Chitradurga News | Nammajana.com | 26-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ರಾಜ್ಯ (Recruitment) ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (Para Legal Volunteers) ಕಾರ್ಯನಿರ್ವಹಿಸಲು ಆಸಕ್ತಿಯನ್ನು ಹೊಂದಿರುವ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಕ್ಟೋಬರ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: Rabies vaccine: ಗ್ರಾ.ಪಂ. ಸಹಯೋಗದೊಂದಿಗೆ ಬೀದಿ ನಾಯಿಗಳಿಗೆ ರೇಬಿಸ್ ಲಸಿಕೆ | ಉಪನಿರ್ದೇಶಕ ಡಾ.ಎನ್.ಕುಮಾರ್
ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು, ಪಂಚಾಯಿತಿ ಸದಸ್ಯರು, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸಿರುವ ನಿವೃತ್ತ ಸರ್ಕಾರಿ ನೌಕರರು, ಸಾಮಾಜಿಕ ಸೇವಾ ಮನೋಭಾವ ಇರುವ ಕಾರ್ಯಕರ್ತರು, ಮಹಿಳೆಯರು, ಮಂಗಳಮುಖಿಯರು, ಅಲ್ಪಸಂಖ್ಯಾತರು, ಎಂಎಸ್ಡಬ್ಲ್ಯೂ ವಿದ್ಯಾರ್ಥಿ ಹಾಗೂ ಪ್ರಾಧ್ಯಾಪಕರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ಕಾನೂನು ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ನಿವೃತ್ತ ಸೈನಿಕರು, ಸೈನಿಕರ ಕುಟುಂಬದ ಸದಸ್ಯರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಮತ್ತು ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಮತ್ತು ಸ್ವ ಸಹಾಯ ಸಂಘಗಳ ಸದಸ್ಯರನ್ನು ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ ಅಂತ ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಬೇಕಾಗಿರುವುದರಿಂದ ಸೇವಾ ಮನೋಭಾವನೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿಗಧಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಅದನ್ನು ಭರ್ತಿ ಮಾಡಿ ಅಕ್ಟೋಬರ್ 08ರ ಸಂಜೆ 5 ರ ಅವಧಿಯ ಒಳಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖುದ್ದಾಗಿ ಸಲ್ಲಿಸಲು ತಿಳಿಸಿದೆ.
ಕಳೆದ ವರ್ಷದಲ್ಲಿ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (PLV) ನೇಮಕಗೊಂಡು ಮುಂದಿನ ವರ್ಷಕ್ಕೆ ಕರ್ತವ್ಯ ನಿರ್ವಹಿಸಲು ಆಸಕ್ತರಿರುವವರು ಒಪ್ಪಿಗೆ ಪತ್ರವನ್ನು ಮೇಲೆ ಹೇಳಿದ ದಿನಾಂಕದೊಳಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಲು ಸೂಚಿಸಲಾಗಿದೆ.
ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕೆಲಸ ನಿರ್ವಹಿಸಲು ಯಾವುದೇ ರೀತಿಯಾದ ವೇತನ ಇರುವುದಿಲ್ಲ.
ಇದನ್ನೂ ಓದಿ: ತೀವ್ರಗತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ | ಬೆಸ್ಕಾಂ ಅಧಿಕಾರಿಗಳೊಂದಿಗೆ ಮಾಹಿತಿ ಸಮನ್ವಯಕ್ಕೆ ಸೂಚನೆ
ರಾಜ್ಯ(Recruitment) ಕಾನೂನು ಸೇವಾ ಪ್ರಾಧಿಕಾರರವರ ನಿರ್ದೇಶನದಂತೆ ಯಾವುದಾದರೂ ಕಾನೂನು ಸೇವಾ ಕೇಂದ್ರಗಳಿಗೆ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (PLV) ನೇಮಿಸಿದ್ದಲ್ಲಿ ಪ್ರತಿ ಕೆಲಸದ ದಿನಕ್ಕೆ ರೂ. 250/- ಮೀರದಂತೆ ಗೌರವಧನ ನಿಗಧಿಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
