Chitradurga News | Nammajana.com | 08-07-2025
ನಮ್ಮಜನ.ಕಾಂ, ಚಿತ್ರದುರ್ಗ: ತಾಲೂಕಿನ ಸಿರಿಗೆರೆಯ ತರಳಬಾಳು ಬೃಹನ್ಮಠದಲ್ಲಿ ಈ ವರ್ಷದ ನವೆಂಬರ್ ತಿಂಗಳಲ್ಲಿ ರಾಜ್ಯಮಟ್ಟದ ಕನ್ನಡ ನುಡಿಹಬ್ಬ(Nudi festival) ಆಯೋಜಿಸಲು ತರಳಬಾಳು ಬೃಹನ್ಮಠದ ಡಾ.ಶ್ರೀಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಮ್ಮತಿಸಿದ್ದಾರೆ.
ಇದನ್ನೂ ಓದಿ: ಸೇವಂತಿಗೆ ಹೂವು ಬೆಳೆಗೆ ಸೊರಗು ರೋಗ ಬಾಧೆ | ಗಗನಕ್ಕೇರಿದೆ ಬೆಲೆ

ಮಧ್ಯಕರ್ನಾಟಕ ಮೂರು ಜಿಲ್ಲೆಗಳ ಕಸಾಪ ಅಧ್ಯಕ್ಷರು ಸೋಮವಾರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಈ ಕುರಿತು ಶ್ರೀಗಳೊಂದಿಗೆ ಚರ್ಚಿಸಿದರು.
ಚಿತ್ರದುರ್ಗ ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, ಸಿರಿಗೆರೆ ಮಠದ ಆಶ್ರಯದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮ ನಿರಂತರವಾಗಿ ಜರುಗುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಪ್ರತಿವರ್ಷ ನವೆಂಬರ್ನಲ್ಲಿ ತರಳಬಾಳು ನುಡಿಹಬ್ಬ( Nudi festival) ಆಚರಿಸಲಾಗುತ್ತದೆ. ಈ ಬಾರಿ ಒಂದಷ್ಟು ವಿಭಿನ್ನವಾಗಿ ಆಚರಿಸಲು ಮಠದಿಂದ ಅವಕಾಶ ನೀಡಬೇಕೆಂದು ವಿನಂತಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶ್ರೀಗಳು ನುಡಿಹಬ್ಬದಲ್ಲಿ ಅರ್ಥಪೂರ್ಣ ಚರ್ಚೆ ಮತ್ತು ಕವಿಗೋಷ್ಠಿಗಳು ಆಯೋಜಿಸಬೇಕು. ಮಧ್ಯ ಕರ್ನಾಟಕಕ್ಕೆ ಬದಲಾಗಿ ರಾಜ್ಯಮಟ್ಟದ ನುಡಿಹಬ್ಬ ಆಯೋಜಿಸಿ, ಶಾಂತಿವನದಲ್ಲಿ ವಿಶೇಷ ಕವಿಗೋಷ್ಠಿ ನಡೆಸಿ. ಈ ಬಗ್ಗೆ ರಾಜ್ಯದ ಪ್ರಮುಖ ಸಾಹಿತಿಗಳು, ಕವಿಗಳನ್ನು ಆಹ್ವಾನಿಸಿ ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಇಂದು ಸಚಿವ ಶಿವರಾಜ ತಂಗಡಗಿ ಚಿತ್ರದುರ್ಗ ಜಿಲ್ಲಾ ಪ್ರವಾಸ
ಚಿಕ್ಕಮಗಳೂರು ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ಮಧ್ಯ ಕರ್ನಾಟಕದ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ(Nudi festival) ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಸಾಹಿತಿಗಳು, ಕವಿಗಳನ್ನು ಈ ನುಡಿಹಬ್ಬದಲ್ಲಿ ವಿಶೇಷವಾಗಿ ಆಹ್ವಾನಿಸಲಾಗುವುದು ಎಂದರು.
ದಾವಣಗೆರೆ ಕಸಾಪ ಜಿಲ್ಲಾಧ್ಯಕ್ಷ ವಾಮದೇವಪ್ಪ ಮಾತನಾಡಿ, ಸಿರಿಗೆರೆ ಮಠದಿಂದ ತರಳಬಾಳು ನುಡಿಹಬ್ಬವನ್ನು ಪ್ರತಿವರ್ಷ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ.
ಈ ಬಾರಿ ಮೂರು ಜಿಲ್ಲೆಗಳಿಂದ ಜು.27ರಂದು ಅಂತರ ಜಿಲ್ಲಾ ಕವಿಗೋಷ್ಠಿ ಆಯೋಜಿಸಲಾಗುವುದು ಎಂದರು.
ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ
ಕಸಾಪ ಜಿಲ್ಲಾ ಕಾರ್ಯದರ್ಶಿ ಮಳಲಿ ಶ್ರೀನಿವಾಸ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252