Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Satish Jarakiholi: ಡಾ.ಅಂಬೇಡ್ಕರ್ ಹೇಳಿದಂತೆ ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ: ಸತೀಶ್ ಜಾರಕಿಹೊಳಿ ಸಲಹೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Satish Jarakiholi: ಡಾ.ಅಂಬೇಡ್ಕರ್ ಹೇಳಿದಂತೆ ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ: ಸತೀಶ್ ಜಾರಕಿಹೊಳಿ ಸಲಹೆ
ಇಂದಿನ ಸುದ್ದಿ

Satish Jarakiholi: ಡಾ.ಅಂಬೇಡ್ಕರ್ ಹೇಳಿದಂತೆ ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ: ಸತೀಶ್ ಜಾರಕಿಹೊಳಿ ಸಲಹೆ

Editor Nammajana
Last updated: 11 August 2024 04:41
By Editor Nammajana 3 Min Read
Share
SHARE

Chitradurga news|nammajana.com|11-8-2024

ನಮ್ಮಜನ.ಕಾಂ, ಹಿರಿಯೂರು: ಕೇವಲ ಮೀಸಲಾತಿಯಿಂದಷ್ಟೇ ಅಭಿವೃದ್ಧಿ ಹೊಂದುತ್ತೇವೆ ಎಂದು ಸುಮ್ಮನೆ ಕೂರದೇ ಎಲ್ಲರೂ ವೈಯಕ್ತಿಕವಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಅಭಿಪ್ರಾಯಪಟ್ಟರು.

ನಗರದ ನೆಹರೂ ಮೈದಾನದ ಎ.ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ಶನಿವಾರ ತಾಲೂಕು ವಾಲ್ಮೀಕಿ ನಾಯಕ ಸಮಾಜ, ವಾಲ್ಮೀಕಿ ನೌಕರರ ಸಂಘ, ವಾಲ್ಮೀಕಿ ನಾಯಕ (Satish Jarakiholi) ವಕೀಲರ ಸಂಘ, ವಾಲ್ಮೀಕಿ ನಾಯಕ ನಿವೃತ್ತ ನೌಕರರ ಸಂಘದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಡಾ.ಅಂಬೇಡ್ಕರ್ ಹೇಳಿದಂತೆ ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಯಾರೂ ಯಾರನ್ನು ಉದ್ಧಾರ ಮಾಡುವುದಿಲ್ಲ. ಹೋರಾಟ, ಛಲ, ಹಠ ಇಟ್ಟು ಕೊಂಡು ವಿದ್ಯಾರ್ಥಿಗಳು ಬದುಕನ್ನು (Satish Jarakiholi) ಎದುರಿಸಬೇಕು. ನೌಕರಿಗಳ ಕೊರತೆ ಕಾಡುತ್ತಿದ್ದು ಬಹಳಷ್ಟು ಜನರು ಉದ್ಯೋಗ ವಂಚಿತರಾಗಿದ್ದಾರೆ. ಹಾಗಾಗಿ ವೈಯಕ್ತಿ ಕವಾಗಿ ಒಂದೊಂದು ವೃತ್ತಿ ಆಯ್ದುಕೊಂಡು ಅಭಿವೃ

ಹಿರಿಯೂರು ನಗರದ ನೆಹರೂ ಮೈದಾನದ ಎ ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ತಾಲೂಕು ವಾಲ್ಮೀಕಿ ನಾಯಕ ಸಮಾಜದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆ ನಡೆಯಿತು.

ಕೇವಲ ಮೀಸಲಾತಿಯಿಂದಲೇ ಎಲ್ಲಾ ಸಮಸ್ಯೆಗಳು ಪರಿಹಾರವಾಗಲ್ಲ. ಬದುಕಿಗೆ ಬೇರೆ ಬೇರೆ ದಾರಿ ನಾವೇ (Satish Jarakiholi) ಹುಡುಕಿಕೊಳ್ಳಬೇಕು. 75 ವರ್ಷಗಳ ಹೋರಾಟದ ನಂತರ ಸಮಾಜ ಒಂದು ಹಂತ ತಲುಪಿದೆ. ಈಗಿನ ಮಕ್ಕಳು ಶೇ.80ಕ್ಕಿಂತ ಹೆಚ್ಚಿನ ಅಂಕ ತೆಗೆಯುತ್ತಿದ್ದಾರೆ.

ಇದು ಒಳ್ಳೆಯ ಬೆಳವಣಿಗೆಯಾಗಿದ್ದು, ಶಿಕ್ಷಣದಿಂದ ಮಾತ್ರ ಸಮಾಜದ ಪ್ರಗತಿ ಸಾಧ್ಯ. ಈಗಿನ ಮತ್ತು ಈ ಹಿಂದಿನ ಸ್ವಾಮೀಜಿಗಳಿಂದಾಗಿ ವಾಲ್ಮೀಕಿ ಸಮುದಾಯ ಮುನ್ನೆಲೆಗೆ ಬರುತ್ತಿದೆ. ಮುಖ್ಯವಾಗಿ ಪೋಷಕರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸಲು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಅವರಿಗೆ ಪ್ರೋತ್ಸಾಹ ಕೊಡಬೇಕಾದುದು ಆಯಾ ಸಮಾಜದ ಕರ್ತವ್ಯವಾಗಿದೆ. (Satish Jarakiholi) ಪಿಯುಸಿ ನಂತರ ವಿದ್ಯಾರ್ಥಿಗಳ ಭವಿಷ್ಯ ಪ್ರಮುಖ ಘಟ್ಟದಲ್ಲಿರು ಇದೆ. ಆ ಸಮಯದಲ್ಲಿ ವಿದ್ಯಾರ್ಥಿಗಳು ಆಲಸ್ಯ ತೋರದೇ ವಿದ್ಯಾಭ್ಯಾಸದ ಮಹತ್ವ ಅರಿತು ಮುನ್ನಡೆಯಬೇಕು.

ವಿದ್ಯೆ ಜೊತೆಗೆ ಸಂಸ್ಕಾರ ಕಲಿತರೆ ಮಾತ್ರ ವಿದ್ಯೆಗೆ ಗೌರವ ಸಿಗುತ್ತದೆ. ನಾನು ಮೊದಲ ಬಾರಿ ಶಾಸಕನಾದ ದಿನದಿಂದಲೂ ವಾಲ್ಮೀಕಿ ಭವನಗಳು, ಬೋರ್‌ವೆಲ್ ಗಳನ್ನು ನೀಡುತ್ತಾ ಬಂದಿದ್ದೇನೆ. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬೆಳವಣಿಗೆಗೆ ಸದಾ ಸಹಕಾರ ನೀಡಿದ ತೃಪ್ತಿ ನನಗಿದೆ. ಪಂಚ ಗ್ಯಾರಂಟಿಗಳಿಂದಾಗಿ ಒಂದಿಷ್ಟು ಆರ್ಥಿಕ ಹಿನ್ನಡೆಯಾಗಿದ್ದರು ಸಹ ಬರುವ ದಿನಗಳಲ್ಲಿ ಎಲ್ಲವನ್ನು ಸರಿದೂಗಿಸಲಾ ಗುವುದು. ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳೂ ಚಾಲನೆಗೊಂಡಿದ್ದು ಸಮಗ್ರ ಅಭಿವೃದ್ಧಿ ಸಂಕಲ್ಪ ಹೊಂದಿದ್ದೇವೆ ಎಂದರು.

ಚಳ್ಳಕೆರೆ ಶಾಸಕ ರಘುಮೂರ್ತಿ ಮಾತನಾಡಿ, ಮಾನವ ಬಂಧುತ್ವ ವೇದಿಕೆಯು ಎಲ್ಲಾ ತುಳಿತಕ್ಕೊಳ ಗಾದವಾರ ಬೆನ್ನಿಗೆ ನಿಂತಿದೆ. ಜನಾಂಗದ ಅಭಿವೃದ್ಧಿಗೆ ನಮ್ಮೆಲ್ಲ ನಾಯಕರು (Satish Jarakiholi) ಕಟಿಬದ್ದರಾಗಿದ್ದಾರೆ. ವಿದ್ಯಾರ್ಥಿಗಳು ಅಂಕಗಳನ್ನು ಪಡೆಯುವುದಷ್ಟೇ ಅಲ್ಲ. ಉತ್ತಮ ಸಂಸ್ಕೃತಿ ಮತ್ತು ಮೌಲ್ಯ ಬೆಳೆಸಿಕೊಳ್ಳಬೇಕು ಎಂದರು.

ಇದನ್ನೂ ಓದಿ: Today Dina Bhavishya: ಇಂದಿನ ರಾಶಿ ಭವಿಷ್ಯ 11-8-2024

ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಈ ವೇಳೆ ಯೋಗೀಶ್ ಬಾಬು, ಹರ್ತಿಕೋಟೆ ವೀರೇಂದ್ರ ಸಿಂಹ, ಪ್ರಾಚಾರ್ಯ ಡಿ ಚಂದ್ರಶೇಖರ್, ಜೆ ಕರಿಯಪ್ಪ ಮಾಳಿಗೆ, ಎಚ್ ಎಸ್ ಮಂಜುನಾಥ್, ಡಾ ಹೇಮಣ್ಣ ನಾಯಕ, ಈಶ್ವರಪ್ಪ, ನಾಗರಾಜ್ ಸೊಂಡೆಕೆರೆ, ಬಸವರಾಜ್, ಅನಿಲ್ ಕುಮಾರ್, ಕವಿತಾ ಲೋಕೇಶ್, ಹೇಮದಳ ಶ್ರೀಧರ್, ಮಂಜುನಾಥ್ ಮಾಳಿಗೆ, ವಿ ಗಿರೀಶ್, ಎಂಡಿ ಕೋಟೆ ಕುಮಾರ್, ಶಿವಮೂರ್ತಿ ಇತರರು ಇದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Chitradurga NewsHigh MarksHiriyurKannada Newskannada suddiKarnataka Govt. MinisterMinisterNammajana.comPratibha PuraskarSatish JarakiholiStudentsValmiki Ethnicityಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕ ಸರ್ಕಾರ ಸಚಿವಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪ್ರತಿಭಾ ಪುರಸ್ಕಾರವಾಲ್ಮೀಕಿ ಜನಾಂಗವಿದ್ಯಾರ್ಥಿಗಳುಸಚಿವಸತೀಶ್ ಜಾರಕಿಹೊಳಿಹಿರಿಯೂರುಹೆಚ್ಚು ಅಂಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Today Dina Bhavishya: ಇಂದಿನ ರಾಶಿ ಭವಿಷ್ಯ 11-8-2024
Next Article ಅಂತರಾಜ್ಯ ಗಾಂಜಾ ಪೇಡ್ಲರ್ ಒಡಿಶಾದ ಎ.ಬಾಜೂಜಿ ಸುಬುದಿ ಬಂಧನ | Challakere
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?