
Chitradurga news|nammajana.com|10-8-2024
ನಮ್ಮಜನ.ಕಾಂ, ಚಳ್ಳಕೆರೆ: ನಗರದ ಅರಣ್ಯ ಇಲಾಖೆಯಲ್ಲಿ ಕಳೆದ ಎರಡು ವರ್ಷಗಳಿಂದ ವಲಯ ಅರಣ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಹುಗುಣ ಇವರನ್ನು ಅರಣ್ಯ (Zonal Forest Officer) ಇಲಾಖೆಯ ಬೆಂಗಳೂರಿನ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ದಾವಣಗೆರೆ ವಲಯ ಅರಣ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ವಿ.ಮಂಜುನಾಥರವರನ್ನು ಚಳ್ಳಕೆರೆ ವಲಯ ಅರಣ್ಯಾಧಿಕಾರಿಯಾಗಿ ನೇಮಿಸಿ ಸರ್ಕಾರ (Zonal Forest Officer) ಆದೇಶ ಹೊರಡಿಸಿದ್ದು, ಶುಕ್ರವಾರ ಎಸ್.ವಿ.ಮಂಜುನಾಥ ಅವರು ಬಹುಗುಣರವರಿಂದ ಅಧಿಕಾರ ಸ್ವೀಕರಿಸಿದರು.

ಇದನ್ನೂ ಓದಿ: ಜಮೀನಿನಲ್ಲಿ ಹಾವು ಕಚ್ಚಿ ವ್ಯಕ್ತಿ ಸಾವು | Death by snake bite
ಕಚೇರಿಯ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ವರ್ಗಾವಣೆಗೊಂಡ ಬಹುಗುಣ ಹಾಗೂ ನೂತನವಾಗಿ ಅಧಿಕಾರ ವಹಿಸಿಕೊಂಡು ಮಂಜುನಾಥರವರನ್ನು ಸನ್ಮಾನಿಸಿ (Zonal Forest Officer) ಅಭಿನಂದಿಸಿದರು. ಈ ಸಂದರ್ಭದಲ್ಲಿ ವಸಂತಕುಮಾರ್, ರಾಜೇಶ್, ಇನಾಯಿತ್ ಮುಂತಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ: ದಿನ ಭವಿಷ್ಯ 10-8-2024 | Dina Bhavishya