Chitradurga News | Nammajana.com |05-08-2025
ನಮ್ಮಜನ.ಕಾಂ,ಚಿತ್ರದುರ್ಗ: ಸುದೀರ್ಘ(Retirement)0 37 ವರ್ಷಗಳ ಕಾಲ ವಿವಿಧ ಇಲಾಖೆ ಹಾಗೂ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಹಾಗೂ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಸಿ.ಜಿ.ಶ್ರೀನಿವಾಸ್ ಅವರಿಗೆ ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಇದನ್ನೂ ಓದಿ: ಕುವೆಂಪು ವಿಶ್ವವಿದ್ಯಾಲಯ ಪಠ್ಯಕ್ಕೆ ಸಾಹಿತಿ ಬಿ.ಎಲ್.ವೇಣು ಕಥೆ ಸೇರ್ಪಡೆ

ಸಿ.ಜಿ.ಶ್ರೀನಿವಾಸ್ ಅವರು ದ್ವಿತೀಯ ದರ್ಜೆ ಸಹಾಯಕರಾಗಿ, ಪ್ರಥಮ ದರ್ಜೆ ಲೆಕ್ಕ ಸಹಾಯಕ, ಲೆಕ್ಕ ಅಧೀಕ್ಷಕರು, ಲೆಕ್ಕ ಪರಿಶೋಧನಾ ಅಧಿಕಾರಿಗಳು, ಲೆಕ್ಕಾಧಿಕಾರಿ, ಹಿರಿಯ ಉಪನಿರ್ದೇಶಕರು ಹಾಗೂ ಮುಖ್ಯ ಲೆಕ್ಕಾಧಿಕಾರಿಗಳಾಗಿ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ವಾಲ್ಮೀಕಿ(Retirement) ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಜಿಲ್ಲಾಧ್ಯಕ್ಷ ಡಾ.ಹೆಚ್.ಗುಡ್ಡದೇಶ್ವರಪ್ಪ, ಸುದೀರ್ಘ ಅವಧಿಗೆ ನಿಷ್ಠೆಯಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಸಿ.ಜಿ.ಶ್ರೀನಿವಾಸ್ ಅವರು ತಮ್ಮ ಸೇವಾವಧಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಅನುಪಮ ಸೇವೆ ಸಲ್ಲಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ: ವಾಣಿ ವಿಲಾಸ ಸಾಗರ ನೀರಿನ ಮಟ್ಟ ಹೆಚ್ಚಳ | ಎಷ್ಟು ಕ್ಯೂಸೆಕ್ಸ್ ನೀರು ಬಂದಿದೆ?
ಈ ಸಂದರ್ಭದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಾಬು, ಖಜಾಂಚಿ ಎಸ್.ಬಿ.ರವಿಶಂಕರ್, ಪದಾಧಿಕಾರಿಗಳಾದ ವಿಮಲಾ ನಾಗರಾಜ್, ಹರೀಶ್, ಸುಮಂತ್, ಪೊಲೀಸ್ ರವಿ, ಒ.ಬಿ.ಬಸವರಾಜ್, ರವಿಕುಮಾರ್, ಟಿ.ರಂಜಿತಾ, ಹೆಚ್.ತಿಪ್ಪಯ್ಯ, ಸತೀಶ್ ಸೇರಿದಂತೆ ಮತ್ತಿತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252