Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Road widening | ಚಿತ್ರದುರ್ಗ ನಗರದ ರಸ್ತೆ ಅಗಲೀಕರಣಕ್ಕೆ ದಾಖಲಾತಿಗಳ ತಲೆನೋವು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Road widening | ಚಿತ್ರದುರ್ಗ ನಗರದ ರಸ್ತೆ ಅಗಲೀಕರಣಕ್ಕೆ ದಾಖಲಾತಿಗಳ ತಲೆನೋವು
ಇಂದಿನ ಸುದ್ದಿ

Road widening | ಚಿತ್ರದುರ್ಗ ನಗರದ ರಸ್ತೆ ಅಗಲೀಕರಣಕ್ಕೆ ದಾಖಲಾತಿಗಳ ತಲೆನೋವು

Editor Nammajana
Last updated: 8 January 2025 3:35 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|8-1-2025

ನಮ್ಮಜನ.ಕಾಂ, ಚಿತ್ರದುರ್ಗ: ಕಾನೂನು ತೊಡಕುಗಳು ಉಂಟಾಗದಂತೆ ಎಚ್ಚರಿಕೆ ವಹಿಸಿ, ಚಿತ್ರದುರ್ಗ ನಗರದ (Road widening) ಪ್ರಮುಖ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುವಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

nammajana

ಚಿತ್ರದುರ್ಗ ನಗರದ ಪ್ರಮುಖ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುವ ಸಂಬಂಧ ಚಿತ್ರದುರ್ಗ ನಗರಸಭೆಯ ಕಚೇರಿಯಲ್ಲಿ ವಿವಿಧ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿ, ಮೊದಲ ಹಂತದಲ್ಲಿ ಚಿತ್ರದುರ್ಗ (Road widening) ನಗರದ ಚಳ್ಳಕೆರೆ ಸರ್ಕಲ್‍ನಿಂದ ಕನಕ ವೃತ್ತದವರೆಗೆ ರಸ್ತೆಯ ಮಧ್ಯಭಾಗದಿಂದ 21 ಮೀಟರ್ ಗಳ ಅಗಲೀಕರಣ ಕಾರ್ಯ ಕೈಗೊಳ್ಳಲು ಈಗಾಗಲೇ ನಿರ್ಧರಿಸಲಾಗಿದೆ.

ಚಿತ್ರದುರ್ಗ ನಗರದ ಅಭಿವೃದ್ಧಿಯ ದೃಷ್ಟಿಯಿಂದ ಈ ಕಾರ್ಯವನ್ನು ಕೈಗೊಳ್ಳುವುದು ಖಚಿತ. ಈ ಕಾರ್ಯದಲ್ಲಿ ಯಾವುದೇ ಕಾನೂನು ತೊಡಕುಗಳು ಅಡ್ಡಿಯಾಗದಂತೆ ನೋಡಿಕೊಳ್ಳಲು, ಪೂರಕವಾದ ಸೂಕ್ತ ದಾಖಲಾತಿಗಳು, ನಕ್ಷೆಗಳ ಮೂಲ ಪ್ರತಿಗಳನ್ನು ಸಂಗ್ರಹಿಸಬೇಕು ಎಂದು ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾಖಲಾತಿಗಳನ್ನು ಸಂಗ್ರಹಿಸಿ, ಶಾಸಕರ ಗಮನಕ್ಕೆ ತರಬೇಕು, ದಾಖಲೆಗಳ ಪರಿಶೀಲನೆ ಬಳಿಕವೇ ಅಗಲೀಕರಣ (Road widening) ಪ್ರಾರಂಭಿಸಬೇಕು. ಈ ಕಾರ್ಯ ಹದಿನೈದು ದಿನಗಳ ಒಳಗಾಗಿ ಪೂರ್ಣಗೊಳ್ಳಬೇಕು. ಈಗಿನ ಪ್ರಮುಖ ರಸ್ತೆ ಈ ಮೊದಲು ರಾಷ್ಟ್ರೀಯ ಹೆದ್ದಾರಿಯಾಗಿತ್ತು, ಹೀಗಾಗಿ ರಸ್ತೆಗೆ ಸಂಬಂಧಿಸಿದ ದಾಖಲೆ ಹಾಗೂ ನಕ್ಷೆಗಳು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬಳಿ ಲಭ್ಯವಿರುವ ಸಾಧ್ಯತೆಗಳಿವೆ.

ಒಟ್ಟಾರೆಯಾಗಿ ಮೂಲ ದಾಖಲೆಗಳನ್ನು ಸಂಗ್ರಹಿಸಿ, ಪರಿಶೀಲಿಸಿ, ರಸ್ತೆ ಅಗಲೀಕರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ವೀರೇಂದ್ರ ಪಪ್ಪಿ ಅವರು ಸೂಚನೆ ನೀಡಿದರು.

ಚಿತ್ರದುರ್ಗ ನಗರದಲ್ಲಿನ ಜನಸಂಖ್ಯೆ, ವಾಹನಗಳ ಸಂಖ್ಯೆ, ಸಂಚಾರ ದಟ್ಟಣೆ, ಮುಖ್ಯ ರಸ್ತೆಯಲ್ಲಿನ ವ್ಯಾಪಾರ ವಹಿವಾಟು, ಸರಕು ವಾಹನಗಳ ನಿಲುಗಡೆ, ಸಂಚಾರ ನಿಯಮಗಳ ಪಾಲನೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಚಿತ್ರದುರ್ಗ ನಗರವನ್ನು ಉತ್ತಮವಾಗಿ ಅಭಿವೃದ್ಧಿಪಡಿ, (Road widening) ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿಸುವ ನಿಟ್ಟಿನಲ್ಲಿ ನಗರಸಭೆಯ ಅಧ್ಯಕ್ಷರಾಗಿರುವ ಸುಮಿತಾ ಅವರಿಗೆ ಉತ್ತಮ ಅವಕಾಶವಿದ್ದು, ಈ ನಿಟ್ಟಿನಲ್ಲಿ ಅವರು ಕೂಡ ರಸ್ತೆ ಅಗಲೀಕರಣ ಕಾರ್ಯಕ್ಕೆ ಕೈಜೋಡಿಸುವಂತೆ ಶಾಸಕ ವೀರೇಂದ್ರ ಪಪ್ಪಿ ಅವರು ಮನವಿ ಮಾಡಿದರು.

ಸಭೆಯಲ್ಲಿ ಭಾಗವಹಿಸಿದ್ದ ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರು ಚಿತ್ರದುರ್ಗ ನಗರದ ಅಭಿವೃದ್ಧಿಗೆ ಪೂರಕವಾಗಿ ರಸ್ತೆ ಅಗಲೀಕರಣ ಕಾರ್ಯವನ್ನು ಯಾವುದೇ ಕಾನೂನು ತೊಡಕು ಬಾರದ ರೀತಿಯಲ್ಲಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಬಳಿಕವೇ ಅಗಲೀಕರಣ ನಡೆಸುವಂತೆ ಸಲಹೆ ನೀಡಿದ್ದಾರೆ ಎಂದು ಶಾಸಕರು ಮಾಹಿತಿ ನೀಡಿದರು.

ಇದನ್ನೂ ಓದಿ: ವಿವಿ ಸಾಗರಕ್ಕೆ ಶೀಘ್ರ ಮುಖ್ಯಮಂತ್ರಿಗಳಿಂದ ಬಾಗಿನ: ಡಿ.ಸಿ.ಟಿ.ವೆಂಕಟೇಶ್ | VV Sagar

ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ನಗರಸಭೆ ಅಧ್ಯಕ್ಷೆ ಸುಮಿತಾ, ಪೌರಾಯುಕ್ತೆ ರೇಣುಕಾ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯಕ್, ಲೋಕೋಪಯೋಗಿ ಇಲಾಖೆ ಎಇಇ ಚಂದ್ರಪ್ಪ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಇಇ ನವೀನ್, ನಗರಸಭೆ ಕಾನೂನು ಸಲಹೆಗಾರ ಉಮೇಶ್, ನಗರಸಭೆ ಎಇಇ ಸತ್ಯನಾರಾಯಣ್ ಮುಂತಾದವರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:ChitradurgaChitradurga NewsCity CouncilKannada Newskannada suddiNammajana.comNational Highways DepartmentRecordsroad wideningVerificationಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದಾಖಲೆನಗರಸಭೆನಮ್ಮಜನ.ಕಾಂಪರಿಶೀಲನೆರಸ್ತೆ ಅಗಲೀಕರಣರಾಷ್ಟೀಯ ಹೆದ್ದಾರಿ ಇಲಾಖೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಿವಿ ಸಾಗರಕ್ಕೆ ಶೀಘ್ರ ಮುಖ್ಯಮಂತ್ರಿಗಳಿಂದ ಬಾಗಿನ: ಡಿ.ಸಿ.ಟಿ.ವೆಂಕಟೇಶ್ | VV Sagar
Next Article Vani Vilasa Sagara | ವಿ ವಿ ಸಾಗರ ಇಂದಿನ‌ ನೀರಿನ ಮಟ್ಟ | ಬಾಗಿನ‌ ಸ್ಥಳ ಪರಿಶೀಲನೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?