Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಹೆಚ್ಚು ಕರ ವಸೂಲಾತಿ ಮಾಡಿ ಪಿಡಿಒಗಳಿಗೆ ಸನ್ಮಾನ: ಇಒ ವೈ.ರವಿಕುಮಾರ್ | Taluk Panchayat
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಹೆಚ್ಚು ಕರ ವಸೂಲಾತಿ ಮಾಡಿ ಪಿಡಿಒಗಳಿಗೆ ಸನ್ಮಾನ: ಇಒ ವೈ.ರವಿಕುಮಾರ್ | Taluk Panchayat
ಇಂದಿನ ಸುದ್ದಿ

ಹೆಚ್ಚು ಕರ ವಸೂಲಾತಿ ಮಾಡಿ ಪಿಡಿಒಗಳಿಗೆ ಸನ್ಮಾನ: ಇಒ ವೈ.ರವಿಕುಮಾರ್ | Taluk Panchayat

Editor Nammajana
Last updated: 1 January 2025 16:53
By Editor Nammajana 2 Min Read
Share
SHARE

Chitradurga news|nammajana.com|01-01-2024

ನಮ್ಮಜನ.ಕಾಂ, ಚಿತ್ರದುರ್ಗ: ಗ್ರಾಮದ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿಯಾಗಲು ಸಾಧ್ಯ ಎಂದು ಚಿತ್ರದುರ್ಗ  (Taluk Panchayat) ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ  ಸಭಾಂಗಣದಲ್ಲಿ ಬುಧವಾರ ಚಿತ್ರದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ (Taluk Panchayat) ಹೆಚ್ಚು ಕರ ವಸೂಲಾತಿ ಮಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಗ್ರಾಮದ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿಯಾಗಲು ಸಾಧ್ಯ. ಹಾಗಾಗಿ ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಉತ್ತಮ ಅನುಷ್ಠಾನಕ್ಕೆ ಈ ಹೊಸ ವರ್ಷದ ದಿನ ಕಟಿಬದ್ಧರಾಗಬೇಕು ಎಂದು ತಿಳಿಸಿದ ಅವರು, ಉತ್ತಮ ಕರ (Taluk Panchayat) ವಸೂಲಿ ಮಾಡಿರುವ ಗ್ರಾಮ ಪಂಚಾಯಿತಿಳಂತೆ ಇತರೆ ಗ್ರಾಮ ಪಂಚಾಯಿತಿಗಳೂ ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ತೆರಿಗೆಯಿಂದ ಸಂಗ್ರಹಿಸುವ ಆದಾಯವನ್ನು ತನ್ನ ಆಡಳಿತ ವ್ಯವಸ್ಥೆಯಲ್ಲಿ ಕೆಲಸ ನಿರ್ವಹಿಸುವ ನೌಕರರ ಸಂಬಳ, ಗ್ರಾಮದ ಅಭಿವೃದ್ಧಿಗೆ ಮತ್ತು ಅಲ್ಲಿನ (Taluk Panchayat) ನಿವಾಸಿಗಳ ಮೂಲಭೂತ ಸೇವೆ ಒದಗಿಸಲು ಬಳಸಲಾಗುತ್ತದೆ.

ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಸೂಚನೆಯಂತೆ ಚಿತ್ರದುರ್ಗ ತಾಲ್ಲೂಕಿನ 38 ಗ್ರಾಮ ಪಂಚಾಯಿತಿಗಳಲ್ಲಿ ಎಲ್ಲಾ ಸಿಬ್ಬಂದಿಗಳೂ ಕಳೆದ ಒಂದು ತಿಂಗಳಿಂದ ಅಭಿಯಾನದ ರೂಪದಲ್ಲಿ ಕರ ವಸೂಲಾತಿ ಆಂದೋಲನ (Taluk Panchayat) ಹಮ್ಮಿಕೊಂಡಿದ್ದರಿಂದ ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ತಾಲ್ಲೂಕಿನ ರೂ. 12,44,11,412/-ಗಳ ಒಟ್ಟು ಬೇಡಿಕೆಯಲ್ಲಿ ರೂ.6,68,06,208/- ಕರ ವಸೂಲಿಯಾಗಿ ಡಿಸೆಂಬರ್ ಅಂತ್ಯಕ್ಕೆ ಶೇ.53.70 ಕರ ವಸೂಲಾತಿಯಾಗಿದೆ ಎಂದು ಹೇಳಿದರು.

ಜಿ.ಆರ್.ಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆನಂದ್ ಮಾತನಾಡಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ದಿನಂಪ್ರತಿ ಜನರ (Taluk Panchayat) ಮನವೊಲಿಸುವಿಕೆಯಿಂದ, ಅಲ್ಲದೆ ಗ್ರಾಮ ಪಂಚಾಯತಿಯ ಆಡಳಿತ ಸದಸ್ಯರ ಸಹಕಾರದಿಂದಾಗಿ ಉತ್ತಮ ಸಾಧನೆ ಮಾಡಲು ಸಾಧ್ಯವಾಯಿತು ಎಂದರು.

ಇದೇ ಸಂದರ್ಭದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ಅತಿ ಹೆಚ್ಚು ಕರ ವಸೂಲಿ ಮಾಡಿರುವ ಆಲಗಟ್ಟ (ಶೇ.82.98), ಇಂಗಳದಾಳ್(ಶೇ.87.29), ಜಿ.ಆರ್.ಹಳ್ಳಿ(ಶೇ.84.47) ಮತ್ತು ಮಾಡನಾಯಕನಹಳ್ಳಿ (ಶೇ.86.28) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ಪ್ರಮುಖವಾಗಿ ಬಿಲ್ ಕಲೆಕ್ಟರ್‍ಗಳನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ:  Suco Bank | ಸುಕೋ ಬ್ಯಾಂಕ್ 2025 ಕ್ಯಾಲೆಂಟರ್ ಬಿಡುಗಡೆ

ಕಾರ್ಯಕ್ರಮದಲ್ಲಿ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ಕೆಂಚಪ್ಪ, ತಾಲ್ಲೂಕು ಯೋಜನಾಧಿಕಾರಿ ರಾಘವೇಂದ್ರ, ನರೇಗಾ ಮತ್ತು ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಹೆಚ್.ಯರ್ರಿಸ್ವಾಮಿ ಮತ್ತು ರೂಪಾ ಕುಮಾರಿ, ವ್ಯವಸ್ಥಾಪಕ ಇರ್ಫಾನ್, ಪಿಡಿಒ ಮಹಾಲಕ್ಷ್ಮಿ, ನಾಸೀರ್, ಎಂಐಎಸ್ ಸಂಯೋಜಕ ಉಮೇಶ್, ಐಇಸಿ ಸಂಯೋಜಕ ಸತ್ಯನಾರಾಯಣ, ಚಿತ್ರದುರ್ಗ ತಾಲ್ಲೂಕಿನ ಪಿಡಿಒ, ಕಾರ್ಯದರ್ಶಿ, ದ್ವಿತೀಯ ದರ್ಜೆ ಸಹಾಯಕರು, ಬಿಲ್ ಕಲೆಕ್ಟರ್‍ಗಳು ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಇದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Bill CollectorChitradurga NewsEO RavikumarGram PanchayatHighest Bill CollectorKannada Newskannada suddiNammajana.comPDOSanmanaTaluk Panchayatಅತಿ ಹೆಚ್ಚು ಕರ ವಸೂಲಿಇಒ ರವಿಕುಮಾರ್ಕನ್ನಡ ನ್ಯೂಸ್ಕನ್ನಡ ಸುದ್ದಿಗ್ರಾಮ ಪಂಚಾಯಿತಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತಾಲೂಕು ಪಂಚಾಯತ್ನಮ್ಮಜನ.ಕಾಂಪಿಡಿಒಬಿಲ್ ಕಲೆಕ್ಟರ್ಸನ್ಮಾನ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink1
Previous Article Suco Bank | ಸುಕೋ ಬ್ಯಾಂಕ್ 2025 ಕ್ಯಾಲೆಂಟರ್ ಬಿಡುಗಡೆ
Next Article Dina Bhavishya | ದಿನ ಭವಿಷ್ಯ | ಇವತ್ತು ಯಾವ ರಾಶಿಗೆ ಹೇಗಿದೆ ದಿನ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?