Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಾಲ್ಮೀಕಿಯವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನೆಡೆಯಿರಿ: ಶಾಸಕ ಟಿ.ರಘುಮೂರ್ತಿ | Valmiki Jayanti Challakere
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಾಲ್ಮೀಕಿಯವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನೆಡೆಯಿರಿ: ಶಾಸಕ ಟಿ.ರಘುಮೂರ್ತಿ | Valmiki Jayanti Challakere
ಇಂದಿನ ಸುದ್ದಿ

ವಾಲ್ಮೀಕಿಯವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನೆಡೆಯಿರಿ: ಶಾಸಕ ಟಿ.ರಘುಮೂರ್ತಿ | Valmiki Jayanti Challakere

Editor Nammajana
Last updated: 17 October 2024 5:10 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|17-10-2024

ನಮ್ಮಜನ.ಕಾಂ, ಚಳ್ಳಕೆರೆ: ಅಪಾರ ಜ್ಞಾನ ಸಂಪತ್ತು ಹೊಂದಿದ್ದ ಮಹರ್ಷಿ ವಾಲ್ಮೀಕಿಯವರು ಸುಮಾರು 24 ಸಾವಿರ ಸಂಸ್ಕೃತ ಶ್ಲೋಕಗಳನ್ನು ರಾಮಾಯಣವಾಗಿ ಪರಿವರ್ತನೆ ಮಾಡಿದಂತಹ ಮಹಾನ್ ಚೇತನ. ನಾಡಿನ ವಾಲ್ಮೀಕಿ ಸಮುದಾಯದ ಸದಾಕಾಲ ಮಹರ್ಷಿ ವಾಲ್ಮೀಕಿಯವರ ತತ್ವಾದರ್ಶಗಳ ಪರಿಪಾಲನೆಯಲ್ಲಿ ತೊಡಗಿಕೊಳ್ಳುವ ಮೂಲಕ ಮಹಾನ್‌ಶಕ್ತಿಗೆ ಗೌರವಸಮರ್ಪಣೆ (Valmiki Jayanti Challakere) ಮಾಡಬೇಕೆಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಅವರು, ಗುರುವಾರ ನಗರದ ವಾಲ್ಮೀಕಿ ಕಲ್ಯಾಣಮಂಟಪದಲ್ಲಿ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಸಮುದಾಯದ ಮುಖಂಡರು ಹಮ್ಮಿಕೊಂಡಿದ್ದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಾವಿರಾರು ವರ್ಷಗಳ ಹಿಂದೆಯೇ ಮಾನವೀಯ ಮೌಲ್ಯ, ಸಮಾನತೆ, ಸೌಹಾರ್ಧತೆಯ ಬಗ್ಗೆ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿದ ಮಹರ್ಷಿ ವಾಲ್ಮೀಕಿಯವರು ಸಮಸ್ತ ಮಾನವ (Valmiki Jayanti Challakere) ಸಮಾಜಕ್ಕೆ ಆದರ್ಶಪ್ರಾಯರು. ವಾಲ್ಮೀಕಿಯವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕೆಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ ರೇಹಾನ್ ಪಾಷ, ಇಂದು ನಾವೆಲ್ಲರೂ ಮಗರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮದಮೂಲಕ ಅವರು ನಾಡಿಗೆ ಸಲ್ಲಿಸಿದ ಸೇವೆಗಳನ್ನು ಸ್ಮರಿಸುವ ಕಾರ್ಯ ಮಾಡಲಾಗುತ್ತಿದೆ. ಸರ್ಕಾರ ವಾಲ್ಮೀಕಿಯವರ ಚಿಂತನೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಯಶಸ್ವಿಹೆಜ್ಜೆ ಇಟ್ಟಿದೆ. ಪ್ರಸ್ತುತ ವರ್ಷ ವಾಲ್ಮೀಕಿ ಸಮುದಾಯದಲ್ಲಿ ತಮ್ಮ ಸೇವಾಕಾರ್ಯದ (Valmiki Jayanti Challakere) ಮೂಲಕ ಗುರುತಿಸಿಕೊಂಡ ಐವರಿಗೆಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದರು.

ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸವಿಭಾಗದ ಸಹಪ್ರಾಧ್ಯಾಪಕಿ ಡಾ.ಜಯಮ್ಮ, ಮಹರ್ಷಿ ವಾಲ್ಮೀಕಿಯವರ ಬದುಕನ್ನು ಅರ್ಥಗರ್ಭಿತವಾಗಿ ವಿವರಿಸಿದರು.

ಇದನ್ನೂ ಓದಿ: ತನ್ನ ಹೆಬ್ಬೆರಳನ್ನೇ ಗುರು ಕಾಣಿಕೆಯಾಗಿ ಕೊಟ್ಟ ಸಮಾಜ ವಾಲ್ಮೀಕಿ ಸಮಾಜ: ಸಚಿವ ಡಿ.ಸುಧಾಕರ್ | Valmiki Jayanti Chitradurga

ವಾಲ್ಮೀಕಿ ಕಲ್ಯಾಣಮಂಟಪ ಟ್ರಸ್ಟ್ ಅಧ್ಯಕ್ಷ ಎಚ್.ಎಂ.ಮಲ್ಲಪ್ಪನಾಯಕ, ಕಾರ್ಯದರ್ಶಿ ತಿಪ್ಪೇಸ್ವಾಮಿ, ಚನ್ನಂಗಿರಂಗಸ್ವಾಮಿ, ಯುವ ಮುಖಂಡ ಕೆ.ಟಿ.ಕುಮಾರಸ್ವಾಮಿ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಬಿಜೆಪಿ ಮುಖಂಡರಾದ ಬಾಳೆಮಂಡಿರಾಮದಾಸ್, ಡಾ.ನಾಗೇಂದ್ರನಾಯಕ, ನಗರಸಭಾ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ, ಸದಸ್ಯ ಎಸ್.ಜಯಣ್ಣ, ವೆಂಕಟೇಶ್, ರಮೇಶ್‌ಗೌಡ, ಕೆ.ವೀರಭದ್ರಪ್ಪ, ಸುಮಭರಮಣ್ಣ, ಸಿ.ಶ್ರೀನಿವಾಸ್, ಸಿ.ಟಿ.ವೀರೇಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ, ಸಿ.ನಾಗರಾಜು, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಂ.ಟಿ.ಶಿವರಾಜು, ಪೌರಾಯುಕ್ತ ಜಗರೆಡ್ಡ್ಪಿ, ಇಒ ಶಶಿಧರ, ಮಹಿಳಾ ಸಂಘದ ಅಧ್ಯಕ್ಷೆ ಯಶೋಧಮ್ಮ, ಕಾರ್ಯದರ್ಶಿ ಸೂರ್ಯಪ್ರಭಾ, ಎಲ್‌ಐಸಿತಿಪ್ಪೇಸ್ವಾಮಿ, ಸೌಭಾಗ್ಯಮ್ಮ, ಬಿಇಒ ಕೆ.ಎಸ್.ಸುರೇಶ್, ಸೂರನಾಯಕ, ಜೆ.ರಘುವೀರನಾಯಕ, ಸಿ.ಟಿ.ಶ್ರೀನಿವಾಸ್, ಡಾ.ಲೋಕೇಶ್, ಸಿ.ಗುರುಸ್ವಾಮಿ, ಸಂದೀಪನಾಯಕ, ಪಿ.ತಿಪ್ಪೇಸ್ವಾಮಿ, ಬಡಗಿಪಾಪಣ್ಣ, ಡಾ.ಜಿತಿಪ್ಪೇಸ್ವಾಮಿ, ಡಾ.ಲೋಕೇಶ್, ಟಿ.ಜೆ.ತಿಪ್ಪೇಸ್ವಾಮಿ, ಗಾಡಿತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:ChallakereChitradurga NewsKannada Newskannada suddiMLANammajana.comT RaghumurthyValmiki Jayanthi Challakereಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಟಿ ರಘುಮೂರ್ತಿನಮ್ಮಜನ.ಕಾಂವಾಲ್ಮೀಕಿ ಜಯಂತಿ ಚಳ್ಳಕೆರೆಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ತನ್ನ ಹೆಬ್ಬೆರಳನ್ನೇ ಗುರು ಕಾಣಿಕೆಯಾಗಿ ಕೊಟ್ಟ ಸಮಾಜ ವಾಲ್ಮೀಕಿ ಸಮಾಜ: ಸಚಿವ ಡಿ.ಸುಧಾಕರ್ | Valmiki Jayanti Chitradurga
Next Article ಚಳ್ಳಕೆರೆ ಗೇಟ್‍ನಲ್ಲಿ ವಾಲ್ಮೀಕಿ ವೃತ್ತಕ್ಕೆ ನಗರಸಭೆಯಿಂದ ಅಗತ್ಯ ಕ್ರಮ: ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ | Valmiki Circle
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?