Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ತುಂಗಾಹಿನ್ನೀರು ಯೋಜನೆಯಡಿ 17.12 ಲಕ್ಷ ಕ್ಷೇತ್ರದ ಜನರಿಗೆ ನೀರಿನ ಸೌಲಭ್ಯ: ಸಚಿವ ಪ್ರಿಯಾಂಕ್ ಖರ್ಗೆ | Tunga Hinniru Scheme
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ತುಂಗಾಹಿನ್ನೀರು ಯೋಜನೆಯಡಿ 17.12 ಲಕ್ಷ ಕ್ಷೇತ್ರದ ಜನರಿಗೆ ನೀರಿನ ಸೌಲಭ್ಯ: ಸಚಿವ ಪ್ರಿಯಾಂಕ್ ಖರ್ಗೆ | Tunga Hinniru Scheme
ಇಂದಿನ ಸುದ್ದಿ

ತುಂಗಾಹಿನ್ನೀರು ಯೋಜನೆಯಡಿ 17.12 ಲಕ್ಷ ಕ್ಷೇತ್ರದ ಜನರಿಗೆ ನೀರಿನ ಸೌಲಭ್ಯ: ಸಚಿವ ಪ್ರಿಯಾಂಕ್ ಖರ್ಗೆ | Tunga Hinniru Scheme

Editor Nammajana
Last updated: 10 July 2024 18:57
By Editor Nammajana 2 Min Read
Share
SHARE

Chitradurga news|nammajana.com|10-7-2024

ನಮ್ಮಜನ.ಕಾಂ, ಚಳ್ಳಕೆರೆ: ಕಳೆದ ಸುಮಾರು ಎರಡು ವರ್ಷಗಳಿಂದ ತುಂಗಾಹಿನ್ನೀರು ಯೋಜನೆಯಡಿ ಕೂಡ್ಲಗಿ, ಚಳ್ಳಕೆರೆ, ಮೊಳಕಾಲ್ಮೂರು, ಪಾವಗಡ ವಿಧಾನಸಭಾ ಕ್ಷೇತ್ರಗಳಿಗೆ ಕುಡಿಯುವ ನೀರು ಒದಿಸುವ ನಿಟ್ಟಿನಲ್ಲಿ ಪೈಪ್‌ಲೈನ್ (Tunga Hinniru Scheme) ಪೂರ್ಣಗೊಂಡಿದ್ದು, ಚಳ್ಳಕೆರೆ ಗಡಿಭಾಗದ ಪಾವಗಡ ತಾಲ್ಲೂಕಿನ ಕೆಂಚಮ್ಮನಹಳ್ಳಿ ಬಳಿ ನೀರು ದಾಸ್ತಾನು ಮಾಡು ಪಾವಗಡ ತಾಲ್ಲೂಕಿಗೆ ವಿತರಣೆ ಮಾಡುವ ಕಾಮಗಾರಿಯನ್ನು ವೀಕ್ಷಿಸಲು ಗ್ರಾಮಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ನೀಡಿದ ಎಲ್ಲಾ ಭರವಸೆಗಳನ್ನು (Tunga Hinniru Scheme) ಈಡೇರಿಸುವಲ್ಲಿ ಕಠಿಬದ್ದವಾಗಿದೆ.

ನಾಲ್ಕು ತಾಲೂಕಿನ ಲಕ್ಷಾಂತರ ಜನರಿಗೆ ಅನುಕೂಲ

ತುಂಗಾಹಿನ್ನೀರು ಯೋಜನೆಯಡಿ ನಾಲ್ಕು ತಾಲ್ಲೂಕಿನ ಲಕ್ಷಾಂತರ ಜನರಿಗೆ ಕುಡಿಯುವ ನೀರು ಒದಗಿಸುವ ಮಹತ್ವದ ಯೋಜನೆಯಾಗಿದೆ. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಕೆಲವೇ ದಿನಗಳಲ್ಲಿ ನೀರು ದಾಸ್ತಾನು ಮಾಡಲಾಗುವುದು ಸುಮಾರು ೯೫ ಲಕ್ಷ ಲೀಟರ್ ಸಾಮರ್ಥ್ಯ ನೀರು ಸಂಗ್ರಹ ಮಾಡಿ ವಿತರಣೆ ಮಾಡಲಾಗುವುದು. ಸಧ್ಯದ ಸ್ಥಿತಿಯಲ್ಲಿ ಚಳ್ಳಕೆರೆ ತಾಲ್ಲೂಕಿನಾದ್ಯಂತ ಒಂದೆರಡು ಬಾರಿ (Tunga Hinniru Scheme) ಉತ್ತಮ ಹದ ಮಳೆಯಾಗಿದೆ.ಬಿತ್ತನೆ ಕಾರ್ಯ ಆರಂಭವಾಗಿ ರೈತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ಧಾರೆ. ಕುಡಿಯುವ ನೀರು ನೀಡಲು ಈ ಯೋಜನೆ ಸಹಕಾರಿಯಾಗಿದೆ ಎಂದರು.

ಇದನ್ನೂ ಓದಿ: ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಎಂ.ಎನ್.ಅಹೋಬಳಪತಿ ನೇಮಕ | Member of Karnakata Media Academy

ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಸಚಿವರು ಇದೇ ಮೊದಲಬಾರಿಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಕಾಮಗಾರಿ ಪರಿಶೀಲನೆಗೆ ಆಗಮಿಸಿರುವುದು ಸಂತಸ ತಂದಿದೆ. ತುಂಗಾಹಿನ್ನೀರು ಯೋಜನೆಯಡಿ ಕಾಮಗಾರಿ ಯಶಸ್ವಿಯಾಗಿ ನಡೆದಿದೆ. ಪಾವಗಡ ಕ್ಷೇತ್ರದ ಜನತೆಗೆ ಚಳ್ಳಕೆರೆ ಮೂಲಕವೇ (Tunga Hinniru Scheme) ಕುಡಿಯುವ ನೀರು ಹಾದುಹೋಗಲಿದೆ. ಸರಾಸರಿ ಸುಮಾರು ೯೦ ಲಕ್ಷ ಲೀಟರ್ ನೀರು ದಾಸ್ತಾನು ಮಾಡಿ, ನಂತರ ವಿತರಣೆ ಮಾಡಲಾಗುವುದು. ಜಿಲ್ಲೆಯ ವ್ಯಾಪ್ತಿಯಲ್ಲಿ ೧೧೩೮ ಗ್ರಾಮಗಳು, ಎರಡು ಪಟ್ಟಣದ ೧೭.೧೨ ಲಕ್ಷ ಜನರಿಗೆ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿದಂತಾಗಿದೆ. ತಾಲ್ಲೂಕಿನ ೩೬೦, ತುರುವನೂರಿನ ೫೮ ಗ್ರಾಮೀಣ ವಸತಿಪ್ರದೇಶಗಳಿಗೆ ಈ ನೀರಿನ ಸೌಲಭ್ಯ ದೊರಕಲಿದೆ ಎಂದು ತಿಳಿಸಿದ್ಧಾರೆ.

ಇದನ್ನೂ ಓದಿ:  ಖಾಸಗಿ ಗಣಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲಿ : ಸಂಸದ ಗೋವಿಂದ ಎಂ ಕಾರಜೋಳ | Private mining companies

ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ, ಸಹಾಯಕ ಕಾರ್ಯಪಾಲಕ ಅಭಿಯಂತರ ದಯಾನಂದಸ್ವಾಮಿ, ಸಹಾಯಕ ಇಂಜಿನಿಯರ್ ತಿಪ್ಪೇಸ್ವಾಮಿ, ಇಒ ಶಶಿಧರ, ಮುಖಂಡರಾದ ರವಿಕುಮಾರ್, ವೀರಭದ್ರಪ್ಪ, ಶಶಿಧರ, ರಮೇಶ್‌ಗೌಡ, ರಾಘವೇಂದ್ರ, ನರಸಿಂಹಮೂರ್ತಿ, ದೇವರಾಜು ಮುಂತಾದವರು ಉಪಸ್ಥಿತರಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:17.12 Lakhs17.12 ಲಕ್ಷChallakereChitradurga NewsKannada Newskannada suddiKudlagiMLAMolakalmuruNammajana.comPavagada Assembly ConstituencyPriyank KhargeProjectSecretaryT RaghumurthyTunga HinniruVillage Development and Panchayat RajWater Facilityಕನ್ನಡ ನ್ಯೂಸ್ಕನ್ನಡ ಸುದ್ದಿಕೂಡ್ಲಗಿಕ್ಷೇತ್ರಗ್ರಾಮಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಟಿ ರಘುಮೂರ್ತಿತುಂಗಾ ಹಿನ್ನಿರುನಮ್ಮಜನ.ಕಾಂನೀರಿನ ಸೌಲಭ್ಯಪಾವಗಡ ವಿಧಾನಸಭಾಪ್ರಿಯಾಂಕ್ ಖರ್ಗೆಮೊಳಕಾಲ್ಮೂರುಯೋಜನೆಶಾಸಕಸಚಿವ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಎಂ.ಎನ್.ಅಹೋಬಳಪತಿ ನೇಮಕ | Member of Karnakata Media Academy
Next Article ದಿನ ಭವಿಷ್ಯ 11-7-2024 | Dina Bhavishya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?