Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Seminar | ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ : ಆ.30 ರಂದು ವಿಚಾರ ಸಂಕಿರಣ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Seminar | ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ : ಆ.30 ರಂದು ವಿಚಾರ ಸಂಕಿರಣ
ಇಂದಿನ ಸುದ್ದಿ

Seminar | ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ : ಆ.30 ರಂದು ವಿಚಾರ ಸಂಕಿರಣ

Nammajana Sub Editor
Last updated: 28 August 2025 4:56 PM
By Nammajana Sub Editor 3 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 28-08-2025

ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಕರ್ನಾಟಕ(Seminar) ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‍ಸಿ/ಎಸ್‍ಟಿ ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ವಿಷಯ ಕುರಿತು ಒಂದು ದಿನದ ವಿಚಾರಸಂಕಿರಣ ಕಾರ್ಯಕ್ರಮ ಆ. 30 ರಂದು ಬೆಳಿಗ್ಗೆ 10 ಗಂಟೆಗೆ ಪತ್ರಿಕಾ ಭವನದ “ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣ”ದಲ್ಲಿ ಆಯೋಜಿಸಲಾಗಿದೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.

ಸಂಸದ ಗೋವಿಂದ ಎಂ. ಕಾರಜೋಳ ಅವರು ಘನ ಉಪಸ್ಥಿತಿ ವಹಿಸುವರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಹಿರಿಯ ಪತ್ರಕರ್ತ ಡಿ. ಉಮಾಪತಿ ಅವರು ದಿಕ್ಸೂಚಿ ಭಾಷಣ ಮಾಡುವರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಅಧ್ಯಕ್ಷತೆ ವಹಿಸಲಿದ್ದು, ಪ್ರಾಸ್ತಾವಿಕವಾಗಿ ಮಾತನಾಡುವರು. ಗೌರವಾನ್ವಿತ ಅತಿಥಿಗಳಾಗಿ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಧಾನಪರಿಷತ್ ಸದಸ್ಯರುಗಳಾದ(Seminar) ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್. ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್. ಸುಮಿತ ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಡಾ. ಎಸ್. ಆಕಾಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ ಬಂಡಾರು, ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ ಮುಂತಾದ ಗಣ್ಯಮಾನ್ಯರು ಭಾಗವಹಿಸುವರು.

ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 11.30 ಗಂಟೆಗೆ ಜರುಗುವ ಮೊದಲ ಗೋಷ್ಠಿಯಲ್ಲಿ ಶಿವಮೊಗ್ಗ ಟೆಲೆಕ್ಸ್ ದಿನಪತ್ರಿಕೆ ಸಂಪಾದಕ ರವಿಕುಮಾರ್ ಎನ್. ಅವರು “ಅಂಬೇಡ್ಕರ್ ಅವರ ಪತ್ರಿಕಾ ವೃತ್ತಿ” ಕುರಿತು ಹಾಗೂ ಸಾಮಾಜಿಕ ಚಿಂತಕ ವಿ.ಎಲ್. ನರಸಿಂಹಮೂರ್ತಿ ಅವರು “ಪತ್ರಕರ್ತರಾಗಿ ಅಂಬೇಡ್ಕರ್ ಅವರ ಬರವಣಿಗೆಗಳು” ಕುರಿತು ವಿಷಯ ಮಂಡಿಸುವರು.

ಮಧ್ಯಾಹ್ನ 2 ಗಂಟೆಗೆ ನಡೆಯುವ ಎರಡನೆ ಗೋಷ್ಠಿಯಲ್ಲಿ ಶಿವಮೊಗ್ಗದ ಕನ್ನಡ ಸಹಪ್ರಾಧ್ಯಾಪಕಿ ಡಾ. ಭಾರತಿದೇವಿ ಪಿ. ಅವರು “ಅಂಬೇಡ್ಕರ್ ದೃಷ್ಟಿಯಿಲ್ಲಿ ಲಿಂಗಸಮಾನತೆ” ಕುರಿತು ಹಾಗೂ ಬೆಳಗಾವಿಯ ದಿ ಹಿಂದೂ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕ ರಿಷಿಕೇಶ್ ಬಹದ್ದೂರ್ ದೇಸಾಯಿ ಅವರು “ಪತ್ರಕರ್ತರಲ್ಲಿ ಸಾಮಾಜಿಕ ನ್ಯಾಯದ ಪ್ರಜ್ಞೆ” ಕುರಿತು ವಿಷಯ ಮಂಡಿಸುವರು.

ಸಂಜೆ 04 ಗಂಟೆಗೆ ಜರುಗುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಪತ್ರಕರ್ತರು ಹಾಗೂ ಅಂಕಣಕಾರರಾದ ಸನತ್ ಕುಮಾರ್ ಬೆಳಗಲಿ ಸಮಾರೋಪ ಭಾಷಣ ಮಾಡುವರು.

ಇದನ್ನೂ ಓದಿ: ಶಾಲಾ ಮಾದರಿಯ ಗಣಪತಿ ಮಂಟಪ ರಚನೆ

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ(Seminar) ಹಾಗೂ ಡಾ. ಜೆ. ಕರಿಯಪ್ಪ ಮಾಳಿಗೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಅಧ್ಯಕ್ಷತೆ ವಹಿಸುವರು ಎಂದು ಕಾರ್ಯಕ್ರಮದ ಸಂಯೋಜಕರು ಹಾಗೂ ಮಾಧ್ಯಮ ಅಕಾಡೆಮಿ ಸದಸ್ಯರಾದ ಎಂ.ಎನ್. ಅಹೋಬಳಪತಿ ಹಾಗೂ ಅಕಾಡೆಮಿಯ ಕಾರ್ಯದರ್ಶಿ ಎಂ. ಸಹನಾ ಅವರು ತಿಳಿಸಿದ್ದಾರೆ.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:Ambedkar PerspectiveChitradurgaChitradurga NewsDr. BR AmbedkarKannada NewsNammajana.comNews MediaSymposiumಅಂಬೇಡ್ಕರ್ ದೃಷ್ಟಿಕೋನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಬಿ.ಆರ್.ಅಂಬೇಡ್ಕರ್ನಮ್ಮಜನ.ಕಾಂವಿಚಾರಸಂಕಿರಣಸುದ್ದಿ ಮಾಧ್ಯಮ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ
Next Article Adike Rate : ಅಡಕೆ ಧಾರಣೆ | 28 ಆಗಸ್ಟ್ 2025 | ಚನ್ನಗಿರಿ ಮಾರುಕಟ್ಟೆ ಅಡಿಕೆ ರೇಟ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?