Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವೇದಾಂತ ಮೈನ್ಸ್ | ಸ್ಥಳೀಯರಿಗೆ ಉದ್ಯೋಗ ನಿರಾಕರಣೆಗೆ ಸಂಘಟನೆಗಳ ಅಕ್ರೋಶ | Vedanta Mines
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವೇದಾಂತ ಮೈನ್ಸ್ | ಸ್ಥಳೀಯರಿಗೆ ಉದ್ಯೋಗ ನಿರಾಕರಣೆಗೆ ಸಂಘಟನೆಗಳ ಅಕ್ರೋಶ | Vedanta Mines
ಇಂದಿನ ಸುದ್ದಿ

ವೇದಾಂತ ಮೈನ್ಸ್ | ಸ್ಥಳೀಯರಿಗೆ ಉದ್ಯೋಗ ನಿರಾಕರಣೆಗೆ ಸಂಘಟನೆಗಳ ಅಕ್ರೋಶ | Vedanta Mines

Editor Nammajana
Last updated: 9 December 2024 02:46
By Editor Nammajana 3 Min Read
Share
SHARE

Chitradurga news|nammajana.com|9-12-2024

ನಮ್ಮಜನ.ಕಾಂ, ಚಿತ್ರದುರ್ಗ: ಅಕ್ರಮವಾಗಿ ಅದಿರು ಸಾಗಾಟ ಮಾಡುತ್ತಿರುವ ವೇದಾಂತ ಮೈನ್ಸ್ ವಿರುದ್ದ ವಿವಿಧ (Vedanta Mines) ಸಂಘಟನೆಗಳ ಕಾರ್ಯಕರ್ತರು ಭಾನುವಾರದಿಂದ ಧರಣಿ ಸತ್ಯಾಗ್ರಹ ಕುಳಿತಿದ್ದಾರೆ.

ಭೀಮಸಮುದ್ರದ ದಿಂಡದಹಳ್ಳಿ ಸಮೀಪ ಧರಣಿ ಕುಳಿತಿರುವವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಫೋಟೋ ಮುಂದಿಟ್ಟುಕೊಂಡು ಸ್ಥಳೀಯರಿಗೆ ಉದ್ಯೋಗ ನೀಡದೆ ಹೊರ ರಾಜ್ಯದವರನ್ನು ಕರೆಸಿಕೊಂಡಿರುವುದರ ವಿರುದ್ದ ಧಿಕ್ಕಾರಗಳನ್ನು ಕೂಗಿ ನ್ಯಾಯಕ್ಕಾಗಿ ಪಟ್ಟು ಹಿಡಿದರು.

2013 ರಲ್ಲಿ ಅಂದಿನ ಜಿಲ್ಲಾಧಿಕಾರಿಯಾಗಿದ್ದ ವಿ.ಪಿ.ಇಕ್ಕೇರಿ ವೇದಾಂತ ಗಣಿ ಮೈನ್ಸ್, ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಸಭೆ ನಡೆಸಿ 40:60 (Vedanta Mines) ಅನುಪಾತದಡಿ ಅದಿರು ಸಾಗಾಣಿಕೆಯಾಗಣಿಕೆ ಮಾಡಬೇಕೆಂದು ಆದೇಶಿಸಿದ್ದರು. ಆದರೆ ವೇದಾಂತ

ಗಣಿ ಮೈನ್ಸನವರು ನಿಯಮಗಳನ್ನು ಮೀರಿ ಸಂಪೂರ್ಣವಾಗಿ ಅದಿರನ್ನು ರೈಲಿನಲ್ಲಿ ಸಾಗಾಗಿಸುತ್ತಿದ್ದಾರೆ. ಇದರಿಂದ ಎರಡು ಸಾವಿರಕ್ಕೂ ಹೆಚ್ಚು ಲಾರಿ ಮಾಲೀಕರು, ಚಾಲಕರುಗಳು ಜೀವನಕ್ಕೆ ದಾರಿ ತೋಚದೆ ಬೀದಿಗೆ ಬಿದ್ದಿದ್ದಾರೆ. ಖಾಸಗಿ ಫೈನಾನ್ಸ್‍ಗಳಲ್ಲಿ ಸಾಲ ಮಾಡಿ ಲಾರಿಗಳನ್ನು (Vedanta Mines) ಖರೀಧಿಸಿರುವವರು ಮಾಸಿಕ ಕಂತು ಕಟ್ಟಲು ಆಗದೆ ವಿಷ ಕುಡಿಯುವ ಪರಿಸ್ಥಿತಿಗೆ ತಲುಪಿದ್ದಾರೆಂದು ಧರಣಿನಿರತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಭೀಮಸಮುದ್ರದ ಸಿರಾಜ್ ಗೇಟ್-3 ರೋಡ್ ಓಪನ್ ಮಾಡಿ ಲಾರಿಗಳಲ್ಲಿ ಅದಿರು ಸಾಗಾಣಿಕೆಗೆ ಅವಕಾಶ ಕೊಡಬೇಕೆಂದು ಹಲವಾರು ವರ್ಷಗಳಿಂದಲೂ ನಮ್ಮ ಬೇಡಿಕೆಯಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ, ಹೊಳಲ್ಕೆರೆ ವಲಯ ಅರಣ್ಯಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯವರು ವೇದಾಂತ ಮೈನ್ಸ್‍ನೊಂದಿಗೆ ಅಕ್ರಮ (Vedanta Mines) ಅದಿರು ಸಾಗಾಣಿಕೆಗೆ ಕೈಜೋಡಿಸಿದ್ದಾರೆ. ಅರಣ್ಯ ಇಲಾಖೆಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡಿದ್ದು, ದಿನಕ್ಕೆ 25 ಸಾವಿರ ಟನ್ ಅದಿರು ಸಾಗಾಣಿಕೆಯಾಗುತ್ತಿದೆ. ಒಂದು ದಿನಕ್ಕೆ ಏನಿಲ್ಲವೆಂದರೂ ನೂರು ಕೋಟಿ ರೂ ವಹಿವಾಟು ನಡೆಯುತ್ತಿದೆ ಎಂದು ಆಪಾದಿಸಿದರು.

ಲಾರಿಗಳಲ್ಲಿ ಅದಿರು ಸಾಗಾಣಿಕೆ ಮಾಡುವುದನ್ನು ನಿಲ್ಲಿಸಿ ಮೂರು ವರ್ಷಗಳಾಗಿದೆ. ಇದನ್ನೆ ನೆಚ್ಚಿಕೊಂಡಿರುವ ಸಾವಿರಾರು ಕುಟುಂಬಗಳು ಜೀವನಕ್ಕೆ ದಾರಿ ಕಾಣದೆ ಚಿಂತಾಕ್ರಾಂತರಾಗಿದ್ದಾರೆ. ಸ್ಥಳೀಯರನ್ನು ಕಡೆಗಣಿಸಿ ಅನ್ಯ ರಾಜ್ಯದವರನ್ನು ಇಲ್ಲಿಗೆ ಕರೆಸಿಕೊಂಡಿರುವ ವೇದಾಂತ ಗಣಿ ಮೈನ್ಸ್‍ನವರು ರಾತ್ರಿಯಿಡಿ ಅದಿರು ಸಾಗಾಟ (Vedanta Mines) ಮಾಡುತ್ತಿರುವುದರಿಂದ ಮಾರ್ಗ ಮಧ್ಯದಲ್ಲಿ ಸಾಕಷ್ಟು ಕಾಡು ಪ್ರಾಣಿಗಳು ಬಲಿಯಾಗುತ್ತಿವೆ. ಜಿಲ್ಲಾಡಳಿತ ಇತ್ತ ಗಮನ ಹರಿಸಿ ಅಕ್ರಮ ಅದಿರು ಸಾಗಾಣಿಕೆಗೆ ಕಡಿವಾಣ ಹಾಕಬೇಕೆಂದು ಮನವಿ ಮಾಡಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಕಕ್ಷ ಟಿ.ರಮೇಶ್ ಧರಣಿಯನ್ನುದ್ದೇಶಿಸಿ ಮಾತನಾಡುತ್ತ ಸ್ಥಳೀಯರನ್ನು ನಿರ್ಲಕ್ಷಿಸಿ ಉತ್ತರ ಭಾರತದಿಂದ ಜನರನ್ನು ಕರೆಸಿಕೊಂಡು ಅಕ್ರಮವಾಗಿ ರೈಲಿನ ಮೂಲಕ ವೇದಾಂತ ಗಣಿ ಮೈನ್ಸ್‍ನವರು ಅದಿರು ಸಾಗಾಣಿಕೆ ಮಾಡುತ್ತಿರುವುದನ್ನು ಪ್ರಶ್ನಿಸುವ ಲಾರಿ ಮಾಲೀಕರು, ಚಾಲಕರುಗಳ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆ. ಇದಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಅರಣ್ಯ ಇಲಾಖೆಯ ಕುಮ್ಮಕ್ಕಿದೆ. ಗಣಿಗಾರಿಕೆಗೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡಿರುವುದರಿಂದ ಗಿಡ-ಮರಗಳ ನಾಶವಾಗುತ್ತಿದೆ. ಇದಕ್ಕೆ ಪರ್ಯಾಯವಾಗಿ ಸಸಿಗಳನ್ನು ಬೆಳೆಸಬೇಕಿತ್ತು. (Vedanta Mines) ಇದ್ಯಾವುದರ ಕಡೆ ಗಮನ ಹರಿಸದ ವೇದಾಂತ ಮೈನ್ಸ್‍ನವರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಲಾರಿಗಳ ಮೂಲಕ ಅದಿರು ಸಾಗಾಣಿಕೆಗೆ ಅವಕಾಶ ಕೊಡುವತನಕ ಧರಣಿಯಿಂದ ಹಿಂದೆ ಸರಿಯುವುದಿಲ್ಲವೆಂದು ಎಚ್ಚರಿಸಿದರು.

ಇದನ್ನೂ ಓದಿ: ವಿ ವಿ ಸಾಗರ | 9 ಡಿಸೆಂಬರ್ 2024 | ಸೋಮವಾರದ ನೀರಿನ ಮಟ್ಟ | Vani Vilasa Sagara Dam

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಮ್, ವೀರಶೈವ ಲಿಂಗಾಯಿತ ಯುವ ವೇದಿಕೆ ಅಧ್ಯಕ್ಷ ಹೆಚ್.ಎಂ.ಮಂಜುನಾಥ್, ಹನೀಸ್, ಸೈಯದ್ ಖುದ್ದೂಸ್, ಲಾರಿ ಮಾಲೀಕರ ಅಸೋಸಿಯೇಷನ್ ಅಧ್ಯಕ್ಷ ಇಮ್ರಾನ್(ಬುಳ್ಳ) ಶಿವರಾಜ್, ವಿಜಯಕುಮಾರ್, ನಾಗರಾಜ್, ವಸೀಂ, ಪ್ರಕಾಶ್ ರಾಮನಾಯ್ಕ ಇನ್ನು ಅನೇಕರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:BhimasamudraChitradurga NewsEmployment for NativesFoldKannada Newskannada suddiNammajana.comOrganizationsoutrageProtestVedanta Minesಆಕ್ರೋಶಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪಟ್ಟುಪ್ರತಿಭಟನೆಭೀಮಸಮುದ್ರವೇದಾಂತ ಮೈನ್ಸ್ಸಂಘಟನೆಗಳುಸ್ಥಳೀಯರಿಗೆ ಉದ್ಯೋಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಿ ವಿ ಸಾಗರ | 9 ಡಿಸೆಂಬರ್ 2024 | ಸೋಮವಾರದ ನೀರಿನ ಮಟ್ಟ | Vani Vilasa Sagara Dam
Next Article ತರಕಾರಿ ಬೆಲೆ ಗಗನಕ್ಕೆ KG 500 ರೂ ಮುಟ್ಟಿದ ಬೆಳ್ಳುಳ್ಳಿ, ನುಗ್ಗೆ | Vegetable price
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?