಡಿ ಬಿದ್ದಿವೆ.

ತಳಕು ಹೋಬಳಿ ಮಟ್ಟದಲ್ಲೂ ಚಿತ್ತಮಳೆಯ ಆರ್ಭಟ ಜೋರಾಗಿದೆ. ಈ ಭಾಗದಲ್ಲೂ ಸಹ ಹಲವಾರು ಕೆರೆಗಳು ತುಂಬಿವೆ. ಕಸಬಾಹೋಬಳಿ ಮಟ್ಟದಲ್ಲೂ ಸಹ ಮಳೆಯ ಪ್ರಮಾಣ ಗಣನೀಯವಾಗಿ ಏರಿದೆ. ರೈತರ ಬೆಳೆಗಳಿಗೆ ನೀರು ನುಗ್ಗಿನಷ್ಟವಾದರೆ, ಕೆಲವೆಡೆ ಮನೆಗಳು ಕುಸಿದು ಬಿದ್ದಿವೆ. (Rain Damage) ಜಾನುವಾರುಗಳು ಸಹ ನೀರಿನಲ್ಲಿ ತೇಲಿಹೋಗಿವೆ.

ಈ ವರ್ಷದ ಚಿತ್ತಮಳೆಯ ವಿಶೇಷವೆಂದರೆ ನಗರ ವ್ಯಾಪ್ತಿಯ ಅಜ್ಜಯ್ಯನಗುಡಿ ಕೆರೆತುಂಬಿ ಕೋಡಿ ಬಿದ್ದಿದೆ. ಇದಕ್ಕೆ ಹೊಂದಿಕೊಂಡಿರುವ ಕರೇಕಲ್ ಕೆರೆಯೂ ಸಹ ತುಂಬಿದ್ದು ಇನ್ನೂ ಕೆಲವೇ ದಿನಗಳಲ್ಲಿ ಕೋಡಿಬೀಳುವ ಸಂಭವವಿದೆ. ನಾಯಕನಹಟ್ಟಿ ಹೋಬಳಿಯ ಭೀಮನಕೆರೆ ಗ್ರಾಮದ ಕೆರೆ ಬಹಳ ವರ್ಷಗಳ ನಂತರ ಕೋಡಿ ಬಿದಿದ್ದು, ಕೋಡಿ ನೀರಿನಲ್ಲಿ ೭ ಕುರಿಗಳು ಕೊಚ್ಚಿ ಹೋಗಿವೆ.

ನೀರಿನಲ್ಲಿ ಸಿಲುಕಿದ ಬಸ್ : (Rain Damage)

ಖಾಸಗಿ ಶಾಲೆಗೆ ಮಕ್ಕಳನ್ನು ಕರೆತರುತ್ತಿದ್ದ ಕಾಲೇಜು ಬಸ್ ತಳಕು ಗ್ರಾಮದ ತಳಕು ಗ್ರಾಮದ ರೈಲ್ವೆ ಬ್ರಿಡ್ಜ್ ಕೆಳಗೆ ಸಾಗುವಾಗ ನಿಂತಿದ್ದು ಗ್ರಾಮಸ್ಥರು ಬಸನ್ನು ದಡಕ್ಕೆ ತಂದಿದ್ದಾರೆ. ಕೆಲಕಾಲ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾದರು.

ಇದೇ ಹೋಬಳಿಯ ವರವು ಗ್ರಾಮದಲ್ಲಿ ಪುರಿಚೆನ್ನಯ್ಯನಹಟ್ಟಿಯ ಗಗ್ಗಬೋರಯ್ಯ ಎಂಬುವವರ ಜಮೀನಿನಲ್ಲಿದ್ದ ಈರುಳ್ಳಿ, ಮೆಕ್ಕೆಜೋಳ, ರಾಗಿ ಬೆಳೆನೀರಿನಲ್ಲಿ ಕೊಚ್ಚಿಹೋಗಿ ಸುಮಾರು ಎರಡು ಲಕ್ಷ ನಷ್ಟ ಸಂಭವಿಸಿದೆ.

ಗಂಪಲೋಬಯ್ಯನ ಕಪ್ಪಿಲೆಯಲ್ಲಿದ್ದ ಸುಮಾರು ೧೦ ಮನೆಗಳಿಗೆ ನೀರು ನುಗ್ಗಿದ್ದು ಮನೆಯಲ್ಲಿನ ಎಲ್ಲಾ ವಸ್ತುಗಳು ನೀರಿನಲ್ಲಿ ತೇಲಿವೆ. ಮನೆಗೆ ನೀರು ನುಗ್ಗಿದ ಸಂದರ್ಭದಲ್ಲಿ ಮನೆಯಲ್ಲಿದ್ದ ಪುಟ್ಟಮಕ್ಕಳು, ಮಹಿಳೆಯರು ಪ್ರಾಣ ರಕ್ಷಿಸಿಕೊಳ್ಳಲು (Rain Damage) ಪ್ರಯಾಸಪಟ್ಟಿದ್ಧಾರೆ.

ಕುದಾಪುರ ಗ್ರಾಮದ ಸರ್ವೆ ನಂ ೩೭ರಲ್ಲಿದ್ದ ಶೇಂಗಾ ಬೆಳೆ ನೀರಿನಲ್ಲಿ ಕೊಚ್ಚಿಹೋಗಿ ಲಕ್ಷಾಂತರ ನಷ್ಟ ಸಂಭವಿಸಿದೆ. ಇದೇ ಗ್ರಾಮದ ಪಾರ್ವತಿಬಾಯಿ ಎಂಬುವವರ ಜಮೀನಿನಲ್ಲಿದ್ದ ರಾಗಿ, ತೊಗರಿ ಬೆಳೆ ನೀರಿನಲ್ಲಿ ಮುಳುಗಿ ಸಂಪೂರ್ಣ ನಷ್ಟವಾಗಿದೆ. ರಾಮಾನಾಯ್ಕ ಎಂಬುವವರ ಎರಡು ಎಕರೆ ಶೇಂಗಾ ಬೆಳೆ ನೀರಿನಲ್ಲಿ ಕೊಚ್ಚಿಹೋಗಿ೫೦ ಸಾವಿರ ನಷ್ಟವಾಗಿದೆ.

ಮನೆಗಳಿಗೆ ಹಾನಿ:

ಏಕಾಏಕಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮವಾಗಿ (Rain Damage) ಹಲವಾರು ಮನೆಗಳು ಕುಸಿದು ಬಿದ್ದಿವೆ. ಘಟಪರ್ತಿ ಗ್ರಾಮದ ತಿಪ್ಪಮ್ಮ ಎಂಬುವವರ ಮನೆಗೆ ನೀರು ನುಗ್ಗಿ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಹಾಳಾಗಿ ೪೦ ಸಾವಿರ ನಷ್ಟ ಸಂಭವಿಸಿದೆ.

ಇದನ್ನೂ ಓದಿ: ಶಾಸಕ ರಘುಮೂರ್ತಿ ಮಗಳ ಮದುವೆಗೆ ಸಿಂಗಾರಗೊಂಡ ಚಳ್ಳಕೆರೆ, ಜನರ ಕಣ್ಮನ ಸೆಳೆಯುತ್ತಿರುವ ಮದುವೆ ಮಂಟಪ | Daughter marriage

ಎನ್.ಗೌರಿಪುರ ಗ್ರಾಮದ ಶಿವಮ್ಮ, ರಾಮಾಂಜನೇಯರವರ ಮನೆಗಳು ಕುಸಿದುಬಿದ್ದು ೯೦ ಸಾವಿರ ನಷ್ಟವಾಗಿದೆ. ಇದೇ ಗ್ರಾಮದ ಪಾರ್ವತಿಬಾಯಿ ಎಂಬುವವರ ಮನೆ ಕುಸಿದು ೪೫ ಸಾವಿರ ನಷ್ಟಸಂಭವಿಸಿದೆ. ಗೌಡಗೆರೆ ಗ್ರಾಮದ ತಿಪ್ಪಮ್ಮ ಎಂಬುವವರ ಮನೆಕುಸಿದು ಬಿದ್ದು ೨೫ ಸಾವಿರ ನಷ್ಟ ಸಂಭವಿಸಿದೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChallakereChitradurgaChitradurga NewsChitradurga Rain reportKannada Newskannada rain reportkannada suddiLake KodiNammajana.comrainrain damagerain forecastRain reportಕನ್ನಡ ನ್ಯೂಸ್ಕನ್ನಡ ಮಳೆ ವರದಿಕನ್ನಡ ಸುದ್ದಿಕೆರೆ ಕೋಡಿಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಮಳೆಚಿತ್ರದುರ್ಗ ಮಳೆ ವರದಿಚಿತ್ರದುರ್ಗ ಸುದ್ದಿನಮ್ಮಜನ.ಕಾಂಮಳೆಮಳೆ ಮುನ್ಸೂಚನೆಮಳೆ ವರದಿಮಳೆ ಹಾನಿವರುಣ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಶಾಸಕ ರಘುಮೂರ್ತಿ ಮಗಳ ಮದುವೆಗೆ ಸಿಂಗಾರಗೊಂಡ ಚಳ್ಳಕೆರೆ, ಜನರ ಕಣ್ಮನ ಸೆಳೆಯುತ್ತಿರುವ ಮದುವೆ ಮಂಟಪ | Daughter marriage
Next Article ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕರೆಂಟ್ ಇರಲ್ಲ | ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ | POWER CUT
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?