
Chitradurga news|nammajana.com|10-05-2025
ನಮ್ಮಜನ.ಕಾಂ, ಚಳ್ಳಕೆರೆ: ತಾಲೂಕಿನ ಬಾಲೇನಹಳ್ಳಿ ಸಮೀಪದಲ್ಲಿ ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಮತಿ ಇಂಧಿರಾಗಾಂಧಿ ವಸತಿ ಶಾಲೆ (ಪ.ಪಂ)ಯಲ್ಲಿ 2024-25ನೇ (SSLC Result) ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಲ್ಲಾ 49 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸತತ ನಾಲ್ಕನೇ ಬಾರಿ ಶೇಕಡ 100% ಫಲಿತಾಂಶ ಗಳಿಸುವ ಜೊತೆಗೆ ಚಳ್ಳಕೆರೆ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಶೇಕಡ100%. ಫಲಿತಾಂಶ ಪಡೆದ ಏಕೈಕ ಶಾಲೆಯಾಗುವ ಮೂಲಕ ಚಳ್ಳಕೆರೆ ತಾಲೂಕಿಗೆ ನಂಬರ್ ಒನ್ ಸ್ಥಾನ ಪಡೆದ ಶ್ರೇಯಕ್ಕೆ ಪಾತ್ರವಾಗಿದೆ.
ಅತ್ಯುನ್ನತ ಶ್ರೇಣಿಯಲ್ಲಿ 13 (ಡಿಸ್ಟಿಂಕ್ಷನ್) ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 32 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ದ್ವಿತೀಯ ಶ್ರೇಣಿಯಲ್ಲಿ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.

ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ದುರ್ಗಶ್ರೀ. ಆರ್ 579 (92.64%), ಮಧು.ಪಿ 572 (91.52%), ಪೂರ್ಣಿಮ.ಎಸ್ 571(91.36%), ಹೇಮಂತ್.ಕೆ.ಎನ್ 569 (91.04%), ದೀಕ್ಷಿತಾ.ಬಿ 567 (90.72%),
ದೇವೀರಮ್ಮ.ಎಮ್ 560 (89.06%), ,(SSLC Result)
ಹೇಮಂತ್.ಆರ್ 558 (89.28%), ಬೊಮ್ಮಲಿಂಗ.ಕೆ 550 (88.00%), ಕುಸುಮ.ಹೆಚ್ 546 (87.36%), ಅಭಿಷೇಕ್.ಎ 545 (87.02%), ಬೊರಮ್ಮ.ಓ 541 (86.56%), 12. ಅನುಷ್.ಆರ್ 537 (85.92%), ಧಾರಮದಲಿಂಗ ನಾಯಕ.ಎಸ್.ಎಮ್- 532 (85.12%) ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ , ಕ್ರೈಸ್ ವ್ಯಾಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಯು 2017-18ನೇ ಸಾಲಿನಲ್ಲಿ ಆರಂಭವಾಗಿದ್ದು, 2022-23ನೇ ಸಾಲಿನಲ್ಲಿ ಬಾಲೇನಹಳ್ಳಿಯಲ್ಲಿ 9 ಎಕರೆ ವಿಸ್ತೀರ್ಣ ಜಾಗದಲ್ಲಿ ಅತ್ಯಾಧುನಿಕ ಸಕಲ ಸೌಕರ್ಯಗಳನ್ನು ಹೊಂದಿರುವ ಅತ್ಯಾಕರ್ಷಕ ಕ್ಯಾಂಪಸ್ ನಿರ್ಮಿಸಲಾಗಿರುತ್ತದೆ.
ಶೈಕ್ಷಣಿಕ ವಿಭಾಗ, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ನಿಲಯ, ಭೋಜನ ಶಾಲೆ, ಪ್ರಾಂಶುಪಾಲರ ವಸತಿ ಗೃಹ ಹಾಗೂ ಬೋಧಕ, ಬೋಧಕೇತರ ವಸತಿ ಗೃಹಗಳನ್ನು ನಿರ್ಮಿಸಲಾಗಿರುತ್ತದೆ.
ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ 6ನೇ ತರಗತಿಗೆ ದಾಖಲಿಸಿಕೊಂಡು 10ನೇ (SSLC Result) ತರಗತಿಯವರೆಗೆ ವಿದ್ಯಾಭ್ಯಾಸ ನೀಡಲಾಗುತ್ತದೆ. ಪ್ರಸ್ತುತ 250 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಇದನ್ನೂ ಓದಿ: CHITRADURGA ನಗರಸಭೆ: ಮೇ.10 ರಿಂದ 12 ರವರೆಗೆ ಬಿ ಖಾತಾ ಅಭಿಯಾನ
ಬಾಕ್ಸ್
ಚಿತ್ರದುರ್ಗದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಹೆಚ್. ದಿವಾಕರ್ ಇವರ ಮಾರ್ಗದರ್ಶನ ಮತ್ತು ಆದೇಶದಂತೆ ಜೂನ್ ಮಾಹೆಯಿಂದಲೆ ಉತ್ತಮ ಫಲಿತಾಂಶ ಪಡೆಯಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ, ವಿದ್ಯಾರ್ಥಿಗಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಯಲ್ಲಿ ತೊಡಗಿಸಿದ್ದರಿಂದ ಈ ಫಲಿತಾಂಶ ಪಡೆಯಲು ಸಾಧ್ಯವಾಗಿದೆ ಎಂದು ಪ್ರಾಂಶುಪಾಲ ನಾಗರಾಜ್ ಗೋಪಾಲ್ ಪುರ ಅಭಿಪ್ರಾಯ ಪಟ್ಟಿದ್ದಾರೆ. ಇಂತಹ (SSLC Result) ಫಲಿತಾಂಶಕ್ಕೆ ಶ್ರಮಿಸಿದ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆಗಳು.
ಇದನ್ನೂ ಓದಿ: Lecturer post | ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಇದನ್ನೂ ಓದಿ: Transfer | ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆಗೆ ದಿನಾಂಕ ಫಿಕ್ಸ್