Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Retired Additional SP: ನಿವೃತ ಆಡಿಷನಲ್ ಎಸ್ಪಿ ವಿಜಯ್ ಕುಮಾರ್ ಎಂ. ಸಂತೋಷ್ ಅವರಿಗೆ ಸನ್ಮಾನ ಸಮಾರಂಭ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Retired Additional SP: ನಿವೃತ ಆಡಿಷನಲ್ ಎಸ್ಪಿ ವಿಜಯ್ ಕುಮಾರ್ ಎಂ. ಸಂತೋಷ್ ಅವರಿಗೆ ಸನ್ಮಾನ ಸಮಾರಂಭ
ಇಂದಿನ ಸುದ್ದಿ

Retired Additional SP: ನಿವೃತ ಆಡಿಷನಲ್ ಎಸ್ಪಿ ವಿಜಯ್ ಕುಮಾರ್ ಎಂ. ಸಂತೋಷ್ ಅವರಿಗೆ ಸನ್ಮಾನ ಸಮಾರಂಭ

Nammajana Sub Editor
Last updated: 22 July 2025 9:04 PM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 22-07-2025

ನಮ್ಮಜನ.ಕಾಂ,ಮೊಳಕಾಲ್ಮುರು: ದಾವಣಗೆರೆ ಜಿಲ್ಲೆಯ ಅಡಿಷನಲ್ ಎಸ್ಪಿ ಆಗಿ ನಿವೃತ್ತರಾದ(Retired Additional SP) ವಿಜಯಕುಮಾರ್ ಎಂ ಸಂತೋಷ್ ಅವರಿಗೆ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ಸಂಜೆ ಡಿಕೆಆರ್ ಗ್ರೂಪ್ಸ್ ರಾಂಪುರ ಹಾಗೂ ವಿವಿಧ ದಲಿತ ಪರ ಸಂಘಟನೆಗಳು, ನಾನಾ ಸಂಘ ಸಂಸ್ಥೆಗಳು ಸೇರಿದಂತೆ ತಾಲೂಕಿನ ಎಲ್ಲಾ ಸಮಾಜದವರು ನೇತೃತ್ವದಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳಿಗೆ ಓದಿನಲ್ಲಿ ಆಸಕ್ತಿ | CDPO ನವೀನ್ ಕುಮಾರ್

ಕಾರ್ಯಕ್ರಮದಲ್ಲಿ ಡಿಕೆಆರ್ ಗ್ರೂಪ್ಸ್ ಮಾಲೀಕರಾದ ಎಂ.ಡಿ ಮಂಜುನಾಥ್ ಮಾತನಾಡಿ, ದಾವಣಗೆರೆ ಜಿಲ್ಲೆಯ ಅಡಿಷನಲ್ ಎಸ್ಪಿ ಆಗಿ ನಿವೃತ್ತರಾಗಿರುವ ವಿಜಯ್ ಕುಮಾರ್ ಎಂ ಸಂತೋಷ್ ಅವರು ತಾಲೂಕಿನಲ್ಲಿ ಈ ಹಿಂದೆ ಎರಡು ಬಾರಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಅಂದಿನಿಂದ ಇಂದಿನವರೆಗೂ ಜನಮೆಚ್ಚಿದ ಅಧಿಕಾರಿಯಾಗಿ ಜನಮಾನಸದಲ್ಲಿ ಉಳಿದಿದ್ದಾರೆ.ಇದು ಅವರ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ. ಅಂದಿನ ದಿನಗಳಲ್ಲಿ ಮೊಳಕಾಲ್ಮುರು ತಾಲೂಕಿನಲ್ಲಿ ಅನ್ಯಾಯ ಮತ್ತು ಅಕ್ರಮಗಳ ವಿರುದ್ಧ ಹೋರಾಡುತ್ತಾ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿದ್ದರು.

ಕರ್ತವ್ಯ ನಿಷ್ಠೆ ಜನಪರ(Retired Additional SP) ಕಾಳಜಿಯಿಂದಲೇ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯನ್ನು ಗುರುತಿಸಿಕೊಂಡಿದ್ದಾರೆ. ಯಾವುದೇ ಜನಾಂಗ ತಾರತಮ್ಯವಿಲ್ಲದೆ ಪ್ರತಿಯೊಂದು ಜನಾಂಗವನ್ನು ಸಮಾನವಾಗಿ ನೋಡುತ್ತಾ, ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪಾದ ಕೊಡದೇ ಪ್ರತಿಯೊಂದು ಜನಾಂಗದವರಲ್ಲಿ ಕಾನೂನು ಅರಿವು ಮೂಡಿಸುವ ಮೂಲಕ ಜನಸ್ನೇಹಿ ಪೊಲೀಸ್ ಆಗಿದ್ದರು ಎಂದು ಹೇಳಿದರು.

ಇದನ್ನೂ ಓದಿ: ಜಿಲ್ಲಾ ಪಂಚಾಯತ್ ಸಿಇಒಗಳಿಗೆ PDO ನಿಯೋಜನೆ ಅಧಿಕಾರ

ಸನ್ಮಾನ ಸ್ವೀಕರಿಸಿದ ನಿವೃತ್ತ ಅಡಿಷನಲ್ ಎಸ್.ಪಿ ವಿಜಯಕುಮಾರ್ ಸಂತೋಷ್ ಎಂ. ಮಾತನಾಡಿ, ನಾನು 30 ವರ್ಷಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ್ದೇನೆ, ಹಿರಿಯೂರು ಮತ್ತು ಚಿತ್ರದುರ್ಗ ಡಿವೈ ಎಸ್ಪಿ ಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಎರಡು ಬಾರಿ ಮೊಳಕಾಲ್ಮೂರಿನಲ್ಲಿ ಸಿಪಿಐ ಆಗಿ ಕಾರ್ಯ ನಿರ್ವಹಿಸುವಂತಹ ಭಾಗ್ಯ ನನ್ನದಾಗಿತ್ತು. ನಾನು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ತಾಲೂಕಿನ ಪ್ರತಿಯೊಂದು ವರ್ಗದವರು ಸಹಕಾರ ನೀಡಿದ್ದರು.

ಯಾವುದೇ ಅಧಿಕಾರಿ(Retired Additional SP) ತಾವು ಸೇವೆ ಸಲ್ಲಿಸುವ ಸ್ಥಳಗಳಲ್ಲಿ ದರ್ಪ ದೌರ್ಜನ್ಯ ತೋರದೇ ಜನರ ಮಧ್ಯೆ ಜನಸ್ನೇಹಿಯಂತೆ ಇದ್ದು ಜನರ ಸಮಸ್ಯೆಗಳನ್ನು ಪರಿಹರಿಸಿದಾಗ ಮಾತ್ರ ಜನರ ಮನಸಿನಲ್ಲಿ ಅಚ್ಚಳಿಯದೆ ಉಳಿಯಲು ಸಾಧ್ಯ. ಮೊಳಕಾಲ್ಮುರಿನ ಜನರು ಅಂದಿಗೂ ಇಂದಿಗೂ ತೋರುತ್ತಿರುವ ನಿಮ್ಮ ಪ್ರೀತಿ,ಅಭಿಮಾನಕ್ಕೆ ನಾನು ಚಿರಋಣಿ ಎಂದರು.

ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ

ಕಾರ್ಯಕ್ರಮದಲ್ಲಿ ದಾವಣಗೆರೆ ಅಡಿಷನಲ್ ಎಸ್ ಪಿ ಮಂಜುನಾಥ್, ಸಿಪಿಐ ವಸಂತ ವಿ.ಅಸೋದೆ ಬಿಜಿಕೆರೆ ಗ್ರಾಪಂ ಅಧ್ಯಕ್ಷ ಎಸ್ ಜಯಣ್ಣ, ನಿವೃತ್ತ ಮುಖ್ಯ ಶಿಕ್ಷಕ ಸಣ್ಣ ಯಲ್ಲಪ್ಪ, ಕಾಂಗ್ರೆಸ್ ಮುಖಂಡರಾದ ಮೊಹಮ್ಮದ್ ಖಾಸಿಂ ಟಿ.ಕೆ ದಲಿತ ಮುಖಂಡರಾದ ಶ್ರೀನಿವಾಸ್ ಮೂರ್ತಿ, ರಾಯಾಪುರ ನಾಗೇಂದ್ರಪ್ಪ, ಯರ್ಜೆನಹಳ್ಳಿ ನಾಗರಾಜ್, ನೆರ್ಲಹಳ್ಳಿ ಹನುಮಂತು, ಮರ್ಲಹಳ್ಳಿ ನಾಗರಾಜ್ ದೊಡ್ಡೋಬಯ್ಯ ಸೇರಿದಂತೆ ಇತರರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:ChitradurgaChitradurga Newsfelicitation ceremonyKannada Newskannada suddiMolakalmuruNammajana.comRetired Additional SPVijay Kumar M. Santhoshಕನ್ನಡ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನಿವೃತ್ತ ಆಡಿಷನಲ್ ಎಸ್ಪಿಮೊಳಕಾಲ್ಮುರುವಿಜಯ್ ಕುಮಾರ್ ಎಂ. ಸಂತೋಷ್ಸನ್ಮಾನ ಸಮಾರಂಭ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead1
Wink0
Previous Article ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳಿಗೆ ಓದಿನಲ್ಲಿ ಆಸಕ್ತಿ | CDPO ನವೀನ್ ಕುಮಾರ್
Next Article Taekwondo: ಚಿತ್ರದುರ್ಗದ ಟೇಕ್ವಾಂಡೋ ಅಮೆಚೂರ್ ಸೆಂಟರ್‍ ನಾ ವಿದ್ಯಾರ್ಥಿಗಳಿಗೆ ಚಿನ್ನದ ಪದಕ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?