Chitradurga news | nammajana.com | 28-8-2024
ನಮ್ಮಜನ.ಕಾಂ, ಚಿತ್ರದುರ್ಗ: ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಣೆ ಮಾಡಿಸಲು ಆಗಸ್ಟ್ 31 ಅಂತಿಮ ಗಡುವು (Ration card) ನಿಗದಿಪಡಿಸಿದ್ದು, ಇ-ಕೆವೈಸಿ ಸಂಗ್ರಹಣೆಯಾಗಿಲ್ಲದ ಪಡಿತರ ಚೀಟಿದಾರರು ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಪಡಿತರ ಚೀಟಿದಾರರ ಇ.ಕೆ.ವೈ.ಸಿ ಸಂಗ್ರಹಣೆಯನ್ನು 2017ರಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಸಂಗ್ರಹಣೆ ಮಾಡಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯ ಇ-ಕೆ.ವೈ.ಸಿ ಸಂಗ್ರಹಣೆಯ ಪ್ರಗತಿಯನ್ನು ಪರಾಮರ್ಶೆ ಮಾಡಲಾಗಿ, (Ration card) ಇದುವರೆಗೂ ಜಿಲ್ಲೆಯಲ್ಲಿ ಅಂತ್ಯೋದಯ ಪಡಿತರ ಚೀಟಿ ಸದಸ್ಯರ ಶೇ.96.34 ಮತ್ತು ಆದ್ಯತಾ ಪಡಿತರ ಚೀಟಿ ಸದಸ್ಯರ ಶೇ.97.18 ಸೇರಿದಂತೆ ಒಟ್ಟು ಶೇ.97.07ರಷ್ಟು ಇ-ಕೆ.ವೈ.ಸಿ ಸಂಗ್ರಹಣೆ ಮಾಡಲಾಗಿದೆ.
ಪಡಿತರ ಚೀಟಿಯಲ್ಲಿನ ಸದಸ್ಯರ ಇ-ಕೆ.ವೈ.ಸಿ ಸಂಗ್ರಹಣೆಯಾಗದೇ ಇದ್ದಲ್ಲಿ ಮುಂಬರುವ ದಿನಗಳಲ್ಲಿ ಅಂತಹ ಪಡಿತರ ಚೀಟಿಗಳು, ಸದಸ್ಯರುಗಳ ಹೆಸರುಗಳು ಪಡಿತರ (Ration card) ಚೀಟಿಗಳಿಂದ ಬಿಟ್ಟು ಹೋಗುವ ಮತ್ತು ಆಹಾರಧಾನ್ಯ ಹಂಚಿಕೆ ಸ್ಥಗಿತಗೊಳ್ಳುವ ಸಂಭವವಿರುತ್ತದೆ.
ಆಗಸ್ಟ್ 31 ಕೊನೆ ದಿನ ಇ-ಕೆ.ವೈಸಿ ಮಾಡಿಸಿ
ಆದ್ದರಿಂದ ಇ-ಕೆ.ವೈ.ಸಿ ಸಂಗ್ರಹಣೆಯಾಗಿಲ್ಲದ್ದ ಪಡಿತರ ಚೀಟಿದಾರರು, ಸದಸ್ಯರು ಇದೇ ಆಗಸ್ಟ್ 31ರೊಳಗೆ (Ration card) ಮಾಡಿಸಬೇಕು.
ತಾವು ರಾಜ್ಯದ, ಜಿಲ್ಲೆಯ, ತಾಲ್ಲೂಕಿನ, ಹಳ್ಳಿಯ, ತಾವು ಇರುವ ಸ್ಥಳದಲ್ಲಿಯೇ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಜೀವಮಾಪನ ನೀಡಿ ಇ-ಕೆ.ವೈ.ಸಿ ಸಂಗ್ರಹಿಸಿಕೊಳ್ಳಲು ಪಡಿತರ ಚೀಟಿದಾರರಿಗೆ ಅಂತಿಮ ಗಡುವು ನೀಡಿದ್ದು, ತಪ್ಪದೇ (Ration card) ಇ.ಕೆ.ವೈ.ಸಿ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252