Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಿ.ವಿ.ಸಾಗರ ಜಲಾಶಯಕ್ಕೆ ಹರಿದು ಬರುತ್ತಿರುವ ಭದ್ರೆ : Vanivilasa sagara
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಿ.ವಿ.ಸಾಗರ ಜಲಾಶಯಕ್ಕೆ ಹರಿದು ಬರುತ್ತಿರುವ ಭದ್ರೆ : Vanivilasa sagara
ಇಂದಿನ ಸುದ್ದಿ

ವಿ.ವಿ.ಸಾಗರ ಜಲಾಶಯಕ್ಕೆ ಹರಿದು ಬರುತ್ತಿರುವ ಭದ್ರೆ : Vanivilasa sagara

Nammajana Sub Editor
Last updated: 29 July 2025 12:32 PM
By Nammajana Sub Editor 3 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 29-07-2025

ನಮ್ಮಜನ.ಕಾಂ, ಹೊಸದುರ್ಗ: ಭದ್ರಾ(Vanivilasa sagara) ಜಲಾಶಯದ ಶಾಂತಿಪುರ ಪಂಪ್ ಹೌಸ್ ಮುಖ್ಯ ಕಾಲುವೆಯಿಂದ ವಿ.ವಿ.ಸಾಗರ ಜಲಾಶಯದತ್ತ ಮೊನ್ನೆ(ಭಾನುವಾರ)ಯಿಂದ ನೀರು ಹರಿದು ಬರುತ್ತಿದ್ದು, ಜಿಲ್ಲೆಯ ರೈತರಲ್ಲಿ ಕೃಷಿ ಕಾರ್ಯಗಳಿಗೆ ಮತ್ತಷ್ಟು ಭರವಸೆ ಹೆಚ್ಚಿಸಿದೆ. ಮಧ್ಯ ಕರ್ನಾಟಕದ ಜಲಪಾತ್ರೆ ಎಂದೇ ಖ್ಯಾತಿ ಪಡೆದಿರುವ ವಾಣಿ ವಿಲಾಸ ಸಾಗರ ಜಲಾಶಯ 4ನೇ ಬಾರಿಗೆ ಕೋಡಿಬೀಳುವ ಮುನ್ಸೂಚನೆ ಕಾಣುತ್ತಿದೆ. ಜುಲೈ 27ರಿಂದ 4 ತಿಂಗಳವರೆಗೆ ನೀರು ಬರಲಿದ್ದು, ವರ್ಷದಲ್ಲಿ 2ನೇ ಬಾರಿ ಜಲಾಶಯ ತುಂಬಿ ಕೋಡಿ ಬೀಳಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ.

ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಜಲಾಶಯ ನಿರ್ಮಾಣವಾಗಿ 89 ವರ್ಷಗಳ ನಂತರ ಮೊದಲ ಬಾರಿಗೆ 1934 ರಲ್ಲಿ ಮೊದಲ ಬಾರಿಗೆ ಕೋಡಿ ಬಿದ್ದಿತ್ತು. ಆದಾದ ಮೇಲೆ 2022, ಸೆ. 2ರಂದು ಡ್ಯಾಂ 2ನೇ ಬಾರಿಗೆ ತುಂಬಿ ಕೋಡಿ ಬಿದ್ದಿತ್ತು. 2025ರ ಜ. 12ರಂದು 3ನೇ ಬಾರಿ ತುಂಬಿ ಕೋಡಿ ಬೀಳುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಾಣವಾಗಿತ್ತು. ಪ್ರಸ್ತುತ ಇದೀಗ, 124.ಅಡಿಯಷ್ಟು ನೀರಿನ ಸಂಗ್ರಹವಿದ್ದು, ಜಲಾಶಯ ತುಂಬಲು ಇನ್ನೂ 6.ಅಡಿ ಮಾತ್ರ ಬಾಕಿಯಿದೆ.

ಜುಲೈ 27ರಿಂದ 4 ತಿಂಗಳು ಭದ್ರಾದಿಂದ ನೀರು ಹರಿದರೆ ತರೀಕೆರೆ, ಕಡೂರು, ಅಜ್ಜಂಪುರ ಮತ್ತು ಹೊಸದುರ್ಗ ತಾಲೂಕಿನ ವ್ಯಾಪ್ತಿಯ ಕೆಲವು ಕೆರೆಗಳು ಭರ್ತಿಯಾಗಿ ಒಂದು ವಾರದೊಳಗಾಗಿ ಜಲಾಶಯಕ್ಕೆ ನೀರು ಬಂದು ಸೇರಲಿವೆ. ನಿತ್ಯ 600.ಕ್ಯುಸೆಕ್ ನಷ್ಟು ನೀರು ಜಲಾಶಯದತ್ತ ಬರಲಿದೆ.

ಈಗಾಗಲೇ, ಮದಗದಕೆರೆ(Vanivilasa sagara) ಭರ್ತಿಯಾಗಿ ಕೋಡಿ ಬಿದ್ದಿದ್ದು, ಕೆರೆಯ ನೀರು ವೇದಾವತಿ ನದಿಯ ಒಡಲು ಸೇರಿದೆ. ಜೊತೆಗೆ ಹಾಸನ, ಚಿಕ್ಕಮಗಳೂರು ಭಾಗದಲ್ಲಿ ಉತ್ತಮ ಮಳೆ ಬರುತ್ತಿದ್ದು, ವಿವಿ ಸಾಗರ ಜಲಾಶಯದ ಒಳಹರಿವು ಕೂಡ ಹೆಚ್ಚಾಗಲಿದೆ. ಇದರಿಂದಾಗಿ 2025 ರೊಳಗೆಯೇ ಜಲಾಶಯ ಭರ್ತಿಯಾಗಲಿದೆ. ಇತಿಹಾಸದಲ್ಲಿ ಜಲಾಶಯ 4ನೇ ಬಾರಿಗೆ ಕೋಡಿ ಬಿದ್ದು, ಐತಿಹಾಸಿಕ ದಾಖಲೆ ನಿರ್ಮಾಣ ಮಾಡಲಿದೆ ಎಂಬ ಲೆಕ್ಕಾಚಾರ ಜನರದ್ದಾಗಿದೆ.

ಇದನ್ನೂ ಓದಿ: ವಿ ವಿ ಸಾಗರ ನೀರಿನ ಮಟ್ಟದಲ್ಲಿ ಇಳಿಕೆ 

4.25 ಟಿಎಂಸಿ ನೀರು ಹರಿಸಲು ಆದೇಶ

ಈಗಾಗಲೇ, ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಿಂದ ನೀರು ಹರಿದು ಬರುತ್ತಿದ್ದು, ನೀರಿನ ಹಾದಿಯ ಹಳ್ಳ, ಕೊಳ್ಳಗಳ ಮೂಲಕ ಭದ್ರೆ ವೇದಾವತಿ ನದಿಯ ಒಡಲು ಸೇರಲಿದ್ದಾಳೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಕೆರೆ ತುಂಬಿಸಲು 0.24 ಟಿಎಂಸಿ ಅಡಿ ನೀರು ಹಂಚಿಕೆ ಮಾಡಲಾಗಿದೆ. ಅದರಂತೆಯೇ, ಹೊಸದುರ್ಗ ತಾಲ್ಲೂಕಿನ ಕೆರೆ ತುಂಬಿಸಲು 0.50 ಅಡಿ ನೀರು ಹಂಚಿಕೆ ಮಾಡಲಾಗಿದ್ದು, ವಿವಿಧ ಕೆರೆ, ಬ್ಯಾರೇಜ್‌ಗಳು ತುಂಬಿದ ನಂತರವೇ ನೀರು ವಿ.ವಿ ಸಾಗರ ಸೇರಲಿದೆ. ಒಟ್ಟಾರೆ 4.25 ಟಿ.ಎಂ.ಸಿ ಅಡಿ ನೀರು ಹರಿಸಲು ವಿಶ್ವೇಶ್ವರಯ್ಯ ಜಲನಿಗಮ ಆದೇಶ ನೀಡಿದೆ.

ರಾಣಿಯ ಒಡವೆ ಅಡವಿಟ್ಟು ಡ್ಯಾಮ್ ನಿರ್ಮಾಣ

ಜನರು ಮತ್ತು ಜಾನುವಾರುಗಳಿಗೆ(Vanivilasa sagara) ಕುಡಿಯುವ ನೀರಿಗೂ ತತ್ವಾರ ಬಂದಂತಹ ಪರಿಸ್ಥಿತಿಯಲ್ಲಿ ಮೈಸೂರು ಮಹಾರಾಜರು ಮಾರಿಕಣಿವೆಯ ಎರಡು ಗುಡ್ಡಗಳ ನಡುವೆ ವಾಣಿವಿಲಾಸ ಸಾಗರ ಜಲಾಶಯವನ್ನು 1907 ರಲ್ಲಿ ನಿರ್ಮಿಸಿದರು. ಜಲಾಶಯದ ನಿರ್ಮಾಣದ ಕಾಲದಲ್ಲಿ ಸಂಪನ್ಮೂಲದ ಕೊರತೆ ಉಂಟಾಗಿದ್ದರಿಂದ ಮಹಾರಾಣಿಯವರ ಒಡವೆ ಅಡವಿಟ್ಟು ಹಣ ಹೊಂದಿಸಿ, ಜಲಾಶಯ ನಿರ್ಮಾಣ ಕಾರ್ಯ ಪೂರ್ಣಗೊಳಿಸಿದರು ಎನ್ನಲಾಗುತ್ತಿದೆ.

ಇದನ್ನೂ ಓದಿ: ಶಾಸಕರ ಮಾರ್ಗದರ್ಶನದಲ್ಲಿ ನಗರಸಭೆಯಿಂದ ಚಳ್ಳಕೆರೆ ನಗರ ಅಭಿವೃದ್ದಿ: ಅಧ್ಯಕ್ಷೆ ಶಿಲ್ಪ ಮುರುಳೀಧರ

ಹಿನ್ನೀರಿನ ಜನರಲ್ಲಿ ಆತಂಕ

ವಿವಿ ಸಾಗರ ಜಲಾಶಯ ಭರ್ತಿಯಾಗುವುದು ಜಿಲ್ಲೆಯ ರೈತರಲ್ಲಿ ಸಂತಸವನ್ನುಂಟು ಮಾಡಿದರೆ, ಹಿನ್ನೀರಿನ ಭಾಗದ ಜನರಲ್ಲಿ ಆತಂಕವನ್ನುಂಟು ಮಾಡುತ್ತದೆ. 2022ರಲ್ಲಿ ಡ್ಯಾಮ್ ಕೋಡಿ ಬಿದ್ದಾಗ ಅಧಿಕ ಪ್ರಮಾಣದ ನೀರು ಬಂದಿದ್ದರ ಪರಿಣಾಮ ಹಿನ್ನೀರಿನ ಕೆಲ ಗ್ರಾಮಗಳ ಜನರು ಮನೆ-ಜಮೀನುಗಳನ್ನು ಕಳೆದುಕೊಂಡು ಕಣ್ಣೀರು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ, ಜಲಾಶಯ ಭರ್ತಿಯಾಗುವ ನಿರೀಕ್ಷೆಯಿದ್ದು, ಮತ್ತೆ ಅಂತಹ ಸಮಸ್ಯೆಗಳು ಎದುರಾಗದಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿಸಬೇಕಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:Bhadra ReservoirChitradurgaChitradurga NewsKannada Newskannada suddiNammajana.comReservoirVani Vilas SagarVV Sagarಕನ್ನಡ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಲಾಶಯನಮ್ಮಜನ.ಕಾಂಭದ್ರಾ ಜಲಾಶಯವಾಣಿವಿಲಾಸ ಸಾಗರವಿವಿ ಸಾಗರ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Gold Rate | ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
Next Article ಸರ್ಕಾರಕ್ಕೆ ಯೂರಿಯಾ ಬಿಸಿ, ಸರ್ಕಾರದ ವಿರುದ್ಧ BJP ಕಿಡಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?