Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಮಾನವ ಪಾಠ ಕಲಿತರೆ ಮಾತ್ರ ಹಬ್ಬ ಹುಣ್ಣಿಮೆಗಳಿಗೆ ವಿಶೇಷ ಮೆರಗು: ಪಂಡಿತಾರಾಧ್ಯ ಶ್ರೀ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಮಾನವ ಪಾಠ ಕಲಿತರೆ ಮಾತ್ರ ಹಬ್ಬ ಹುಣ್ಣಿಮೆಗಳಿಗೆ ವಿಶೇಷ ಮೆರಗು: ಪಂಡಿತಾರಾಧ್ಯ ಶ್ರೀ
ಇಂದಿನ ಸುದ್ದಿ

ಮಾನವ ಪಾಠ ಕಲಿತರೆ ಮಾತ್ರ ಹಬ್ಬ ಹುಣ್ಣಿಮೆಗಳಿಗೆ ವಿಶೇಷ ಮೆರಗು: ಪಂಡಿತಾರಾಧ್ಯ ಶ್ರೀ

nammajana.com
Last updated: 11 April 2024 07:32
By nammajana.com 2 Min Read
Share
Ugadi Sanehalli Sri Panditharadhya Swamij
SHARE

ನಮ್ಮಜನ.ಕಾಂ, ಸಾಣೇಹಳ್ಳಿ: ಮನುಷ್ಯ ಹಬ್ಬಗಳ ನೆಪದಲ್ಲಾದರೂ ದ್ವೇಷ ಭಾವನೆಯನ್ನು ದೂರ ತಳ್ಳಿ ಪ್ರೀತಿ,  ವಿಶ್ವಾಸ, ದಯೆ ಕೃತಜ್ಞತಾ ಭಾವವನ್ನು ಅಳವಡಿಸಿಕೊಳ್ಳುವ ಸಂಕಲ್ಪ ತಳೆಯಬೇಕು. ಆ ಗುಣಗಳು ಹೊರಗಿನಿಂದ ಹಣ ಕೊಟ್ಟು ಕೊಳ್ಳುವಂಥವುಗಳಲ್ಲ. ನಮ್ಮೊಳಗಡೆ ಇರುವ ಅಪಾರ ಸಂಪತ್ತು. ಆ ಸಂಪತ್ತು ಸದ್ವಿನಿಯೋಗ ಮಾಡಿಕೊಂಡಾಗ ಬದುಕು ಹರ್ಷದಾಯಕವಾಗಲು ಸಾಧ್ಯ ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಹೇಳಿದರು.

ಇಲ್ಲಿನ ಶ್ರೀ ಮಠದ ಆವರಣದಲ್ಲಿ ಚಂದ್ರದರ್ಶನವನ್ನು ಶಿಷ್ಯರೊಂದಿಗೆ ವೀಕ್ಷಿಸಿ ಮಾತನಾಡಿ ಪ್ರಕೃತಿ ಮಾತೆ ನಮಗೆ ಎಷ್ಟೆಲ್ಲಾ ಒಳಿತನ್ನು ಮಾಡಿದರೂ ನಾನು ಮಾಡಿದೆ ಎಂದು ಜಂಬ ಕೊಚ್ಚಿಕೊಳ್ಳುವುದಿಲ್ಲ. ಅದರಿಂದ ಮಾನವ ಪಾಠ ಕಲಿತರೆ ಮಾತ್ರ ಹಬ್ಬ ಹುಣ್ಣಿಮೆಗಳಿಗೆ ವಿಶೇಷ ಮೆರಗು, ಅರ್ಥ ಬರುವುದು. ಇಲ್ಲವಾದರೆ ಅವು ಸಹ ಸಾಂಪ್ರದಾಯಕ ಆಚರಣೆಗಳಾಗಿ ಕೊನೆಗೆ ಮನುಷ್ಯರನ್ನೇ ಮೂಢರನ್ನಾಗಿ, ಕಂದಾಚಾರಿಗಳನ್ನಾಗಿ ಮಾಡಬಹುದು.

ಭಾರತೀಯರಿಗೆ ಯುಗಾದಿ ಹೊಸ ವರ್ಷ

ಭಾರತೀಯರಿಗೆ ಯುಗಾದಿ ಹೊಸ ವರ್ಷ. ಅಲ್ಲಿಂದಲೇ ನಮ್ಮ ಚಟುವಟಿಕೆಗಳು ಪ್ರಾರಂಭವಾಗುವುದು. ಪ್ರಕೃತಿಯಲ್ಲಿ ಅನೇಕ ಬದಲಾವಣೆಗಳನ್ನು ಈ ಸಂದರ್ಭದಲ್ಲಿ ಕಾಣಬಹುದು. `ಲೋಕದ ಚೇಷ್ಟೆಗೆ ರವಿ ಬೀಜವಾದಂತೆ’  ಎಂದು ಅಕ್ಕಮಹಾದೇವಿಯವರು ಹೇಳಿದ್ದಾರೆ.

ಹಳೆಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು

`ಹಳೆಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು’ ಎನ್ನುವಂತೆ ಯುಗಾದಿಯ ಸಂದರ್ಭದಲ್ಲಿ ಗಿಡ ಮರಗಳು ಹಣ್ಣೆಲೆಗಳನ್ನು ಕಳಚಿಕೊಂಡು ಹೊಸ ಚಿಗುರೊಡೆದು ಪ್ರಕೃತಿಮಾತೆಗೆ ಹಸಿರು ಸೀರೆ ಉಡಿಸಿದಂತೆ ಕಾಣುವುದು. ಆದರೆ ಈ ವರ್ಷ ಮಳೆ ಇಲ್ಲದೇ ಎಲ್ಲೆಡೆ ಬಿಸಿಲಿನ ತಾಪ, ಕೆರೆ ಕಟ್ಟೆಗಳು ಒಣಗಿ ಬಿಕೋ ಎನ್ನುತ್ತಿವೆ. ದನಕರುಗಳಿಗೆ ಮೇವು, ನೀರಿಗೆ ಬರ. ಎಲ್ಲ ಊರುಗಳಲ್ಲೂ ಕುಡಿಯುವ ನೀರಿಗೆ ಅಹಕಾರ ಎದ್ದು ಜನ ಜನುವಾರುಗಳ ಬದುಕು ತುಂಬಾ ಕಷ್ಟವಾಗಿದೆ.

ಯುಗಾದಿಯ ಸಂದರ್ಭದಲ್ಲಿ ಮೈಗೆ ಎಣ್ಣೆ ಹಚ್ಚಿಕೊಂಡು ಬೇವಿನ ಸೊಪ್ಪನ್ನು ನೀರಲ್ಲಿ ಹಾಕಿ ಸ್ನಾನ ಮಾಡುವುದು, ಬೇವು ಬೆಲ್ಲ ತಿನ್ನುವುದು ಈ ಹಬ್ಬದ ವಿಶೇಷತೆ. ಬೇವು ಕಹಿಯನ್ನು ನೆನಪಿಸುತ್ತದೆ. ಬದುಕು ಸಿಹಿ ಕಹಿಗಳ ಸಮ್ಮಿಶ್ರಣ. ಸಿಹಿ ಬಂದಾಗ ಹಿಗ್ಗದೆ ಕಹಿ ಬಂದಾಗ ಕುಗ್ಗದೇ ಎರಡನ್ನೂ ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ಬದುಕು ಬಂಗಾರವಾಗುವುದು.

ವಿಶ್ವಾಸದಿಂದ ಬಾಳೋಣ

ಜಗಳ, ದ್ವೇಷ, ಅನುಮಾನ ಇನ್ನೇನೇನೋ ಕಾರಣದಿಂದ ಬಹುದಿನಗಳಿಂದ ಒಬ್ಬರ ಮುಖ ಒಬ್ಬರು ನೋಡದಿದ್ದರೂ ಚಂದ್ರದರ್ಶನ ಪಡೆದ ನಂತರ ಪರಸ್ಪರ ಕೈ ಕುಲುಕಿ, ಕೈ ಮುಗಿದು ಇಲ್ಲವೇ ಪಾದ ನಮಸ್ಕಾರ ಮಾಡಿ ವಿಶ್ವಾಸದಿಂದ ಬಾಳೋಣ ಎನ್ನುವ ಭಾವನೆ ಬೆಳೆಸಿಕೊಳ್ಳಬೇಕು. ಒಟ್ಟಾರೆ ಯುಗಾದಿ ಹಬ್ಬ ಎಲ್ಲರ ಮನಸ್ಸುಗಳನ್ನು ಹಸನು ಮಾಡುವ, ಒಟ್ಟುಗೂಡಿಸುವ ಕಾರ್ಯ ಮಾಡುವುದು ಎಂದರು. ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು, ಊರಿನ ಗ್ರಾಮಸ್ಥರು ಚಂದ್ರದರ್ಶನ ಮಾಡಿ ಶ್ರೀಗಳ ಆಶೀರ್ವಾದ ಪಡೆದು ಬೇವು-ಬೆಲ್ಲ ಪ್ರಸಾದ ಸೇವಿಸಿದರು.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

TAGGED:Chitradurga NewsKannada NewsNamjajana.comSanehalliSri Panditharadhya SwamijiUgadiಕನ್ನಡ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಯುಗಾದಿಶ್ರೀ ಪಂಡಿತಾರಾಧ್ಯ ಸ್ವಾಮೀಜಿಸಾಣೇಹಳ್ಳಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Sk basavarajan ದೇಶದ ಸುರಕ್ಷತೆಗಾಗಿ ಮತ್ತೊಮ್ಮೆ  ಬಿಜೆಪಿ ಅಗತ್ಯ: ಎಸ್.ಕೆ.ಬಸವರಾಜನ್
Next Article chandrappa holalkere, govind Karjol, BN chandrappa, H anjaneya Ground Report: ಕಮಲ ಪಡೆಗೆ ಬಂಡಾಯದ ಬಿಸಿ ಹೆಚ್ಚಿಸಿದ್ದ ಹೊಳಲ್ಕೆರೆಯಲ್ಲಿ ಹೇಗಿದೆ ವಾತಾವರಣ, ಕೈ ಪಡೆಯ ಕತೆ ಏನು?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?