Chitradurga news | nammajana.com | 21-5-2024
ನಮ್ಮಜನ.ಕಾಂ, ಚಿತ್ರದುರ್ಗ: ಸೋಮವಾರ ರಾತ್ರಿ ಸುರಿದ ಮಳೆಗೆ (Today rain report) ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 108.6 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ.
ಹಿರಿಯೂರು ತಾಲ್ಲೂಕು ಮಳೆ
ಹಿರಿಯೂರಿನಲ್ಲಿ 54.4 ಮಿ.ಮೀ, ಇಕ್ಕನೂರಿನಲ್ಲಿ 68.4 ಮಿ.ಮೀ, ಈಶ್ವರಗೆರೆಯಲ್ಲಿ 51 ಮಿ.ಮೀ, ಬಬ್ಬೂರಿನಲ್ಲಿ 59.2ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕು ಮಳೆ
ಚಿತ್ರದುರ್ಗ-1ರಲ್ಲಿ 45.8 ಮಿ.ಮೀ, ಚಿತ್ರದುರ್ಗ-2ರಲ್ಲಿ 41.3 ಮಿ.ಮೀ ಭರಮಸಾಗರದಲ್ಲಿ 38.4ಮಿ.ಮೀ, ಹಿರೇಗುಂಟನೂರಿನಲ್ಲಿ 13.4ಮಿ.ಮೀ, ತುರುವನೂರಿನಲ್ಲಿ 28.6ಮಿ.ಮೀ, ಸಿರಿಗೆರೆ 28.8ಮಿ.ಮೀ ಹಾಗೂ ಐನಳ್ಳಿಯಲ್ಲಿ 36.2 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕು ಮಳೆ
ಹೊಸದುರ್ಗದಲ್ಲಿ 72.6 ಮಿ.ಮೀ, ಬಾಗೂರು 55.5 ಮಿ.ಮೀ, ಮಾಡದಕೆರೆ 62 ಮಿ.ಮೀ, ಮತ್ತೋಡಿನಲ್ಲಿ 13.2 ಮಿ.ಮೀ ಹಾಗೂ ಶ್ರೀರಾಂಪುರದಲ್ಲಿ 45.2 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕು ಮಳೆ
ಹೊಳಲ್ಕೆರೆಯಲ್ಲಿ 30.6 ಮಿ.ಮೀ, ರಾಮಗಿರಿ 31.5ಮಿ.ಮೀ, ಚಿಕ್ಕಜಾಜೂರು 30.5 ಮಿ.ಮೀ, ಬಿ.ದುರ್ಗ 29.2 ಮಿ.ಮೀ, ಹೆಚ್.ಡಿ.ಪುರ 38.6 ಮಿ.ಮೀ ಮತ್ತು ತಾಳ್ಯದಲ್ಲಿ 6.2ಮಿ.ಮೀ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕು ಮಳೆ
ಚಳ್ಳಕೆರೆಯಲ್ಲಿ 44 ಮಿ.ಮೀ, ಪರಶುರಾಂಪುರ 46.2ಮಿ.ಮೀ, ನಾಯಕನಹಟ್ಟಿ 50.4ಮಿ.ಮೀ, ತಳಕು 31.2ಮಿ.ಮೀ ಹಾಗೂ ಡಿ.ಮರಿಕುಂಟೆಯಲ್ಲಿ 35.4ಮಿ.ಮೀ ಮಳೆಯಾಗಿದೆ.
ಜಿಲ್ಲೆಯಾದ್ಯಂತ 34 ಮನೆ ಭಾಗಶಃ ಹಾನಿ, 11.48 ಹೆಕ್ಟೇರ್ (Today rain report)
ತೋಟಗಾರಿಕೆ ಬೆಳೆ ಹಾನಿ:(Today rain report)
ಸೋಮವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 34 ಮನೆಗಳು ಭಾಗಶಃ ಹಾನಿಯಾಗಿದ್ದು, 1 ದೊಡ್ಡ ಜಾನುವಾರು, 2 ಸಣ್ಣ ಜಾನುವಾರು ಹಾಗೂ 1 ಜೀವಹಾನಿಯಾಗಿದೆ.
ಜಿಲ್ಲೆಯಾದ್ಯಂತ ಒಟ್ಟು 11.48 ಹೆಕ್ಟೇರ್ ತೋಟಗಾರಿಕೆ ಬೆಳೆನಾಶ ಮತ್ತು ಮೂರು ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ವರದಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 5 ಮನೆಗಳು ಭಾಗಶಃ ಹಾನಿಯಾಗಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ ಭಾಗಶಃ 7 ಮನೆಹಾನಿ, 1 ದೊಡ್ಡ ಜಾನುವಾರು ಹಾಗೂ 1 ಜೀವಹಾನಿ ಹಾಗೂ 3 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನಲ್ಲಿ ಭಾಗಶಃ 4 ಮನೆಗಳು ಹಾನಿಯಾಗಿವೆ. ಹೊಸದುರ್ಗ ತಾಲ್ಲೂಕಿನಲ್ಲಿ 10 ಮನೆಗಳು ಭಾಗಶಃ ಹಾನಿ ಹಾಗೂ 2 ಸಣ್ಣ ಜಾನುವಾರು, 1 ಹೆಕ್ಟೇರ್ ತೋಟಗಾರಿಕೆ ಬೆಳೆ ಮತ್ತು 3 ಮನೆಗಳಿಗೆ ನೀರು ನುಗ್ಗಿರುವ ಕುರಿತು ಪ್ರಕರಣ ವರದಿಯಾಗಿದೆ.
ಇದನ್ನೂ ಓದಿ: Rashi Bhavishya: ಇಂದಿನ ದಿನ ಭವಿಷ್ಯ 21-5-2024
ಹಿರಿಯೂರು ತಾಲ್ಲೂಕಿನಲ್ಲಿ ಮಳೆಗೆ (Today rain report) ಭಾಗಶಃ 5 ಮನೆಹಾನಿ ಮತ್ತು 7.48 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಭಾಗಶಃ 3 ಮನೆಗಳು ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252