Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸಿರಿಗೆರೆ ತರಳಬಾಳು ಶ್ರೀಗೆ ಬೆಂಬಲ ಸೂಚಿಸಿ ರಕ್ತದಲ್ಲಿ ಪತ್ರ ಬರೆದ ಭಕ್ತರು | Taralbalu Mata Sirigere
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ವಿಶೇಷ ಸುದ್ದಿ > ಸಿರಿಗೆರೆ ತರಳಬಾಳು ಶ್ರೀಗೆ ಬೆಂಬಲ ಸೂಚಿಸಿ ರಕ್ತದಲ್ಲಿ ಪತ್ರ ಬರೆದ ಭಕ್ತರು | Taralbalu Mata Sirigere
ವಿಶೇಷ ಸುದ್ದಿ

ಸಿರಿಗೆರೆ ತರಳಬಾಳು ಶ್ರೀಗೆ ಬೆಂಬಲ ಸೂಚಿಸಿ ರಕ್ತದಲ್ಲಿ ಪತ್ರ ಬರೆದ ಭಕ್ತರು | Taralbalu Mata Sirigere

Editor Nammajana
Last updated: 21 August 2024 3:27 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 21-8-2024

ನಮ್ಮಜನ.ಕಾಂ, ಚಿತ್ರದುರ್ಗ: ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದ ಬಗ್ಗೆ ಕೆಲವರು ನಡೆಸುತ್ತಿರುವ ಷಡ್ಯಂತ್ರದ ವಿರುದ್ಧ (Taralbalu Mata Sirigere) ಮಠದ ಭಕ್ತರು ಸಿಡಿದಿದ್ದಾರೆ.

ಹೆಮ್ಮನ‌ ಬೇತೂರು ಗ್ರಾಮಸ್ಥರಿಂದ ರಕ್ತದಲ್ಲಿ ಸಹಿ ಮಾಡಿ ಪತ್ರ ರವಾನೆ

ದಾವಣಗೆರೆ ತಾಲೂಕಿನ ಹೆಮ್ಮನ ಬೇತೂರು ಗ್ರಾಮಸ್ಥರು ತರಳಬಾಳು ಶ್ರೀಗಳಿಗೆ ಬೆಂಬಲ ಸೂಚಿಸಿ ರಕ್ತದಲ್ಲಿ ಸಹಿ ಮಾಡಿದ ಪತ್ರಗಳನ್ನು ರವಾನಿಸಿ, ಮಠದ ಪೀಠಾಧ್ಯಕ್ಷರಾಗಿ ತಾವು ಮುಂದುವರೆಯಬೇಕು. ಯಾವುದೇ ಅಪಪ್ರಚಾರಗಳಿಗೆ (Taralbalu Mata Sirigere) ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ಇಡೀ ಗ್ರಾಮದ ಭಕ್ತರು ನಿಮಗೆ ಬೆಂಬಲ ಸೂಚಿಸುತ್ತಿದ್ದೇವೆ. ಯಾರ ಒತ್ತಡಕ್ಕೂ ಮಣಿಯದೇ ಸ್ವಯಂಪ್ರೇರಿತರಾಗಿ ನಾವೆಲ್ಲರೂ ಸಭೆ ನಡೆಸಿ ಈ ನಿರ್ಧಾರಕ್ಕೆ ಬಂದಿದ್ದೇವೆ.

ಶ್ರೀಗಳ ವಿರುದ್ದ ನಡೆಸುತ್ತಿರುವ ಪಿತೂರಿಗೆ ಹೋರಾಟದ ಮೂಲಕ ಉತ್ತರ ಕೊಡಲು ನಾವು ಸಿದ್ದರಿದ್ದೇವೆ. ಸಮಾಜದಲ್ಲಿ ವಿನಾಕಾರಣ ಸುಳ್ಳು ಹೇಳುತ್ತಾ ಮಠದ ಹೆಸರು ಕೆಡಿಸಲು ಯತ್ನಿಸುತ್ತಿರುವವರು ಸುಮ್ಮನಿದ್ದರೆ ಒಳಿತು. ಇಲ್ಲದಿದ್ದರೆ ನಾವೂ ತಿರುಗೇಟು ನೀಡುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇಂದು ಹಳ್ಳಿ ಹಳ್ಳಿಗಳಲ್ಲಿ ಎಲ್ಲಾ ಜನಸಾಮಾನ್ಯರು, ಪ್ರಜ್ಞಾವಂತ ಭಕ್ತರು ಪೂಜ್ಯರ ಮುಂದಾಳತ್ವದಲ್ಲಿ ಬಲಿಷ್ಠ ಸಮ ಸಮಾಜದ ನಿರ್ಮಾಣ ಮಾಡಲು ತೊಡಗಿದ್ದೇವೆ. ಪಿತೂರಿ ನಡೆಸುವವರ ಬಗ್ಗೆ ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ. ಇಷ್ಟು ದಿನ ಇಲ್ಲದ (Taralbalu Mata Sirigere) ಸುಳ್ಳು ಆರೋಪ, ಪಿತೂರಿ ಹೆಚ್ಚಾಗಿ ನಡೆಯುತ್ತಿದೆ. ನಾವೆಲ್ಲರೂ ಶ್ರೀಗಳ ಪರ ನಿಲ್ಲುವ ಮೂಲಕ ಸರಿಯಾದ ಉತ್ತರ ನೀಡೋಣ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಗ್ರಾಮದ ದೇವಾಲಯದಲ್ಲಿ ಗ್ರಾಮದ ಮುಖಂಡರು, ಭಕ್ತರೆಲ್ಲರೂ ಸೇರಿ ಶ್ರೀ ತರಳಬಾಳು ಬೃಹನ್ಮಠದ ಮೇಲೆ ಸುಳ್ಳು ಸುದ್ದಿ, ಪಿತೂರಿ ಆರೋಪ ಮಾಡುವ ಬಂಡವಾಳಶಾಹಿಗಳ (Taralbalu Mata Sirigere) ವಿರುದ್ಧ ತೊಡೆ ತಟ್ಟಿ ನಿಲ್ಲೋಣ. ಜಗದ್ಗುರುಗಳ ನೇತೃತ್ವದಲ್ಲಿ ಸಮಾಜ ಸೇವೆ ಮಾಡಲು ರಕ್ತದಲ್ಲಿ ಸಹಿ ಮಾಡಿ ನಿರ್ಣಯ ಕೈಗೊಂಡಿದ್ದೇವೆ ಎಂದರು.

ಸಿರಿಗೆರೆ ಮಠವು ಬೇರೆ ಮಠಗಳಂತೆ ಆಗಬಾರದು. ಸ್ವಾಮೀಜಿಗಳು ಕೊನೆ ಉಸಿರು ಇರುವವರೆಗೂ ಮುಂದುವರಿಯಬೇಕು.

ಅವರು ಸುತ್ತಮುತ್ತಲಿನ ಹಳ್ಳಿಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಿದ ಆಧುನಿಕ ಭಗೀರಥರು. ಎಷ್ಟೋ ಹಳ್ಳಿಗಳಲ್ಲಿ ಇಂದಿಗೂ ನೀರಾವರಿ ಸೌಲಭ್ಯ ಮುಂದುವರಿದಿದೆ ಎಂದರೆ ಅದು ಸಿರಿಗೆರೆ ಶ್ರೀಗಳಿಂದ ಆಗಿರುವ ಕಾರ್ಯ. ಹಾಗಾಗಿ ಶ್ರೀಗಳ ಬದಲಾವಣೆ ಮಾಡಬಾರದು ಎಂಬ ನಿರ್ಣಯ ತೆಗೆದುಕೊಂಡು ಶ್ರೀಗಳ ವಿರುದ್ಧ ಇರುವವರ ಷಡ್ಯಂತ್ರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಗುಡುಗಿದರು.

ಶ್ರೀಗಳ ದೂರದೃಷ್ಟಿಯಿಂದ ಕಾರ್ಯಗತಗೊಂಡಿರುವ 20 ಕ್ಕೂ ಹೆಚ್ಚು ಏತನೀರಾವರಿ ಯೋಜನೆಗಳ ಅಡಿಯಲ್ಲಿ ನೂರಾರು (Taralbalu Mata Sirigere) ಕೆರೆಗಳಿಗೆ ನೀರು ತುಂಬಿಸುವ ಸತ್ಕಾರ್ಯ ಮಾಡಿದ್ದಾರೆ.

ಅದರಲ್ಲೂ ಸರ್ಕಾರ ಕೈಗೊಳ್ಳುವ ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ಶ್ರೀಗಳ ಕಾರ್ಯವೈಖರಿ ಮಹತ್ವವಾದುದು ಎಂದು ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ ಮುಖಂಡರು

ಸಭೆಯಲ್ಲಿ ಎಸ್.ಆರ್. ಪ್ರಕಾಶ್, ನಾಗರಾಜಪ್ಪ, ಎಸ್.ಎನ್. ಕಲ್ಲೇಶಪ್ಪ, ಎನ್.ಎಂ. ಪ್ರಸನ್ನ, ಎಸ್‌. ಬಸವರಾಜ್, ಬಿ.ಎಸ್. ಸಚಿನ್, ಪಂಪಣ್ಣ, ಸಿ. ಎಸ್. ಪ್ರಕಾಶ, ಎಚ್.ಆರ್. ಶಿವಕುಮಾರ,  ಇ.ರಮೇಶ, ಕರಿಬಸಣ್ಣ, ಎಸ್.ಎಸ್.ಸೋಮಶೇಖರ್, ಯು.ಆರ್.ಎಸ್. ಶ್ರೀನಿವಾಸ್, ಜಿ.ಎಸ್ ರಾಜಶೇಖರ್, ತಿಪ್ಪೇಸ್ವಾಮಿ, ಪರಿಶಿಷ್ಟ ಪಂಗಡ ಸಮಾಜದ ಮುಖಂಡ ಟಿ.ಡಿ ರಮೇಶ್, ಬಕ್ಕೇಶ್ ಇತರರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:ChitradurgaDavanagereತರಳಬಾಳು ಶ್ರೀDr. Shivamurthy Shivacharya Sri SwamijiHemmanabethurLetter in BloodSirigereSirigere MathSirigere SriSirigere SwamijiSupportTaralbalu Jagadguru Brihan MathTaralbalu SriVillagersWrittenಗ್ರಾಮಸ್ಥರುಚಿತ್ರದುರ್ಗಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ ಸ್ವಾಮೀಜಿ‌ತರಳಬಾಳು ಜಗದ್ಗುರು ಬೃಹನ್ಮಠದಾವಣಗೆರೆಬರೆದುಬೆಂಬಲರಕ್ತದಲ್ಲಿ ಪತ್ರಸಿರಿಗೆರೆಸಿರಿಗೆರೆ ಮಠಸಿರಿಗೆರೆ ಶ್ರೀಸಿರಿಗೆರೆ ಸ್ವಾಮೀಜಿಹೆಮ್ಮನ‌ ಬೇತೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article ದಿನ ಭವಿಷ್ಯ | 21 ಆಗಸ್ಟ್ 2024 | ಯಾವ ರಾಶಿಗೆ ಹೇಗಿದೆ ಶುಭ ಫಲ? Today Dina Bhavishya
Next Article ವಾಣಿ ವಿಲಾಸ ಸಾಗರದ ಇಂದಿನ ನೀರಿನ ಮಟ್ಟ | Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?