Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Upper Bhadra Project: ಭದ್ರಾ ಮೇಲ್ದಂಡೆ | ಉಭಯ ಸರ್ಕಾರದ ವಿರುದ್ದ ಹೋರಟಕ್ಕೆ ನೀರಾವರಿ ಹೋರಟ ಅನುಷ್ಟಾನ ಸಮಿತಿ ಸಜ್ಜು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ವಿಶೇಷ ಸುದ್ದಿ > Upper Bhadra Project: ಭದ್ರಾ ಮೇಲ್ದಂಡೆ | ಉಭಯ ಸರ್ಕಾರದ ವಿರುದ್ದ ಹೋರಟಕ್ಕೆ ನೀರಾವರಿ ಹೋರಟ ಅನುಷ್ಟಾನ ಸಮಿತಿ ಸಜ್ಜು
ವಿಶೇಷ ಸುದ್ದಿ

Upper Bhadra Project: ಭದ್ರಾ ಮೇಲ್ದಂಡೆ | ಉಭಯ ಸರ್ಕಾರದ ವಿರುದ್ದ ಹೋರಟಕ್ಕೆ ನೀರಾವರಿ ಹೋರಟ ಅನುಷ್ಟಾನ ಸಮಿತಿ ಸಜ್ಜು

Editor Nammajana
Last updated: 19 June 2024 4:16 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

chitradurga news|nammajana.com|19-6-2024

ನಮ್ಮಜನ.ಕಾಂ, ಚಿತ್ರದುರ್ಗ: ಭದ್ರಾ ಮೇಲ್ದಂಡೆ ಕಾಮಗಾರಿಗೆ (Upper Bhadra Project) ಚುರುಕಿನ ವೇಗ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಂದಿನಂತೆ ಉದಾಸೀನ ಮನೋಭಾವ ತಾಳಿವೆ. ಹೋರಾಟವನ್ನು ತೀವ್ರಗೊಳಿಸುವುದು ಅನಿವಾರ್ಯವೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಹೇಳಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಮಂಗಳವಾರ ನಡೆದ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಲೋಕಸಭೆ ಚುನಾವಣೆ ಎದುರಾದ ಹಿನ್ನಲೆಯಲ್ಲಿ ಸಹಜವಾಗಿ ಹೋರಾಟದಿಂದ ಹಿಂದೆ ಸರಿದಿದ್ದೆವು. ಚುನಾವಣೆ ಮುಗಿದ ಬಳಿಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬಗ್ಗೆ ಪ್ರಸ್ತಾಪ ಮಾಡುತ್ತಿಲ್ಲ. ಅನುದಾನ ಬಿಡುಗಡೆಗೂ ಮುಂದಾಗಿಲ್ಲ. ಇದೇ ನಿರ್ಲಕ್ಷ್ಯ ಮುಂದುವರಿದರೆ ಯೋಜನೆ ಮುಗಿಯಲ್ಲಿ ಮತ್ತೊಂದು ದಶಕ ಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಕೊಟ್ಟ ಮಾತಿನಂದ 5300 ಕೋಟಿ ರುಪಾಯಿ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದರಲ್ಲಿಯೇ ಕಾಲ ಕಳೆಯುತ್ತಿದೆ. ನಾವುಗಳು ಗ್ಯಾರಂಟಿ ಯೋಜನೆ ವಿರೋದಿಸುವುದಿಲ್ಲ, ಆದರೆ ನೀರಾವರಿ ಯೋಜನೆಗಳ (Upper Bhadra Project) ಕಾಲಮಿತಿಯಲ್ಲಿ ಮುಗಿಸುವುದು ಸರ್ಕಾರಗಳ ಕರ್ತವ್ಯವೆಂಬುದ ನೆನಪು ಮಾಡಿಕೊಡುತ್ತಿದ್ದೇವೆ ಎಂದು ಲಿಂಗಾರೆಡ್ಡಿ ಹೇಳಿದರು.

ಅಬ್ಬಿನಹೊಳಲು ಭೂ ಸ್ವಾಧೀನ ಪ್ರಕ್ರಿಯೆ ಸಮಸ್ಯೆ ಮುಗಿದಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್  (Upper Bhadra Project) ಹೇಳಿದ್ದರು. ಆದರೆ ಕಾಲುವೆ ನಿರ್ಮಾಣದ ಕಾಮಗಾರಿ ಮುಗಿದಿದೆಯಾ ಎಂಬ ಬಗ್ಗೆ ಇದುವರೆಗೂ ಇಲಾಖೆಯಿಂದ ಸಮಜಾಯಿಷಿ ನೀಡಲಾಗಿಲ್ಲ. ಅಧಿಕಾರಿಗಳು ಕೂಡಾ ಭೂ ಸ್ವಾಧೀನದ ಬಗ್ಗೆ ವಾಸ್ತವಾಂಶಗಳ ಬಹಿರಂಗಗೊಳಿಸಿಲ್ಲ. ಭೂ ಸ್ವಾಧೀನವನ್ನೇ ದೊಡ್ಡ ಸಮಸ್ಯೆನ್ನಾಗಿ ಮಾಡಿ ಯೋಜನೆಯ ಮೂಲೆ ಗುಂಪಾಗಿ ಮಾಡುವ ಹುನ್ನಾರಗಳು ನಡೆಯುತ್ತಿವೆಯೇ ಎಂಬ ಬಗ್ಗೆ ಅನು್ಮಾಗಳು ಮೂಡಿವೆ ಎಂದರು.

ನೂತನ ಸಂಸದರಾಗಿರುವ ಗೋವಿಂದ ಕಾರಜೋಳ ಅವರು ಈ ಮೊದಲು ಜಲಸಂಪನ್ಮೂಲ ಸಚಿವರಾಗಿದ್ದರು. ಅವರಿಗೆ ಭದ್ರಾ ಮೇಲ್ದಂಡೆ (Upper Bhadra Project) ಯೋಜನೆ ಬಗ್ಗೆ ಅರಿವಿದೆ. ಕೇಂದ್ರದಿಂದ 5300 ಕೋಟಿ ರುಪಾಯಿ ಅನುದಾನ ಬಿಡುಗಡೆಯಾಗಬೇಕಿದೆ. ಹಾಗಾಗಿ ಬುಧವಾರ ನೀರಾವರಿ ಅನುಷ್ಠಾನ ಸಮಿತಿಯಿಂದ ಗೋವಿಂದ ಕಾರಜೋಳ ಅವರ ಜೊತೆ ಚರ್ಚಿಸಲಾಗುವುದು.
ಕೇಂದ್ರದಲ್ಲಿ ನೂತನ ಸಚಿವರಾಗಿ ಮಧ್ಯ ಕರ್ನಾಟಕ ಪ್ರತಿನಿಧಿಸುತ್ತಿರುವ ವಿ. ಸೋಮಣ್ಣ ಅವರನ್ನು ಹೋರಾಟ ಸಮಿತಿ ಸಂಪರ್ಕಿಸಲು ಮುಂದಾಗಿದೆ.

ಜೂನ್ 24 ರಿಂದ ಲೋಕಸಭೆ ಅಧಿವೇಶನ ಆರಂಕಾಮಗಾರಿ ದೆ . ಅಷ್ಟರೊಳಗೆ ಸಚಿವರ ಭೇಟಿಯಾಗಿ ಭದ್ರಾ ಮೇಲ್ದಂಡೆಗೆ (Upper Bhadra Project) ಅನುದಾನ ಬಿಡುಗಡೆಗೆ ಯತ್ನಿಸುವಂತೆ ಕೋರಲಾಗುವುದು. ಇದೇ ಪ್ರಸ್ತಾಪ ಸಂಸದ ಗೋವಿಂದ ಕಾರಜೋಳ ಅವರ ಮುಂದೆ ಮಂಡಿಸಲಾಗುವುದು ಎಂದರು. ಭದ್ರಾ ಮೇಲ್ದಂಡೆಗೆ ಆಗ್ರಹಿಸಿ ಇದುವರೆಗೆ ನಾಲ್ಕು ತಾಲೂಕುಗಳ ಬಂದ್ ಮಾಡಲಾಗಿದೆ.

ಇದನ್ನೂ ಓದಿ: Halurameshwar: ಹಾಲುರಾಮೇಶ್ವರ ಕ್ಷೇತ್ರದಲ್ಲಿ ಹುಂಡಿ ಹಣ ಕಳವು, ಅರ್ಚಕರ ಏನೇಳ್ತರೇ?

ಶೀಘ್ರ ಮೊಳಕಾಲ್ಮುರು ಹಾಗೂ ಹೊಸದುರ್ಗ ಬಂದ್ ಗೆ ಕರೆ ನೀಡಲಾಗುವುದು. ರಾಜ್ಯ ಸರ್ಕಾರ ಬಯಲು ಸೀಮೆ ಜನರ ತಾಳ್ಮೆ ಪರೀಕ್ಷಿಸದೆ ಭದ್ರಾ ಮೇಲ್ದಂಡೆಗೆ (Upper Bhadra Project) ಚುರುಕಿನ ವೇಗ ನೀಡಬೇಕೆಂದು ಲಿಂಗಾರೆಡ್ಡಿ ಆಗ್ರಹಿಸಿದರು.

ಈ ಸಭೆಯಲ್ಲಿ ಭಾಗವಹಿಸಿದವರು 

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ತಾಲೂಕು ಅಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಮಹಿಳಾ ಘಟಕದ ಅಧ್ಯಕ್ಷೆ ದೊಡ್ಡ ಸಿದ್ದವ್ವನಹಳ್ಳಿ ಸುಧ, ನೀರಾವರಿ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ,ಹುಣಿಸೆಕಟ್ಟ ಕಾಂತರಾಜ್ ಇದ್ದರು.

Telegram Group Join Now
WhatsApp Group Join Now

You Might Also Like

Astrology | ದಿನ ಭವಿಷ್ಯ, ಯಾರಿಗೆಲ್ಲ ಆರ್ಥಿಕ ಅನುಕೂಲ

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ

TAGGED:Bhadra upper bankChitradurga Newsdiscussion with MP Govinda Karajoladual governmentFor struggleIrrigation Implementation Struggle Committee DecisionKannada Newskannada suddiNammajana.comoutrageWednesdayಆಕ್ರೋಶಉಭಯ ಸರ್ಕಾರಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನೀರಾವರಿ ಅನುಷ್ಠಾನ ಹೋರಾಟ ಸಮಿತಿ ನಿರ್ಣಯಬುಧವಾರ ಸಂಸದ ಗೋವಿಂದ ಕಾರಜೋಳ ಅವರೊಂದಿಗೆ ಚರ್ಚೆಭದ್ರಾ ಮೇಲ್ದಂಡೆಹೋರಾಟಕ್ಕೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Halurameshwar: ಹಾಲುರಾಮೇಶ್ವರ ಕ್ಷೇತ್ರದಲ್ಲಿ ಹುಂಡಿ ಹಣ ಕಳವು, ಅರ್ಚಕರ ಏನೇಳ್ತರೇ?
Next Article Chitradurga education news: ಪರಿಕರಗಳ ಬಳಕೆಯಿಂದ ವಿಜ್ಞಾನ ಭೋದನೆ ಹೆಚ್ಚು ಪರಿಣಾಮಕಾರಿ: ಎಸ್.ನಾಗಭೂಷಣ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere
ಇಂದಿನ ಸುದ್ದಿ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?