Chitradurga news | nammajana.com | 3-9-2024
ನಮ್ಮಜನ.ಕಾಂ, ಹೊಳಲ್ಕೆರೆ: ಇಂದು ಸ್ನೇಹ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಸ್ನೇಹ ಪಬ್ಲಿಕ್ ಸ್ಕೂಲ್, ಅರೇಹಳ್ಳಿ ಹೊಳಲ್ಕೆರೆ (School) ಶಾಲೆಯ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಸಂಸ್ಥೆಯ ಹೊಳಲ್ಕೆರೆ ಸುಮಿತ್ರಕ್ಕ ಮಾತನಾಡಿ ಮಹಾವಿಷ್ಣುವಿನ ಎಂಟನೇ ಅವತಾರವಾದ ಶ್ರೀ ಕೃಷ್ಣ ಕೃಷ್ಣನ ಜನಿಸಿ ಮಹಾಭಾರತ ಯುದ್ಧವನ್ನು ನಡೆಸಿ ಎತ್ತಿ ಹಿಡಿದಿದ್ದು (School) ಒಂದು ಅಭೂತಪೂರ್ವ ಕಾರ್ಯ ಈ ಒಂದು ಮಹಾಭಾರತ ಯುದ್ಧದಲ್ಲಿ ಭಗವದ್ಗೀತೆಯನ್ನು ಬೋಧಿಸಿ ಮಾನವರ ಕಲ್ಯಾಣಕ್ಕಾಗಿ ಶ್ರಮಿಸಿದ ಅದ್ಭುತ ಪೂರ್ವ ವ್ಯಕ್ತಿಯಾಗಿ ಅವತರಿಸಿದ ಶ್ರೀ ಕೃಷ್ಣ ಪರಮಾತ್ಮ ಎಂದು ಭೋದಿಸಿದರು.

ಪ್ರಾಂಶುಪಾಲ ಜಿ.ಸಿ. ವೇಣುಗೋಪಾಲ್ ಮಾತನಾಡಿ ಪೋಷಕರು ಮಕ್ಕಳಿಗೆ ಮನೆಯಲ್ಲಿ ಕೃಷ್ಣನ ಬಗ್ಗೆ ಮಹಾಭಾರತ ಪುರಾಣ ಕಥೆಗಳನ್ನು ಹೇಳಬೇಕು.ನಮ್ಮ ಶಾಲೆಯ ವತಿಯಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಿರುವ ಅಧ್ಯಕ್ಷರಿಗೆ (School) ಧನ್ಯವಾದಗಳು ತಿಳಿಸಿದರು.
ಛಾಯಾ ಮಂಜುನಾಥ್ ಮಾತನಾಡಿ ಶ್ರೀ ಕೃಷ್ಣ ಪರಮಾತ್ಮ ಅವತರಿಸಿದ ಉದ್ದೇಶವೇ ಹಿಂದೂ ಧರ್ಮ ರಕ್ಷಣೆಗಾಗಿ (School) ಎಂದರು. ಬಾಲ್ಯದಿಂದಲೂ ಅವತಾರದ ಅಂತ್ಯದವರೆಗೂ ಧರ್ಮರಕ್ಷಣೆಗಾಗಿ ಎತ್ತಿ ಹಿಡಿದರು ಎಂದು ತಿಳಿಸಿದರು.
ಶಾಲೆಯ ಮಕ್ಕಳು ಕೃಷ್ಣನ ವೇಷ ಧರಿಸಿ ಸಂಭ್ರಮಿಸಿದರು.
ಇದನ್ನೂ ಓದಿ: ಚಿತ್ರದುರ್ಗ | ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನ | Chitradurga
ಈ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಜೆ.ಎಸ್. ವಸಂತ್ ನಿರ್ದೇಶಕರಾದ ಬಿ.ಎಸ್. ಹರೀಶ್ ಬಾಬು, ಎಂ.ಜೆ.ನಾಗರಾಜ್ ಹಾಗೂ ಪೋಷಕರು ವಿದ್ಯಾರ್ಥಿಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252