Chitradurga News | Nammajana.com | 19-08-2025
ನಮ್ಮಜನ ನ್ಯೂಸ್ ಕಾಂ,ಮೊಳಕಾಲ್ಮುರು: ಹಾಡಹಗಲೇ (Thieves) ಜನ ಜಂಗುಳಿ ಇರುವ ಪಟ್ಟಣದ ಎಸ್ ಬಿ ಐ ಬ್ಯಾಂಕ್ ಬಳಿ ಸೋಮವಾರದಂದು ಶಿಕ್ಷಕನ ಬೈಕ್ ನಲ್ಲಿ ಇಟ್ಟಿದ್ದ 5ಲಕ್ಷ ರೂಪಾಯಿ ಹಣ ಎಗರಿಸಿ ಖತರ್ನಾಕ್ ಕಳ್ಳರು ಪರಾರಿಯಾಗಿದ್ದಾನೆ.
ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ

ತಾಲ್ಲೂಕಿನ ದೇವಸಮುದ್ರ ಹೋಬಳಿಯ ಕೋನಾಪುರ ಗ್ರಾಮದ ಪ್ರೌಢಶಾಲಾ ಶಿಕ್ಷಕ ಸೋಮಶೇಖರ್ ಹಣ ಕಳೆದುಕೊಂಡವರಾಗಿದ್ದಾರೆ.
ಇವರು ಕಾರ್ಯ ನಿಮಿತ್ತ ತಮ್ಮೇನಹಳ್ಳಿಯ ಎಸ್ಬಿಐ ಶಾಖೆಯಲ್ಲಿರುವ ಖಾತೆಯಿಂದ ರೂ 1 ಲಕ್ಷ ಹಣ ಡ್ರಾ ಮಾಡಿಕೊಂಡು ಬಂದಿದ್ದ ಸೋಮಶೇಖರ್ ಪಟ್ಟಣದ ಎಸ್ಬಿಐ ಬ್ಯಾಂಕ್ ನಿಂದ ಮತ್ತೆ ಸೋಮವಾರ ರೂ.4ಲಕ್ಷ ಹಣ ಡ್ರಾ ಮಾಡಿಕೊಂಡು ಬ್ಯಾಗ್ನಲ್ಲಿ ಹಾಕಿಕೊಂಡು ಬ್ಯಾಂಕ್ ಮುಂಭಾಗ ನಿಲ್ಲಿಸಿದ್ದ ತಮ್ಮ ಬೈಕ್ನ ಸೈಡ್ ಬ್ಯಾಗ್ನಲ್ಲಿ ಇಟ್ಟುಕೊಂಡಿದ್ದಾರೆ.
ಶಿಕ್ಷಕನ ಬೈಕ್ ನಲ್ಲಿ ಇಟ್ಟಿದ್ದ 5 ಲಕ್ಷ ಕಳವು
ಬೈಕ್ ಪಂಚರ್ ಆಗಿರುವನ್ನು ಕಂಡು ನಿಧಾನವಾಗಿ ಬೈಕ್ನ್ನು ಪಂಚರ್ ಶಾಪ್ಗೆ ತೆಗೆದುಕೊಂಡು ಹೋಗುವಾಗ ಸ್ಕೂಟಿಯಲ್ಲಿ ಎರಡು ಸಲ ಅಡ್ಡ ಬಂದ ಇಬ್ಬರು ಅಪರಿಚಿತರು ಸೈಡ್ ಬ್ಯಾಗ್ನಲ್ಲಿದ್ದ ಹಣವನ್ನು ಲಪಟಾಯಿಸಿದ್ದಾರೆ.
ಇದನ್ನೂ ಓದಿ: ಮೈನಿಂಗ್ ಯಾರ್ಡ್ ಸ್ಥಳಾಂತರ : ವಾಯುಮಾಲಿನ್ಯ ಮತ್ತು ಜಿಲ್ಲಾ ಯೋಜನಾಧಿಕಾರಿಗಳ ತಂಡ ಭೇಟಿ
ಪಂಚರ್ ಅಂಗಡಿ ಬಳಿ ಬೈಕ್ ನಿಲ್ಲಿಸಿ ನೋಡಿದಾಗ ಹಣ ಕಳವು ಆಗಿರುವುದು ಗಮನಕ್ಕೆ ಬಂದಿದೆ. ಬ್ಯಾಂಕ್ ಬಳಿ ಹಣ ಲಪಟಾಯಿಸಿರುವ ವ್ಯಕ್ತಿಗಳೇ ಟಯರ್ನ ಗಾಳಿ ಬಿಟ್ಟಿದ್ದಾರೆ. ಈ ಮೂಲಕ ವ್ಯವಸ್ಥಿತವಾಗಿ ಹಿಂಬಾಲಿಸಿ ಕೃತ್ಯ ಎಸಗಿದ್ದಾರೆ ಎಂದು ಸೋಮಶೇಖರ್ ಅಳಲು ತೋಡಿಕೊಂಡರು.
ಘಟನಾ ಸ್ಥಳಕ್ಕೆ ಕೂಡಲೇ(Thieves) ಆಗಮಿಸಿದ ಪಿಎಸ್ ಐ ಮಹೇಶ್ ಹೊಸಪೇಟೆ ಸಿಸಿ ಟಿವಿಗಳನ್ನು ಪರಿಶೀಲನೆ ಮಾಡಿ ಕಳ್ಳರನ್ನು ಸೆರೆ ಹಿಡಿಯಲು ಮುಂದಾಗಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252