Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ರೇಷ್ಮೆ ಕೃಷಿಯಲ್ಲಿ ದೇಶದಲ್ಲೇ ಕರ್ನಾಟಕ ನಂಬರ್ ಒನ್: ಪಿ.ಶಿವಕುಮಾರ್ | Sericulture
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ರೇಷ್ಮೆ ಕೃಷಿಯಲ್ಲಿ ದೇಶದಲ್ಲೇ ಕರ್ನಾಟಕ ನಂಬರ್ ಒನ್: ಪಿ.ಶಿವಕುಮಾರ್ | Sericulture
ಇಂದಿನ ಸುದ್ದಿ

ರೇಷ್ಮೆ ಕೃಷಿಯಲ್ಲಿ ದೇಶದಲ್ಲೇ ಕರ್ನಾಟಕ ನಂಬರ್ ಒನ್: ಪಿ.ಶಿವಕುಮಾರ್ | Sericulture

Editor Nammajana
Last updated: 20 December 2024 17:19
By Editor Nammajana 2 Min Read
Share
SHARE

Chitradurga news|nammajana.com|20-12-2024

ನಮ್ಮಜನ.ಕಾಂ, ಚಿತ್ರದುರ್ಗ: ರೇಷ್ಮೆ ಕೃಷಿ ಉತ್ಪಾದನೆಯಲ್ಲಿ (Sericulture) ದೇಶದಲ್ಲಿಯೇ ಕರ್ನಾಟಕ ರಾಜ್ಯ ಮೊದಲಿನಿಂದಲೂ ಪ್ರಥಮ ಸ್ಥಾನದಲ್ಲಿದೆ ಎಂದು ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಕಾರ್ಯದರ್ಶಿ ಪಿ.ಶಿವಕುಮಾರ್ ಹೇಳಿದರು.

ನಗರದ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಕೇಂದ್ರ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಕೇಂದ್ರ ರೇಷ್ಮೆ ಮಂಡಳಿ ಜವಳಿ ಸಚಿವಾಲಯ ಮತ್ತು ರೇಷ್ಮೆ ಇಲಾಖೆ ವತಿಯಿಂದ ರೇಷ್ಮೆ ಕೃಷಿ-ಐಸಿರಿಗೆ ದಾರಿ ಎಂಬ ವಿಷಯದೊಂದಿಗೆ ಹಮ್ಮಿಕೊಂಡಿದ್ದ “ರೇಷ್ಮೆ ಕೃಷಿ ಮೇಳ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶ ಎಲ್ಲ ಭಾಗಗಳ ರೇಷ್ಮೆ ಕೃಷಿ ನೋಡುವುದರ ಸಲುವಾಗಿ ಕೇಂದ್ರ ರೇಷ್ಮೆ ಮಂಡಳಿ ಸ್ಥಾಪನೆಯಾಯಿತು. ಮಂಡಳಿ ಪ್ರಾರಂಭವಾದಾಗ ಜಾಗತೀಕವಾಗಿ ನಮ್ಮ ಉತ್ಪಾದನೆ ಶೇ.6ರಷ್ಟು ಇತ್ತು. ಇಂದು ಶೇ.42ರಷ್ಟು ಆಗಿದ್ದು, ಇದಕ್ಕೆ ರೈತರು ಹಾಗೂ ಕಾರ್ಮಿಕರ ಪರಿಶ್ರಮವೇ ಕಾರಣ. ದೇಶದ 25ಕ್ಕೂ ಹೆಚ್ಚು ರಾಜ್ಯಗಳಲ್ಲಿ ರೇಷ್ಮೆ ಕೆಲಸಗಳು ನಡೆಯುತ್ತಿವೆ. ಇದರಲ್ಲಿ (Sericulture) ಕರ್ನಾಟಕ ರಾಜ್ಯ ನಂ.1 ಸ್ಥಾನದಲ್ಲಿ ಮುಂದುವರೆದಿದೆ ಎಂದು ಹೇಳಿದರು.

ಕೇಂದ್ರ ರೇಷ್ಮೆ ಮಂಡಳಿ ದೇಶಾದಾದ್ಯಂತ 159 ಶಾಖೆ ಹಾಗೂ ವಿಸ್ತರಣಾ ಶಾಖೆಗಳನ್ನು ಹೊಂದಿದೆ. ಇದರಲ್ಲಿ 28 ಕರ್ನಾಟಕ ರಾಜ್ಯದಲ್ಲಿವೆ. ಬಹಳಷ್ಟು ವಿಜ್ಞಾನಿಗಳು ರಾಜ್ಯದವರೇ ಇದ್ದಾರೆ. ವಿಶ್ವದ ರೇಷ್ಮೆ ಮಾರುಕಟ್ಟೆಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದೆ. 2030ರ ವೇಳೆಗೆ ಭಾರತವು ಶೇ.50ರಷ್ಟು ಉತ್ಪಾದನೆ ಮಾಡಿ (Sericulture) ಚೀನಾವನ್ನು ಹಿಂದಿಕ್ಕಬೇಕು. ಈ ನಿಟ್ಟಿನಲ್ಲಿ ರೈತರು ಎದುರಿಸುವ ಸಮಸ್ಯೆ ಪರಿಹರಿಸಲು ಹಾಗೂ ಆರ್ಥಿಕ ನೆರವು ನೀಡಲು ರೇಷ್ಮೆ ಮಂಡಳಿ ಸದಾ ಸಿದ್ದವಿದೆ ಎಂದು ಹೇಳಿದರು.

ಸ್ವಯಂ ಚಾಲಿತ ರೇಷ್ಮೆ ನೂಲಿನ ಯಂತ್ರ ಖರೀದಿಗೆ ಕೇಂದ್ರ ಸರ್ಕಾರ ಶೇ.50ರಷ್ಟು ಹಾಗೂ ರಾಜ್ಯ ಸರ್ಕಾರ ಶೇ.25ರಷ್ಟು ಸಹಾಯಧನ ನೀಡುತ್ತಿದೆ. ಉಳಿದ ಹಣವನ್ನು ರೈತರು ಪಾವತಿಸಬೇಕು. ಆದರೆ ಇದರ ಮೇಲಿನ ಜಿ.ಎಸ್.ಟಿಯನ್ನು ಖರೀದಿಸುವ ರೇಷ್ಮೆ ಕೆಲಸಗಾರರು ಭರಿಸಬೇಕು ಎಂದು ಅಳಲು ತೋಡಿಕೊಂಡಿದ್ದು, ಮುಂಬರುವ ದಿನಗಳಲ್ಲಿ ಸ್ವಯಂ ಚಾಲಿನ ನೂಲಿನ ಯಂತ್ರ ಖರೀದಿ ಮೇಲಿನ ಜಿ.ಎಸ್.ಟಿ ತೆಗೆದು ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದರು.

ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಬಿ.ಎನ್. ಸುಮಿತಾ ಮಾತನಾಡಿ, ಇಂದಿನ ತಾಂತ್ರಿಕತೆಯ ಡಿಜಿಟಲ್ ಯುಗದಲ್ಲಿ ಸಿಗುವ ಆಧುನಿಕ ತಂತ್ರಾಂಶಗಳನ್ನು ಬಳಸಿಕೊಂಡು ಉತ್ತಮವಾದ ಬೆಳೆ (Sericulture) ಬೆಳೆಯುವುದರೊಂದಿಗೆ ಆದರ್ಶಯುತ ಕೃಷಿಕರಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರೇಷ್ಮೆ ಕೃಷಿ ಇಲಾಖೆ ಹಚ್ಚುವರಿ ನಿರ್ದೇಶಕ ವೈ.ಟಿ.ತಿಮ್ಮಯ್ಯ ಮಾತನಾಡಿ, ರೇಷ್ಮೆ ಕೃಷಿ ಬೆಳೆಯು ಮಳೆ ಬಂದಾಗ ಕೊಡೆ ಹಿಡಿಯುವಂತೆ ಕಾಲ-ಕಾಲಕ್ಕೆ ಬದಲಾಗುವ ಬೆಳೆಯಾಗಿ ಮಾರ್ಪಾಡಾಗಿದೆ. ಇದನ್ನು ಅಪ್ಪಿಕೊಂಡಷ್ಟು ಮೇಲೆತ್ತರಕ್ಕೆ ಕೊಂಡೊಯ್ಯುತ್ತದೆ ಎಂದರು.

ರೇಷ್ಮೆ ಕೃಷಿ ಮೇಳದ ಅಂಗವಾಗಿ ರೇಷ್ಮೆ ಕೃಷಿಗೆ ಸಂಬಂಧಿಸಿದ ರೇಷ್ಮೆ ಕೃಷಿ ವಸ್ತುಪ್ರದರ್ಶನ, ತಂತ್ರಜ್ಞಾನಗಳು, ಕಿರುಪುಸ್ತಕಗಳು ಮತ್ತು ಕಿರುಹೊತ್ತಿಗೆಗಳನ್ನು ಬಿಡುಗಡೆ ಮಾಡಲಾಯಿತು. ರೈತರು ಹಾಗೂ ವಿಜ್ಞಾನಿಗಳ ಸಂವಾದವೂ ನಡೆಯಿತು.

ಇದನ್ನೂ ಓದಿ: ಅಡಕೆ ರೇಟ್ | 20 ಡಿಸೆಂಬರ್ 2024 | ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ | Adike rate

ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ನಿರ್ದೇಶಕ ಗಾಂಧಿದಾಸ್, ವಿಜ್ಞಾನಿಗಳ ವಿಭಾಗದ ಡೀನ್ (Sericulture) ಡಾ.ಎಲ್.ಕುಸುಮ, ಡಾ.ಭಾಗ್ಯ, ರೇಷ್ಮೆ ಇಲಾಖೆ ಉಪನಿರ್ದೇಶಕ ಮಾರಪ್ಪ ಬೀರಲದಿನ್ನಿ, ಅಮೃತ ಆಗ್ರ್ಯನಿಕ್ ಫರ್ಟಿಲೈಜರ್ ಕೆ.ನಾಗರಾಜ್, ಪ್ರಗತಿಪರ ಕೃಷಿಕ ಡಾ.ವೀರಭದ್ರಪ್ಪ ಸೇರಿದಂತೆ ರೇಷ್ಮೆ ಇಲಾಖೆ ಅಧಿಕಾರಿಗಳು,  ರೇಷ್ಮೆ ಕೃಷಿಕರು ಇದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga NewsKannada Newskannada suddiNammajana.comnumber one positionSericulturesilk departmentstate first in the countryಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದೇಶದಲ್ಲೇ ರಾಜ್ಯ ಪ್ರಥಮನಂಬರ್ ಒನ್ ಸ್ಥಾನನಮ್ಮಜನ.ಕಾಂರೇಷ್ಮೆ ಇಲಾಖೆರೇಷ್ಮೆ ಕೃಷಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಅಡಕೆ ರೇಟ್ | 20 ಡಿಸೆಂಬರ್ 2024 | ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ | Adike rate
Next Article Dina Bhavishya | ದಿನ ಭವಿಷ್ಯ | 21 ಡಿಸೆಂಬರ್ 2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?